ಮುಂಡಗೋಡ: ಇನ್ಸ್ಟಾಗ್ರಾಂ ಮೂಲಕ ಅಪ್ರಾಪ್ತ ಬಾಲಕಿಯೊಂದಿಗೆ ಪರಿಚಯ ಬೆಳೆಸಿಕೊಂಡ ಯುವಕನೊಬ್ಬ ಆಕೆಯನ್ನು ಪುಸಲಾಯಿಸಿ ಅಪಹರಿಸಿ, ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ಪೋಕ್ಸೋ ಪ್ರಕರಣ ದಾಖಲಾಗಿರುವ ಘಟನೆ ಮುಂಡಗೋಡದಲ್ಲಿ ಬೆಳಕಿಗೆ ಬಂದಿದೆ.
ಈ ಸಂಬಂಧ ಮುಂಡಗೋಡ ಪೊಲೀಸರು ಪೋಕ್ಸೋ ಕಾಯ್ದೆ-2012ರ ಕಲಂ 4 ಮತ್ತು 6 ಹಾಗೂ ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್)-2023ರ ಕಲಂ 137(2) ಮತ್ತು 64(2)(ಎಂ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಮುಂಡಗೋಡ ತಾಲೂಕಿನ ಇಂದೂರು ಗ್ರಾಮದ ನಿವಾಸಿ ಮಂಜುನಾಥ ಯಲ್ಲಪ್ಪ ವಾಲಿಕಾರ (25) ಆರೋಪಿಯಾಗಿದ್ದಾನೆ. ಕೂಲಿ ಕೆಲಸ ಮಾಡುತ್ತಿದ್ದ ಈತನಿಗೆ 17 ವರ್ಷ 1 ತಿಂಗಳ ವಯಸ್ಸಿನ ಅಪ್ರಾಪ್ತ ಬಾಲಕಿಯೊಂದಿಗೆ ಇನ್ಸ್ಟಾಗ್ರಾಂ ಮೂಲಕ ಪರಿಚಯವಾಗಿತ್ತು. ಬಳಿಕ ಈ ಪರಿಚಯವನ್ನು ಬಳಸಿಕೊಂಡು ಬಾಲಕಿಯೊಂದಿಗೆ ಸಲುಗೆ ಬೆಳೆಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಜೂನ್ 14, 2026ರಂದು ಮಧ್ಯಾಹ್ನ ಸುಮಾರು 3 ಗಂಟೆ ವೇಳೆಗೆ ಆರೋಪಿಯು ಬಾಲಕಿಯನ್ನು ಮುಂಡಗೋಡ ಪಟ್ಟಣದ ಅರಣ್ಯ ಇಲಾಖೆಯ ಉದ್ಯಾನವನಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.
ಇದರ ನಂತರ ಜುಲೈ 2, 2026ರಂದು ಬಾಲಕಿಯನ್ನು ಆಕೆಯ ಮನೆಯಿಂದ ಕರೆದುಕೊಂಡು ಹೋಗಿ ಅಪಹರಿಸಿದ್ದಾನೆ ಎನ್ನಲಾಗಿದೆ. ತನ್ನ ಮೋಟಾರ್ಸೈಕಲ್ನಲ್ಲಿ ಮುಂಡಗೋಡ ಬಸ್ ನಿಲ್ದಾಣಕ್ಕೆ ಕರೆತಂದು, ಅಲ್ಲಿಂದ ಹುಬ್ಬಳ್ಳಿ ಹಾಗೂ ಗೋವಾಕ್ಕೆ ಕರೆದೊಯ್ದಿದ್ದಾನೆ. ಗೋವಾದಲ್ಲಿಯೂ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಬಾಲಕಿಯ ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ಪೊಲೀಸರು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಮುಂದುವರಿದಿದೆ.
ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…
ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…
ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…
ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…
ತಮಿಳುನಾಡಿನ ಚೆನ್ನೈನಲ್ಲಿ ಮಹಿಳೆಯೊಬ್ಬರನ್ನು ಭೀಕರವಾಗಿ ಹತ್ಯೆಗೈದು, ಆಕೆಯ ದೇಹದ ಭಾಗಗಳನ್ನು ಬಳಸಿ ಬಿರಿಯಾನಿ ತಯಾರಿಸಿರುವ ಆರೋಪ ಕೇಳಿಬಂದಿದ್ದು, ಇಡೀ ಪ್ರಕರಣವೇ…
ಚನ್ನರಾಯಪಟ್ಟಣ: ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಅಂಬಿಕ ನಗರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಕುಟುಂಬಸ್ಥರು…