ಒಡಿಶಾದ ನಯಾಗಢ ಜಿಲ್ಲೆಯ ದಾಸ್ಪಲ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಪಥರಾಪುಂಜ ಗ್ರಾಮದ ನಿವಾಸಿ ಬಿಜಯ್ ಪ್ರಧಾನ್ 35 ವರ್ಷ ವಯಸ್ಸಾಗಿತ್ತು. ಆದರೆ, ಅಂಗವೈಕಲ್ಯ ಕಾಡುತ್ತಿತ್ತು. ಇತ್ತೀಚೆಗೆ ಬಿಜೆಯ್ ತನ್ನ ಕುಟುಂಬದ ಮುಂದೆ ಮದುವೆಯಾಗುವ ಬಯಕೆ ವ್ಯಕ್ತಪಡಿಸಿದ್ದ. ಕುಟುಂಬ ಎಲ್ಲ ಸದಸ್ಯರು ಒಪ್ಪಿದ್ದರು. ಮದುವೆ ಮಾಡಿ ಆತನ ಜೀವನವನ್ನು ಭದ್ರ ಪಡಿಸಲು ಮುಂದಾಗಿದ್ದರು. ಆದರೆ, ಮಲತಾಯಿಗೆ ಇದು ಇಷ್ಟವಿರಲಿಲ್ಲ. ಒಂದು ವೇಳೆ ಮದುವೆಯಾದರೆ ಎಲ್ಲ ಆಸ್ತಿ ಆತನ ಪಾಲಾಗಬಹುದು ಎಂದು ಮದುವೆ ಮುರಿಯಲು ಪ್ರಯತ್ನಿಸುತ್ತಿದ್ದಳು.
ಆದರೆ, ಬಿಜಯ್ ಮದುವೆ ಆಗಿ ಹೊಸ ಜೀವನ ಆರಂಭಿಸುವ ಉತ್ಸುಕದಲ್ಲಿದ್ದನು. ಆದರೆ, ಆತನಿಗೆ ಚೆನ್ನಾಗಿ ಥಳಿಸಿ, ಅನೇಕ ತಿಂಗಳವರೆಗೆ ಆಹಾರವನ್ನು ನೀಡದೆ ಮಲತಾಯಿ ಹಿಂಸೆ ನೀಡಿದ್ದಳು. ಆದಾಗ್ಯೂ ಶನಿವಾರ ರಾತ್ರಿ ಮದುವೆ ವಿಚಾರವಾಗಿ ಮತ್ತೊಮ್ಮೆ ಜಗಳ ನಡೆಯಿತು. ಈ ವೇಳೆ ಬಿಜಯ್ಗೆ ಮಲತಾಯಿ ಮನಬಂದಂತೆ ಥಳಿಸಿದ್ದಾಳೆ. ಪರಿಣಾಮ ಬಿಜಯ್ ಮೃತಪಟ್ಟಿದ್ದಾನೆ. ಬಿಜಯ್ ತಂದೆ ಮತ್ತು ಮಲತಾಯಿಯ ಇಬ್ಬರು ಸ್ವಂತ ಮಕ್ಕಳು ಆಕೆಗೆ ಸಹಾಯ ಮಾಡಿದ್ದಾರೆ ಎಂದು ಸಂಬಂಧಿಕರು ಆರೋಪ ಮಾಡಿದ್ದಾರೆ. ಮಲಮಗನಾದ್ದರಿಂದ ಮದುವೆಯ ನಂತರ ಆಸ್ತಿಯನ್ನೆಲ್ಲ ತಮ್ಮದಾಗಿಸಿಕೊಳ್ಳುತ್ತಾರೆ ಎಂದು ಭಾವಿಸಿದ್ದರು. ಹೀಗಾಗಿ ಬಿಜಯ್ ಮದುವೆಯಾಗುವುದು ಅವರಿಗೆ ಇಷ್ಟವಿರಲಿಲ್ಲ. ಹೀಗಾಗಿ ಆತನನ್ನು ಹೊಡೆದು ಕೊಲೆ ಮಾಡಿದ್ದಾರೆ ಎಂದು ಸಂಬಂಧಿಕರು ತಿಳಿಸಿದ್ದಾರೆ.
ಆದರೆ, ಮಲತಾಯಿ ಆರೋಪವನ್ನು ಅಲ್ಲಗಳೆದಿದ್ದು, ಸಂಬಂಧಿಕರು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದಿದ್ದಾರೆ. ಸದ್ಯ ಈ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ವಿಚಾರಣೆ ನಡೆಯುತ್ತಿದೆ.
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…
ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…
ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…