ಒಡಿಶಾದ ನಯಾಗಢ ಜಿಲ್ಲೆಯ ದಾಸ್ಪಲ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಪಥರಾಪುಂಜ ಗ್ರಾಮದ ನಿವಾಸಿ ಬಿಜಯ್ ಪ್ರಧಾನ್ 35 ವರ್ಷ ವಯಸ್ಸಾಗಿತ್ತು. ಆದರೆ, ಅಂಗವೈಕಲ್ಯ ಕಾಡುತ್ತಿತ್ತು. ಇತ್ತೀಚೆಗೆ ಬಿಜೆಯ್ ತನ್ನ ಕುಟುಂಬದ ಮುಂದೆ ಮದುವೆಯಾಗುವ ಬಯಕೆ ವ್ಯಕ್ತಪಡಿಸಿದ್ದ. ಕುಟುಂಬ ಎಲ್ಲ ಸದಸ್ಯರು ಒಪ್ಪಿದ್ದರು. ಮದುವೆ ಮಾಡಿ ಆತನ ಜೀವನವನ್ನು ಭದ್ರ ಪಡಿಸಲು ಮುಂದಾಗಿದ್ದರು. ಆದರೆ, ಮಲತಾಯಿಗೆ ಇದು ಇಷ್ಟವಿರಲಿಲ್ಲ. ಒಂದು ವೇಳೆ ಮದುವೆಯಾದರೆ ಎಲ್ಲ ಆಸ್ತಿ ಆತನ ಪಾಲಾಗಬಹುದು ಎಂದು ಮದುವೆ ಮುರಿಯಲು ಪ್ರಯತ್ನಿಸುತ್ತಿದ್ದಳು.
ಆದರೆ, ಬಿಜಯ್ ಮದುವೆ ಆಗಿ ಹೊಸ ಜೀವನ ಆರಂಭಿಸುವ ಉತ್ಸುಕದಲ್ಲಿದ್ದನು. ಆದರೆ, ಆತನಿಗೆ ಚೆನ್ನಾಗಿ ಥಳಿಸಿ, ಅನೇಕ ತಿಂಗಳವರೆಗೆ ಆಹಾರವನ್ನು ನೀಡದೆ ಮಲತಾಯಿ ಹಿಂಸೆ ನೀಡಿದ್ದಳು. ಆದಾಗ್ಯೂ ಶನಿವಾರ ರಾತ್ರಿ ಮದುವೆ ವಿಚಾರವಾಗಿ ಮತ್ತೊಮ್ಮೆ ಜಗಳ ನಡೆಯಿತು. ಈ ವೇಳೆ ಬಿಜಯ್ಗೆ ಮಲತಾಯಿ ಮನಬಂದಂತೆ ಥಳಿಸಿದ್ದಾಳೆ. ಪರಿಣಾಮ ಬಿಜಯ್ ಮೃತಪಟ್ಟಿದ್ದಾನೆ. ಬಿಜಯ್ ತಂದೆ ಮತ್ತು ಮಲತಾಯಿಯ ಇಬ್ಬರು ಸ್ವಂತ ಮಕ್ಕಳು ಆಕೆಗೆ ಸಹಾಯ ಮಾಡಿದ್ದಾರೆ ಎಂದು ಸಂಬಂಧಿಕರು ಆರೋಪ ಮಾಡಿದ್ದಾರೆ. ಮಲಮಗನಾದ್ದರಿಂದ ಮದುವೆಯ ನಂತರ ಆಸ್ತಿಯನ್ನೆಲ್ಲ ತಮ್ಮದಾಗಿಸಿಕೊಳ್ಳುತ್ತಾರೆ ಎಂದು ಭಾವಿಸಿದ್ದರು. ಹೀಗಾಗಿ ಬಿಜಯ್ ಮದುವೆಯಾಗುವುದು ಅವರಿಗೆ ಇಷ್ಟವಿರಲಿಲ್ಲ. ಹೀಗಾಗಿ ಆತನನ್ನು ಹೊಡೆದು ಕೊಲೆ ಮಾಡಿದ್ದಾರೆ ಎಂದು ಸಂಬಂಧಿಕರು ತಿಳಿಸಿದ್ದಾರೆ.
ಆದರೆ, ಮಲತಾಯಿ ಆರೋಪವನ್ನು ಅಲ್ಲಗಳೆದಿದ್ದು, ಸಂಬಂಧಿಕರು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದಿದ್ದಾರೆ. ಸದ್ಯ ಈ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ವಿಚಾರಣೆ ನಡೆಯುತ್ತಿದೆ.
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…