ಒಡಿಶಾದ ನಯಾಗಢ ಜಿಲ್ಲೆಯ ದಾಸ್ಪಲ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಪಥರಾಪುಂಜ ಗ್ರಾಮದ ನಿವಾಸಿ ಬಿಜಯ್ ಪ್ರಧಾನ್ 35 ವರ್ಷ ವಯಸ್ಸಾಗಿತ್ತು. ಆದರೆ, ಅಂಗವೈಕಲ್ಯ ಕಾಡುತ್ತಿತ್ತು. ಇತ್ತೀಚೆಗೆ ಬಿಜೆಯ್ ತನ್ನ ಕುಟುಂಬದ ಮುಂದೆ ಮದುವೆಯಾಗುವ ಬಯಕೆ ವ್ಯಕ್ತಪಡಿಸಿದ್ದ. ಕುಟುಂಬ ಎಲ್ಲ ಸದಸ್ಯರು ಒಪ್ಪಿದ್ದರು. ಮದುವೆ ಮಾಡಿ ಆತನ ಜೀವನವನ್ನು ಭದ್ರ ಪಡಿಸಲು ಮುಂದಾಗಿದ್ದರು. ಆದರೆ, ಮಲತಾಯಿಗೆ ಇದು ಇಷ್ಟವಿರಲಿಲ್ಲ. ಒಂದು ವೇಳೆ ಮದುವೆಯಾದರೆ ಎಲ್ಲ ಆಸ್ತಿ ಆತನ ಪಾಲಾಗಬಹುದು ಎಂದು ಮದುವೆ ಮುರಿಯಲು ಪ್ರಯತ್ನಿಸುತ್ತಿದ್ದಳು.
ಆದರೆ, ಬಿಜಯ್ ಮದುವೆ ಆಗಿ ಹೊಸ ಜೀವನ ಆರಂಭಿಸುವ ಉತ್ಸುಕದಲ್ಲಿದ್ದನು. ಆದರೆ, ಆತನಿಗೆ ಚೆನ್ನಾಗಿ ಥಳಿಸಿ, ಅನೇಕ ತಿಂಗಳವರೆಗೆ ಆಹಾರವನ್ನು ನೀಡದೆ ಮಲತಾಯಿ ಹಿಂಸೆ ನೀಡಿದ್ದಳು. ಆದಾಗ್ಯೂ ಶನಿವಾರ ರಾತ್ರಿ ಮದುವೆ ವಿಚಾರವಾಗಿ ಮತ್ತೊಮ್ಮೆ ಜಗಳ ನಡೆಯಿತು. ಈ ವೇಳೆ ಬಿಜಯ್ಗೆ ಮಲತಾಯಿ ಮನಬಂದಂತೆ ಥಳಿಸಿದ್ದಾಳೆ. ಪರಿಣಾಮ ಬಿಜಯ್ ಮೃತಪಟ್ಟಿದ್ದಾನೆ. ಬಿಜಯ್ ತಂದೆ ಮತ್ತು ಮಲತಾಯಿಯ ಇಬ್ಬರು ಸ್ವಂತ ಮಕ್ಕಳು ಆಕೆಗೆ ಸಹಾಯ ಮಾಡಿದ್ದಾರೆ ಎಂದು ಸಂಬಂಧಿಕರು ಆರೋಪ ಮಾಡಿದ್ದಾರೆ. ಮಲಮಗನಾದ್ದರಿಂದ ಮದುವೆಯ ನಂತರ ಆಸ್ತಿಯನ್ನೆಲ್ಲ ತಮ್ಮದಾಗಿಸಿಕೊಳ್ಳುತ್ತಾರೆ ಎಂದು ಭಾವಿಸಿದ್ದರು. ಹೀಗಾಗಿ ಬಿಜಯ್ ಮದುವೆಯಾಗುವುದು ಅವರಿಗೆ ಇಷ್ಟವಿರಲಿಲ್ಲ. ಹೀಗಾಗಿ ಆತನನ್ನು ಹೊಡೆದು ಕೊಲೆ ಮಾಡಿದ್ದಾರೆ ಎಂದು ಸಂಬಂಧಿಕರು ತಿಳಿಸಿದ್ದಾರೆ.
ಆದರೆ, ಮಲತಾಯಿ ಆರೋಪವನ್ನು ಅಲ್ಲಗಳೆದಿದ್ದು, ಸಂಬಂಧಿಕರು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದಿದ್ದಾರೆ. ಸದ್ಯ ಈ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ವಿಚಾರಣೆ ನಡೆಯುತ್ತಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…