Latest

ಶಿರಸಿಯಲ್ಲಿ ಯಶಸ್ವಿಯಾಗಿ ನಡೆದ ಸಿಬ್ಬಂದಿ ಸ್ಪಂದನೆ ಕಾರ್ಯಕ್ರಮ..

ಕರ್ನಾಟಕ ರಾಜ್ಯದಲ್ಲಿ ರಾಜ್ಯ ಪೋಲಿಸ್ ಇಲಾಖೆಯ ಉತ್ತರಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾದ ಮಾನ್ಯ ಶ್ರೀ ಎನ್ ವಿಷ್ಣುವರ್ಧನ ಐಪಿಸ್ ಅಧಿಕಾರ ವಹಿಸಿ ಕೊಂಡ ನಂತರ ಮೊದಲ ಬಾರಿಗೆ ಉತ್ತರಕನ್ನಡ ಜಿಲ್ಲೆಯಲ್ಲಿ ಇತಿಹಾಸದ ಪುಟವಾಗುವಂತೆ ಹಾಗೆ ಮೊಟ್ಟ ಮೊದಲ ಬಾರಿಗೆ ಸಿಬ್ಬಂದಿ ಸ್ಪಂದನೆ ಎಂಬ ಕಾರ್ಯಕ್ರಮವನ್ನು ಆಯೋಜಿಸಿ ಕೊಂಡು ಉತ್ತರಕನ್ನಡ ಜಿಲ್ಲೆಯ ಸುಮಾರು ಏಳು ಪೋಲಿಸ್ ಠಾಣೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಗಳ ಅವರ ಜೊತೆ ಸಮಗ್ರವಾಗಿ ಚರ್ಚಿಸಿ ಕುಂದು ಕೊರತೆ ಹಾಗೂ ಬೇಡಿಕೆಗಳನ್ನು ಸಮ ಕ್ಷಮವಾಗಿ ಚರ್ಚಿಸಿ ಆದಷ್ಟು ಬೇಗ ನಿಯಮನು ಸಾರವಾಗಿ ಯಾವುದೇ ವಿಳಂಬವಿಲ್ಲದೆ ಪರಿಹರಿಸಿ ಕೊಡುವುದಾಗಿ ಅಭಿಪ್ರಾಯ ವ್ಯಕ್ತ ಪಡಿಸಿದರು ಹಾಗೂ ಉತ್ತರಕನ್ನಡ ಜಿಲ್ಲೆಯ ಶಿರಸಿ ಉಪ ವಿಭಾಗದ ಸುಮಾರು ಏಳು ಪೋಲಿಸ್ ಠಾಣೆಗಳ ಏಳು ಪೊಲೀಸ್ ಸಿಬ್ಬಂದಿಗಳಾದ,,
(1) ಪ್ರವೀಣ .ಎನ್. ಶಿರಸಿ ನಗರ ಠಾಣೆ
(2) ಗಣಪತಿ ಭಂಟ ಶಿರಸಿ ಹೊಸ ಮಾರುಕಟ್ಟೆ ಠಾಣೆ
(3) ಮಹಾದೇವ ನಾಯ್ಕ ಶಿರಸಿ ಗ್ರಾಮೀಣ ಠಾಣೆ
(4) ಅಣ್ಣಪ್ಪ ಬುಡಿಗೇರ ಮುಂಡಗೋಡ ಠಾಣೆ
(5) ಬಸವರಾಜ ಹಗರಿ ಯಲ್ಲಾಪುರ ಠಾಣೆ
(6) ಮಂಜುನಾಥ ನಡುವಿನಮನಿ ಬನವಾಸಿ ಠಾಣೆ
(7) ಮೊಹಮದ್ ಗೌಸ್ ಅಹಮದ್ ಸಾಬ ಸಿದ್ದಾಪುರ ಪೊಲೀಸ್ ಠಾಣೆ ಇವರುಗಳಿಗೆ 2022ಆಕೊಬರ್ ತಿಂಗಳ ಅತ್ಯುತ್ತಮ ಸಾಧಕ ಎಂಬ ಪ್ರಮಾಣ ಪತ್ರ ನೀಡಿ ಅವರಿಗೆ ಅಭಿನಂದೆಯನ್ನು ಸಲ್ಲಿಸಿದರು ಈ ಕಾರ್ಯಕ್ರಮದಲ್ಲಿ ಸಹಾಯಕ ಆಡಳಿತ ಅಧಿಕಾರಿ ಹಾಗೂ ಸಿರ್ಸಿ ಡಿ ಎಸ್ ಪಿ ರವಿ ಡಿ ನಯ್ಕಾರವರು ಮತ್ತು ಕುಮಾರಿ ಸಂಗೀತ ಕಾನಡೆ ಸಿದ್ದಾಪುರ ಪೊಲೀಸ್ ಠಾಣೆರವರು ಕಾರ್ಯಕ್ರಮದಲ್ಲಿ ಪ್ರಾಥನೆ ಸಲ್ಲಿಸಿ .ಅಷ್ಟೇ ಅಲ್ಲದೆ ಸಿರ್ಸಿ ವೃತ್ತ ನಿರೀಕ್ಷಕರಾದ ಸನ್ಮಾನ್ಯ ಶ್ರೀ ರಾಮಚಂದ್ರ ನಾಯಕ ರವರು ಪ್ರಸ್ತಾವಿಕ ಭಾಷಣ ಮಾಡುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಸಿರ್ಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರವರಾದ ಶ್ರೀ ಭೀಮಾಶಂಕರ ರವರು ನಿರೂಪಣೆ ಮಾಡಿದರು. ಅಲ್ಲದೆ ಸಿರ್ಸಿ ಗ್ರಾಮೀಣ ಪೊಲೀಸ್ ಠಾಣೆಯ ಶ್ರೀ ಇರಯ್ಯರವರು ಉಪಸ್ಥಿತರಿದ್ದರು ಹಾಗು ಯಲ್ಲಾಪುರ ಠಾಣೆಯ ಪೊಲೀಸ್ ನಿರೀಕ್ಷಕರಾದ ಶ್ರೀ ಸುರೇಶ್ ಯಲ್ಲೂರ್, ಮುಂಡಗೋಡ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಸಿದ್ದು ಸಿಮಾನಿ, ಸಿದ್ದಾಪುರ ಪೊಲೀಸ್ ಠಾಣೆಯ ಉಪನಿರೀಕ್ಷಕರುಗಳಾದ ಮಹಾಂತೇಶ್, ಮಲ್ಲಿಕಾರ್ಜುನ್, ಹನುಮಂತ ಬಿರಾದಾರ್, ರಾಜಕುಮಾರ್ ಮಹಿಳಾ ಪಿಎಸ್ಐ ರವರುಗಳಾದ ಮಾಲಿನಿ ಹೌಸ ಬಾವಿ,ರತ್ನ ಕುರಿ, ನಸ್ರಿನ್ ಮೊದಲಾದವರು ಹಾಜರಿದ್ದರು…
ವರದಿ: ಶ್ರೀಪಾದ್ ಎಸ್ ಎಚ್.

ಭ್ರಷ್ಟರ ಬೇಟೆ

Recent Posts

2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕ ಘೋಷಣೆ: ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೌರವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…

19 hours ago

ಗೆಳತಿಯ ಲವ್ ಮ್ಯಾರೇಜ್ ಎಡವಟ್ಟು: ಮಾಡದ ತಪ್ಪಿಗೆ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…

23 hours ago

ಮದುವೆಯಾಗಿ ನಾಲ್ಕೇ ತಿಂಗಳಲ್ಲಿ ನವವಿವಾಹಿತೆಯ ಸಾವು: ಪತಿ ವಿರುದ್ಧ ಕೊಲೆ, ವರದಕ್ಷಿಣೆ ಕಿರುಕುಳ ಆರೋಪ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…

23 hours ago

ಪೊಲೀಸರ ಎದುರೇ ರಂಪಾಟ ನಡೆಸಿದ್ದ ‘ಮಚ್ ಮಂಜ’ ಬಂಧನ; ಮಹಾರಾಷ್ಟ್ರದಲ್ಲಿ ಸೆರೆ, ನ್ಯಾಯಾಂಗ ಬಂಧನಕ್ಕೆ ಒಪ್ಪಿಗೆ

ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…

23 hours ago

ಕಾನಸೂರು ವಸತಿ ಶಾಲೆ ವಿದ್ಯಾರ್ಥಿ ಗೋಕುಲ ಗೌಡ ಸಾವು ಪ್ರಕರಣ: ಇಬ್ಬರು ಸಿಬ್ಬಂದಿ ಅಮಾನತು

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…

23 hours ago

ಮನೆಯಲ್ಲೇ ಸಂಗ್ರಹಿಸಿದ್ದ ನಾಡಬಾಂಬ್ ಸ್ಫೋಟ; ಹಳಿಯಾಳದ ಕಾಳಗಿನಕೊಪ್ಪ ಗ್ರಾಮದಲ್ಲಿ ಆತಂಕ

ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್‌ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…

23 hours ago