ಕರ್ನಾಟಕ ಪರೀಕ್ಷಾ ಮಂಡಳಿಯ ಕೈ ತಪ್ಪಿನಿಂದಾಗಿ ಅಂಕಪಟ್ಟಿಗಳಲ್ಲಿನ ಮಾಹಿತಿಯಲ್ಲಿ ಉಂಟಾದ ದೋಷಗಳನ್ನು ಸರಿಪಡಿಸಲು ವಿದ್ಯಾರ್ಥಿಗಳು ಮತ್ತು ಪೋಷಕರು ಇಂದಿಗೂ ಪರದಾಡುತ್ತಿದ್ದಾರೆ. ಇತ್ತೀಚೆಗೆ ಮಂಡಳಿಯು ಈ ತಿದ್ದುಪಡಿ ಶುಲ್ಕವನ್ನು ಹೆಚ್ಚಿಸಿರುವುದರಿಂದ, ವಿದ್ಯಾರ್ಥಿಗಳು ಹೆಚ್ಚಿನ ಮೊತ್ತವನ್ನು ಪಾವತಿಸಬೇಕಾದ ಪರಿಸ್ಥಿತಿ ಎದುರಾಗಿದೆ.
ರಾಜ್ಯದಲ್ಲಿ ಎಸ್,ಎಸ್,ಎಲ್,ಸಿ ಮತ್ತು ದ್ವಿತೀಯ ಪಿಯುಸಿ ಅಂಕಪಟ್ಟಿಗಳ ತಿದ್ದುಪಡಿಗೆ ನಿರಂತರವಾಗಿ ಅರ್ಜಿಗಳು ಮಂಡಳಿಗೆ ಸಲ್ಲೇೆಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ತಿದ್ದುಪಡಿ ಶುಲ್ಕವನ್ನು ಪರಿಷ್ಕರಿಸಿ ₹1,600ಕ್ಕೆ ಏರಿಸಿದೆ.
ಅಂಕಪಟ್ಟಿಗಳಲ್ಲಿ ಅಭ್ಯರ್ಥಿಯ ಹೆಸರು, ತಂದೆಯ ಹೆಸರು, ತಾಯಿಯ ಹೆಸರು, ಭಾವಚಿತ್ರ, ಲಿಂಗ, ಮಾಧ್ಯಮ, ಮತ್ತು ಜನ್ಮ ದಿನಾಂಕದಂತಹ ಪ್ರಮುಖ ಮಾಹಿತಿಗಳು ತಪ್ಪಾಗಿ ಮುದ್ರಿತವಾಗಿದ್ದು, ಇದು ವಿದ್ಯಾರ್ಥಿಗಳ ಶೈಕ್ಷಣಿಕ ಮುಂದುವರಿಕೆ ಮತ್ತು ಉದ್ಯೋಗಾವಕಾಶಗಳಿಗೆ ತೀವ್ರ ಅಡಚಣೆ ಉಂಟುಮಾಡುತ್ತಿದೆ.
ತಿದ್ದುಪಡಿ ಪ್ರಕ್ರಿಯೆ:
ಅಂಕಪಟ್ಟಿ ತಿದ್ದುಪಡಿ ಮಾಡಲು, ವಿದ್ಯಾರ್ಥಿಗಳು ಅರ್ಜಿಯೊಂದಿಗೆ ಕೆಳಗಿನ ದಾಖಲೆಗಳನ್ನು ಮಂಡಳಿಗೆ ಲಗತ್ತಿಸಬೇಕಾಗಿದೆ:
1. ಬ್ಯಾಂಕ್ನಲ್ಲಿ ಪಾವತಿಸಿದ ಮೂಲ ಕೆ-2 ಚಲನ್ ಪ್ರತಿ.
2. ಎಸ್ಸೆಸೆಲ್ಸಿ ಅಂಕಪಟ್ಟಿಯ ದೃಢೀಕೃತ ಪ್ರತಿ.
3. ದ್ವಿತೀಯ ಪಿಯುಸಿಯ ಮೂಲ ಅಂಕಪಟ್ಟಿ.
ಈ ದಾಖಲೆಗಳನ್ನು ಸಲ್ಲಿಸಿದ ನಂತರ, ಮಂಡಳಿಯು ಪರಿಷ್ಕೃತ ಅಂಕಪಟ್ಟಿ ನೀಡುತ್ತದೆ.
ಶುಲ್ಕ ಹೆಚ್ಚಳದ ಪರಿಣಾಮ:
ಈ ಹೊಸ ಆದೇಶದ ಪ್ರಕಾರ, ವಿದ್ಯಾರ್ಥಿಗಳಿಗೆ ತಿದ್ದುಪಡಿ ಪ್ರಕ್ರಿಯೆಗೆ ₹1,600 ಪಾವತಿಸಬೇಕಾಗಿದೆ, ಇದು ಮೊದಲಿನ ಶುಲ್ಕಕ್ಕಿಂತ ಹೆಚ್ಚಿನದು. ಅಂಕಪಟ್ಟಿ ತಿದ್ದುಪಡಿ ಸಂಬಂಧಿಸಿದ ಈ ನಿರ್ಧಾರವು ರಾಜ್ಯಾದ್ಯಂತ ವಿದ್ಯಾರ್ಥಿ ಸಮುದಾಯದ ಮೇಲೆ ಆರ್ಥಿಕ ಹೊರೆ ಹೆಚ್ಚಿಸಲಿದೆ.
ಮಂಡಳಿಯ ಅಧ್ಯಕ್ಷರು ಈ ಕುರಿತು ಆದೇಶ ಹೊರಡಿಸಿದ್ದಾರೆ ಮತ್ತು ನಿಯಮಾನುಸಾರ ತಿದ್ದುಪಡಿ ಪ್ರಕ್ರಿಯೆ ಮುಂದುವರಿಯಲಿದೆ.
ಬೆಂಗಳೂರು ನಗರದ ಕೆಂಗೇರಿ ಠಾಣಾ ವ್ಯಾಪ್ತಿಯ ಸುಭಾಷ್ ನಗರದಲ್ಲಿ ನಡೆದ ಭೀಕರ ಘಟನೆ ಒಂದು ಕುಟುಂಬದ ದುಸ್ಥಿತಿಯನ್ನು ಬಯಲಿಗೆಳೆದಿದೆ. ಮದ್ಯಪಾನದ…
ಅಮೆರಿಕದ ಜಾರ್ಜಿಯಾ ರಾಜ್ಯದಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ಪ್ರೌಢಶಾಲಾ ಶಿಕ್ಷಕಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ…
ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್ಡಿಪಿಆರ್) ಇಲಾಖೆಯ ಸಹಾಯಕ…
ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…
ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…