Latest

ವಿದ್ಯಾರ್ಥಿನಿಯಿಂದ ಉಪನ್ಯಾಸಕಿಗೆ ಹಲ್ಲೆ: ಗುರು ಗೌರವ ಮರೆಯುತ್ತಿರುವ ನವಪೀಳಿಗೆಗೆ ನೆಟ್ಟಿಗರ ಕಿಡಿ

ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ” ಎಂಬ ಜನಪದ ನುಡಿಯ ಅರ್ಥವನ್ನು ನವಪೀಳಿಗೆಯ ಕೆಲವರು ಮರೆತಂತಾಗಿದೆ. ಹಳೆಯದಿನಗಳಲ್ಲಿ ಗುರುಗಳಿಗೆ ಭಯವೂ ಇತ್ತು, ಭಕ್ತಿಯೂ ಇತ್ತು. ಆದರೆ ಈಗ ಕೆಲವೊಂದು ಸಂದರ್ಭಗಳಲ್ಲಿ ಶಿಕ್ಷಕರ ವಿರುದ್ಧವೇ ಕೈಕೈ ಹಾಕುವ ಸ್ಥಿತಿಗೆ ವಿದ್ಯಾರ್ಥಿಗಳು ಇಳಿಯುತ್ತಿದ್ದಾರೆ. ಆಂಧ್ರ ಪ್ರದೇಶದಲ್ಲಿ ನಡೆದ ಇತ್ತೀಚಿನ ಘಟನೆ ಈ ಮಾತಿಗೆ ಸಜೀವ ಉದಾಹರಣೆ.

ವಿಜಯನಗರ ಜಿಲ್ಲೆಯ ಇಂಜಿನಿಯರಿಂಗ್ ಕಾಲೇಜೊಂದರಲ್ಲಿ ಘಟನೆ ನಡೆದಿದೆ. ಕಾಲೇಜು ಆವರಣದಲ್ಲಿ ಓರ್ವ ವಿದ್ಯಾರ್ಥಿನಿ ತನ್ನ ಫೋನ್‌ನಲ್ಲಿ ಮಾತನಾಡುತ್ತಿದ್ದರು. ಇದೇ ವೇಳೆ, ಆಕೆಯ ವರ್ತನೆ ಗಮನಿಸಿದ ಮಹಿಳಾ ಉಪನ್ಯಾಸಕಿ ಶಿಸ್ತಿಗೆ ಕರೆತಂದು, ಆಕೆಯಿಂದ ಫೋನ್‌ನ್ನು ಕಸಿದುಕೊಂಡರು. ಈ ಘಟನೆಗೆ ಕೋಪಗೊಂಡ ವಿದ್ಯಾರ್ಥಿನಿ, ಉಪನ್ಯಾಸಕಿಗೆ ಬಾಯಿಗೆ ಬಂದಂತೆ ನಿಂದನೆ ಮಾಡಲು ಆರಂಭಿಸಿದಳು.

ವಿವಾದ ಮುಂದುವರೆದಂತೆಯೇ, ವಿದ್ಯಾರ್ಥಿನಿ ತನ್ನ ಕಾಲಿನಲ್ಲಿದ್ದ ಚಪ್ಪಲಿಯನ್ನು ತೆಗೆದು ಉಪನ್ಯಾಸಕಿಯ ಮೇಲೆ ಹಲ್ಲೆ ನಡೆಸಿದಳು. ತಕ್ಷಣವೇ ಉಪನ್ಯಾಸಕಿಯು ಕೂಡ ತಾಳ್ಮೆ ಕಳೆದುಕೊಂಡು ವಿದ್ಯಾರ್ಥಿನಿಗೆ ಪ್ರತಿದಾಳಿ ಮಾಡಿದರು. ಈ ಗಲಾಟೆಯಲ್ಲಿ ಮತ್ತೊಬ್ಬ ವಿದ್ಯಾರ್ಥಿ ಮಧ್ಯ ಪ್ರವೇಶಿಸಿ ಜಗಳ ನಿಲ್ಲಿಸಿದರು.

ಈ ಘಟನೆ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋ ಹೊರಬಿದ್ದ ಬಳಿಕ ವಿದ್ಯಾರ್ಥಿನಿಯ ವರ್ತನೆಗೆ ನೆಟ್ಟಿಗರು ತೀವ್ರವಾಗಿ ಪ್ರತಿಕ್ರಿಯಿಸುತ್ತಿದ್ದಾರೆ. ಆದರೆ ಈವರೆಗೆ ಕಾಲೇಜು ಆಡಳಿತ ಮಂಡಳಿಯಿಂದ ಯಾವುದೇ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ.

ಈ ಘಟನೆ, ಗುರು-ಶಿಷ್ಯರ ನಡುವಿನ ಪರಸ್ಪರ ಗೌರವದ ಬಾಳದಂಟು ಕ್ಷೀಣಿಸುತ್ತಿರುವುದನ್ನು ತೋರಿಸುತ್ತಿದೆ. ವಿದ್ಯಾರ್ಥಿಗಳ ಶಿಸ್ತಿನ ಕುಸಿತ ಮತ್ತು ಶಿಕ್ಷಕರ ಮೇಲಿನ ವಿಶ್ವಾಸದ ಕೊರತೆ ಹೇಗೆ ಭವಿಷ್ಯವನ್ನು ಹಾನಿಗೊಳಿಸಬಹುದು ಎಂಬುದಕ್ಕೆ ಇದು ಎಚ್ಚರಿಕೆ  ಪರಿಣಮಿಸಿದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

8 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

8 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

8 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

8 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago