ಕರ್ನಾಟಕ ಪರೀಕ್ಷಾ ಮಂಡಳಿಯ ಕೈ ತಪ್ಪಿನಿಂದಾಗಿ ಅಂಕಪಟ್ಟಿಗಳಲ್ಲಿನ ಮಾಹಿತಿಯಲ್ಲಿ ಉಂಟಾದ ದೋಷಗಳನ್ನು ಸರಿಪಡಿಸಲು ವಿದ್ಯಾರ್ಥಿಗಳು ಮತ್ತು ಪೋಷಕರು ಇಂದಿಗೂ ಪರದಾಡುತ್ತಿದ್ದಾರೆ. ಇತ್ತೀಚೆಗೆ ಮಂಡಳಿಯು ಈ ತಿದ್ದುಪಡಿ ಶುಲ್ಕವನ್ನು ಹೆಚ್ಚಿಸಿರುವುದರಿಂದ, ವಿದ್ಯಾರ್ಥಿಗಳು ಹೆಚ್ಚಿನ ಮೊತ್ತವನ್ನು ಪಾವತಿಸಬೇಕಾದ ಪರಿಸ್ಥಿತಿ ಎದುರಾಗಿದೆ.
ರಾಜ್ಯದಲ್ಲಿ ಎಸ್,ಎಸ್,ಎಲ್,ಸಿ ಮತ್ತು ದ್ವಿತೀಯ ಪಿಯುಸಿ ಅಂಕಪಟ್ಟಿಗಳ ತಿದ್ದುಪಡಿಗೆ ನಿರಂತರವಾಗಿ ಅರ್ಜಿಗಳು ಮಂಡಳಿಗೆ ಸಲ್ಲೇೆಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ತಿದ್ದುಪಡಿ ಶುಲ್ಕವನ್ನು ಪರಿಷ್ಕರಿಸಿ ₹1,600ಕ್ಕೆ ಏರಿಸಿದೆ.
ಅಂಕಪಟ್ಟಿಗಳಲ್ಲಿ ಅಭ್ಯರ್ಥಿಯ ಹೆಸರು, ತಂದೆಯ ಹೆಸರು, ತಾಯಿಯ ಹೆಸರು, ಭಾವಚಿತ್ರ, ಲಿಂಗ, ಮಾಧ್ಯಮ, ಮತ್ತು ಜನ್ಮ ದಿನಾಂಕದಂತಹ ಪ್ರಮುಖ ಮಾಹಿತಿಗಳು ತಪ್ಪಾಗಿ ಮುದ್ರಿತವಾಗಿದ್ದು, ಇದು ವಿದ್ಯಾರ್ಥಿಗಳ ಶೈಕ್ಷಣಿಕ ಮುಂದುವರಿಕೆ ಮತ್ತು ಉದ್ಯೋಗಾವಕಾಶಗಳಿಗೆ ತೀವ್ರ ಅಡಚಣೆ ಉಂಟುಮಾಡುತ್ತಿದೆ.
ತಿದ್ದುಪಡಿ ಪ್ರಕ್ರಿಯೆ:
ಅಂಕಪಟ್ಟಿ ತಿದ್ದುಪಡಿ ಮಾಡಲು, ವಿದ್ಯಾರ್ಥಿಗಳು ಅರ್ಜಿಯೊಂದಿಗೆ ಕೆಳಗಿನ ದಾಖಲೆಗಳನ್ನು ಮಂಡಳಿಗೆ ಲಗತ್ತಿಸಬೇಕಾಗಿದೆ:
1. ಬ್ಯಾಂಕ್ನಲ್ಲಿ ಪಾವತಿಸಿದ ಮೂಲ ಕೆ-2 ಚಲನ್ ಪ್ರತಿ.
2. ಎಸ್ಸೆಸೆಲ್ಸಿ ಅಂಕಪಟ್ಟಿಯ ದೃಢೀಕೃತ ಪ್ರತಿ.
3. ದ್ವಿತೀಯ ಪಿಯುಸಿಯ ಮೂಲ ಅಂಕಪಟ್ಟಿ.
ಈ ದಾಖಲೆಗಳನ್ನು ಸಲ್ಲಿಸಿದ ನಂತರ, ಮಂಡಳಿಯು ಪರಿಷ್ಕೃತ ಅಂಕಪಟ್ಟಿ ನೀಡುತ್ತದೆ.
ಶುಲ್ಕ ಹೆಚ್ಚಳದ ಪರಿಣಾಮ:
ಈ ಹೊಸ ಆದೇಶದ ಪ್ರಕಾರ, ವಿದ್ಯಾರ್ಥಿಗಳಿಗೆ ತಿದ್ದುಪಡಿ ಪ್ರಕ್ರಿಯೆಗೆ ₹1,600 ಪಾವತಿಸಬೇಕಾಗಿದೆ, ಇದು ಮೊದಲಿನ ಶುಲ್ಕಕ್ಕಿಂತ ಹೆಚ್ಚಿನದು. ಅಂಕಪಟ್ಟಿ ತಿದ್ದುಪಡಿ ಸಂಬಂಧಿಸಿದ ಈ ನಿರ್ಧಾರವು ರಾಜ್ಯಾದ್ಯಂತ ವಿದ್ಯಾರ್ಥಿ ಸಮುದಾಯದ ಮೇಲೆ ಆರ್ಥಿಕ ಹೊರೆ ಹೆಚ್ಚಿಸಲಿದೆ.
ಮಂಡಳಿಯ ಅಧ್ಯಕ್ಷರು ಈ ಕುರಿತು ಆದೇಶ ಹೊರಡಿಸಿದ್ದಾರೆ ಮತ್ತು ನಿಯಮಾನುಸಾರ ತಿದ್ದುಪಡಿ ಪ್ರಕ್ರಿಯೆ ಮುಂದುವರಿಯಲಿದೆ.
ತಮಿಳುನಾಡು ವಿಧಾನಸಭೆ ಚುನಾವಣೆಯ ಹಿನ್ನಲೆಯಲ್ಲಿ ರಾಜಕೀಯ ಚರ್ಚೆಗಳು ಜೋರಾಗಿದ್ದರೂ, ಈ ಬಾರಿ ಆ ರಾಜ್ಯಕ್ಕಿಂತ ಹೆಚ್ಚು ಸದ್ದು ಮಾಡುತ್ತಿರುವುದು ಕರ್ನಾಟಕದ…
ಪ್ರೀತಿಗೆ ವಯಸ್ಸಿನ ಅಂತರ ಅಡ್ಡಿಯಾಗುವುದಿಲ್ಲ ಎಂಬ ಮಾತು ಮತ್ತೊಮ್ಮೆ ಸತ್ಯವಾಗಿರುವ ಘಟನೆ ಮೈಸೂರಿನಲ್ಲಿ ಬೆಳಕಿಗೆ ಬಂದಿದೆ. 37 ವರ್ಷದ ಮಹಿಳೆ,…
ರಾಜ್ಯದಲ್ಲಿ ಪ್ರೀತಿ-ಪ್ರೇಮಗಳ ಹೆಸರಿನಲ್ಲಿ ನಡೆಯುತ್ತಿರುವ ಅವಾಂತರಗಳು ದಿನೇದಿನೇ ಆತಂಕ ಹುಟ್ಟಿಸುತ್ತಿವೆ. ನಂಬಿಕೆ ಕುಸಿದಾಗ ಸಂಬಂಧಗಳು ಹೇಗೆ ಕ್ರೌರ್ಯಕ್ಕೆ ತಿರುಗುತ್ತವೆ ಎಂಬುದಕ್ಕೆ…
ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಿಂದಿ ವಿಷಯಕ್ಕೆ ಗ್ರೇಡ್ ಬದಲು ಅಂಕ ನೀಡಬೇಕು ಎಂದು ಹೈಕೋರ್ಟ್ ಮತ್ತೊಮ್ಮೆ ಸ್ಪಷ್ಟ ಆದೇಶ ನೀಡಿದೆ.…
ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳ ತನಿಖೆ ನಡೆಸುವ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ (DCRE)ದಲ್ಲಿಯೇ ದಲಿತ…
ಸೋಶಿಯಲ್ ಮೀಡಿಯಾ ರೀಲ್ಸ್ ಮಾಡಲು ಅಪಾಯಕಾರಿ ಸ್ಟಂಟ್ಗೆ ಮುಂದಾದ ಮೂವರು ಯುವಕರು ಭೀಕರ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.…