ಒಡಿಶಾದ ನಯಾಗಢ ಜಿಲ್ಲೆಯ ದಾಸ್ಪಲ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಪಥರಾಪುಂಜ ಗ್ರಾಮದ ನಿವಾಸಿ ಬಿಜಯ್ ಪ್ರಧಾನ್ 35 ವರ್ಷ ವಯಸ್ಸಾಗಿತ್ತು. ಆದರೆ, ಅಂಗವೈಕಲ್ಯ ಕಾಡುತ್ತಿತ್ತು. ಇತ್ತೀಚೆಗೆ ಬಿಜೆಯ್ ತನ್ನ ಕುಟುಂಬದ ಮುಂದೆ ಮದುವೆಯಾಗುವ ಬಯಕೆ ವ್ಯಕ್ತಪಡಿಸಿದ್ದ. ಕುಟುಂಬ ಎಲ್ಲ ಸದಸ್ಯರು ಒಪ್ಪಿದ್ದರು. ಮದುವೆ ಮಾಡಿ ಆತನ ಜೀವನವನ್ನು ಭದ್ರ ಪಡಿಸಲು ಮುಂದಾಗಿದ್ದರು. ಆದರೆ, ಮಲತಾಯಿಗೆ ಇದು ಇಷ್ಟವಿರಲಿಲ್ಲ. ಒಂದು ವೇಳೆ ಮದುವೆಯಾದರೆ ಎಲ್ಲ ಆಸ್ತಿ ಆತನ ಪಾಲಾಗಬಹುದು ಎಂದು ಮದುವೆ ಮುರಿಯಲು ಪ್ರಯತ್ನಿಸುತ್ತಿದ್ದಳು.
ಆದರೆ, ಬಿಜಯ್ ಮದುವೆ ಆಗಿ ಹೊಸ ಜೀವನ ಆರಂಭಿಸುವ ಉತ್ಸುಕದಲ್ಲಿದ್ದನು. ಆದರೆ, ಆತನಿಗೆ ಚೆನ್ನಾಗಿ ಥಳಿಸಿ, ಅನೇಕ ತಿಂಗಳವರೆಗೆ ಆಹಾರವನ್ನು ನೀಡದೆ ಮಲತಾಯಿ ಹಿಂಸೆ ನೀಡಿದ್ದಳು. ಆದಾಗ್ಯೂ ಶನಿವಾರ ರಾತ್ರಿ ಮದುವೆ ವಿಚಾರವಾಗಿ ಮತ್ತೊಮ್ಮೆ ಜಗಳ ನಡೆಯಿತು. ಈ ವೇಳೆ ಬಿಜಯ್ಗೆ ಮಲತಾಯಿ ಮನಬಂದಂತೆ ಥಳಿಸಿದ್ದಾಳೆ. ಪರಿಣಾಮ ಬಿಜಯ್ ಮೃತಪಟ್ಟಿದ್ದಾನೆ. ಬಿಜಯ್ ತಂದೆ ಮತ್ತು ಮಲತಾಯಿಯ ಇಬ್ಬರು ಸ್ವಂತ ಮಕ್ಕಳು ಆಕೆಗೆ ಸಹಾಯ ಮಾಡಿದ್ದಾರೆ ಎಂದು ಸಂಬಂಧಿಕರು ಆರೋಪ ಮಾಡಿದ್ದಾರೆ. ಮಲಮಗನಾದ್ದರಿಂದ ಮದುವೆಯ ನಂತರ ಆಸ್ತಿಯನ್ನೆಲ್ಲ ತಮ್ಮದಾಗಿಸಿಕೊಳ್ಳುತ್ತಾರೆ ಎಂದು ಭಾವಿಸಿದ್ದರು. ಹೀಗಾಗಿ ಬಿಜಯ್ ಮದುವೆಯಾಗುವುದು ಅವರಿಗೆ ಇಷ್ಟವಿರಲಿಲ್ಲ. ಹೀಗಾಗಿ ಆತನನ್ನು ಹೊಡೆದು ಕೊಲೆ ಮಾಡಿದ್ದಾರೆ ಎಂದು ಸಂಬಂಧಿಕರು ತಿಳಿಸಿದ್ದಾರೆ.
ಆದರೆ, ಮಲತಾಯಿ ಆರೋಪವನ್ನು ಅಲ್ಲಗಳೆದಿದ್ದು, ಸಂಬಂಧಿಕರು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದಿದ್ದಾರೆ. ಸದ್ಯ ಈ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ವಿಚಾರಣೆ ನಡೆಯುತ್ತಿದೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…