Latest

ಮದುವೆಯ ಆಸೆ ವ್ಯಕ್ತಪಡಿಸಿದ್ದಕ್ಕೆ ಮಗನನ್ನು ಹೊಡೆದು ಕೊಂದ ಮಲತಾಯಿ

ಒಡಿಶಾದ ನಯಾಗಢ ಜಿಲ್ಲೆಯ ದಾಸ್ಪಲ್ಲ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಬರುವ ಪಥರಾಪುಂಜ ಗ್ರಾಮದ ನಿವಾಸಿ ಬಿಜಯ್​ ಪ್ರಧಾನ್​ 35 ವರ್ಷ ವಯಸ್ಸಾಗಿತ್ತು. ಆದರೆ, ಅಂಗವೈಕಲ್ಯ ಕಾಡುತ್ತಿತ್ತು. ಇತ್ತೀಚೆಗೆ ಬಿಜೆಯ್​ ತನ್ನ ಕುಟುಂಬದ ಮುಂದೆ ಮದುವೆಯಾಗುವ ಬಯಕೆ ವ್ಯಕ್ತಪಡಿಸಿದ್ದ. ಕುಟುಂಬ ಎಲ್ಲ ಸದಸ್ಯರು ಒಪ್ಪಿದ್ದರು. ಮದುವೆ ಮಾಡಿ ಆತನ ಜೀವನವನ್ನು ಭದ್ರ ಪಡಿಸಲು ಮುಂದಾಗಿದ್ದರು. ಆದರೆ, ಮಲತಾಯಿಗೆ ಇದು ಇಷ್ಟವಿರಲಿಲ್ಲ. ಒಂದು ವೇಳೆ ಮದುವೆಯಾದರೆ ಎಲ್ಲ ಆಸ್ತಿ ಆತನ ಪಾಲಾಗಬಹುದು ಎಂದು ಮದುವೆ ಮುರಿಯಲು ಪ್ರಯತ್ನಿಸುತ್ತಿದ್ದಳು.
ಆದರೆ, ಬಿಜಯ್​ ಮದುವೆ ಆಗಿ ಹೊಸ ಜೀವನ ಆರಂಭಿಸುವ ಉತ್ಸುಕದಲ್ಲಿದ್ದನು. ಆದರೆ, ಆತನಿಗೆ ಚೆನ್ನಾಗಿ ಥಳಿಸಿ, ಅನೇಕ ತಿಂಗಳವರೆಗೆ ಆಹಾರವನ್ನು ನೀಡದೆ ಮಲತಾಯಿ ಹಿಂಸೆ ನೀಡಿದ್ದಳು. ಆದಾಗ್ಯೂ ಶನಿವಾರ ರಾತ್ರಿ ಮದುವೆ ವಿಚಾರವಾಗಿ ಮತ್ತೊಮ್ಮೆ ಜಗಳ ನಡೆಯಿತು. ಈ ವೇಳೆ ಬಿಜಯ್​ಗೆ ಮಲತಾಯಿ ಮನಬಂದಂತೆ ಥಳಿಸಿದ್ದಾಳೆ. ಪರಿಣಾಮ ಬಿಜಯ್​ ಮೃತಪಟ್ಟಿದ್ದಾನೆ. ಬಿಜಯ್​ ತಂದೆ ಮತ್ತು ಮಲತಾಯಿಯ ಇಬ್ಬರು ಸ್ವಂತ ಮಕ್ಕಳು ಆಕೆಗೆ ಸಹಾಯ ಮಾಡಿದ್ದಾರೆ ಎಂದು ಸಂಬಂಧಿಕರು ಆರೋಪ ಮಾಡಿದ್ದಾರೆ. ಮಲಮಗನಾದ್ದರಿಂದ ಮದುವೆಯ ನಂತರ ಆಸ್ತಿಯನ್ನೆಲ್ಲ ತಮ್ಮದಾಗಿಸಿಕೊಳ್ಳುತ್ತಾರೆ ಎಂದು ಭಾವಿಸಿದ್ದರು. ಹೀಗಾಗಿ ಬಿಜಯ್​ ಮದುವೆಯಾಗುವುದು ಅವರಿಗೆ ಇಷ್ಟವಿರಲಿಲ್ಲ. ಹೀಗಾಗಿ ಆತನನ್ನು ಹೊಡೆದು ಕೊಲೆ ಮಾಡಿದ್ದಾರೆ ಎಂದು ಸಂಬಂಧಿಕರು ತಿಳಿಸಿದ್ದಾರೆ.
ಆದರೆ, ಮಲತಾಯಿ ಆರೋಪವನ್ನು ಅಲ್ಲಗಳೆದಿದ್ದು, ಸಂಬಂಧಿಕರು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದಿದ್ದಾರೆ. ಸದ್ಯ ಈ ಪ್ರಕರಣ ಪೊಲೀಸ್​ ಠಾಣೆಯ ಮೆಟ್ಟಿಲೇರಿದ್ದು, ವಿಚಾರಣೆ ನಡೆಯುತ್ತಿದೆ.

ಭ್ರಷ್ಟರ ಬೇಟೆ

Recent Posts

ಡಾ. ರಾಜ್‌ಕುಮಾರ್ ಸಮಾಧಿ ಭೂಮಿ ವಿವಾದ: ನಟ ಚೇತನ್ ಪೋಸ್ಟ್‌ಗೆ ಆಕ್ರೋಶ, ಪರ-ವಿರೋಧ ಚರ್ಚೆ ತೀವ್ರ

ಕನ್ನಡ ಚಿತ್ರರಂಗದ ದಿಗ್ಗಜ ಡಾ. ರಾಜ್‌ಕುಮಾರ್ ಅವರ ಸಮಾಧಿಗೆ ಮೀಸಲಾದ 2.5 ಎಕರೆ ಭೂಮಿ ವಿಚಾರವಾಗಿ ನಟ ಚೇತನ್ ಅಹಿಂಸಾ…

4 hours ago

ಪ್ರೇಮ ವಿಚಾರಕ್ಕೆ ರಕ್ತರಂಜಿತ ತಿರುವು: ಶಿವಮೊಗ್ಗದಲ್ಲಿ ಅಪ್ರಾಪ್ತ ಬಾಲಕನ ಮೇಲೆ ಭೀಕರ ದಾಳಿ

ಪ್ರೀತಿಯ ವಿಚಾರವಾಗಿ ಉಂಟಾದ ಮನಸ್ತಾಪವು ಭೀಕರ ಹಲ್ಲೆಗೆ ತಿರುಗಿದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಯುವಕರ ಗುಂಪೊಂದು 17 ವರ್ಷದ…

4 hours ago

ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ಪ್ರೇಮ ತ್ರಿಕೋನ ಡ್ರಾಮಾ: ನಡುರಸ್ತೆಯಲ್ಲಿ ಯುವಕರ ಗಲಾಟೆ ವೈರಲ್

ಬೆಂಗಳೂರು ನಗರದ ಪ್ರಮುಖ ವಸತಿ ಪ್ರದೇಶಗಳಲ್ಲಿ ಒಂದಾದ HSR Layout ಇತ್ತೀಚೆಗೆ ವಿಭಿನ್ನ ಕಾರಣಕ್ಕೆ ಸುದ್ದಿಯಲ್ಲಿದೆ. ಯುವತಿಯೊಬ್ಬಳ ವಿಚಾರವಾಗಿ ಹಳೆಯ…

4 hours ago

ಮಾದಕ ವ್ಯಸನದ ಬೆನ್ನೇರಿ ಮಗನಿಂದ ತಾಯಿ ಹತ್ಯೆ: ಕಣ್ಣೂರಿನಲ್ಲಿ ಹೃದಯ ಕಲಕುವ ಘಟನೆ

ಕೇರಳದ ಕಣ್ಣೂರು ಜಿಲ್ಲೆ ವ್ಯಾಪ್ತಿಯ ಕೇಳಕಂ ಸಮೀಪದ ಕಾಣಿಚಾರ್‌ನಲ್ಲಿ ಮನಕಲಕುವ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಮಾದಕ ವ್ಯಸನಕ್ಕೆ ಒಳಗಾಗಿದ್ದ…

4 hours ago

ಟಿಪ್ಪರ್ ಡಿಕ್ಕಿ, ನಂತರ ಗುಂಡಿನ ದಾಳಿ: ವಿಜಯಪುರದಲ್ಲಿ ಸಿನಿಮಾ ಶೈಲಿಯ ಹತ್ಯೆ ಪ್ರಕರಣ

ವಿಜಯಪುರ ಜಿಲ್ಲೆಯಲ್ಲಿ ರಿಯಲ್ ಎಸ್ಟೇಟ್ ಏಜೆಂಟ್ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ರಾಜು ಬಾಪು ಖರಿ (48) ಅವರನ್ನು…

13 hours ago

ವಿದೇಶಿ ಮಹಿಳೆ ಮೇಲೆ ದೌರ್ಜನ್ಯ ಆರೋಪ: ಕೊಡಗಿನಲ್ಲಿ ಹೋಂಸ್ಟೇ ಪರವಾನಗಿ ರದ್ದು

ಅಮೆರಿಕದ ಪ್ರಜೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತ ತುರ್ತು ಕ್ರಮ ಕೈಗೊಂಡಿದ್ದು, ಕುಟ್ಟಾ ಗ್ರಾಮದಲ್ಲಿರುವ…

13 hours ago