ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ” ಎಂಬ ಜನಪದ ನುಡಿಯ ಅರ್ಥವನ್ನು ನವಪೀಳಿಗೆಯ ಕೆಲವರು ಮರೆತಂತಾಗಿದೆ. ಹಳೆಯದಿನಗಳಲ್ಲಿ ಗುರುಗಳಿಗೆ ಭಯವೂ ಇತ್ತು, ಭಕ್ತಿಯೂ ಇತ್ತು. ಆದರೆ ಈಗ ಕೆಲವೊಂದು ಸಂದರ್ಭಗಳಲ್ಲಿ ಶಿಕ್ಷಕರ ವಿರುದ್ಧವೇ ಕೈಕೈ ಹಾಕುವ ಸ್ಥಿತಿಗೆ ವಿದ್ಯಾರ್ಥಿಗಳು ಇಳಿಯುತ್ತಿದ್ದಾರೆ. ಆಂಧ್ರ ಪ್ರದೇಶದಲ್ಲಿ ನಡೆದ ಇತ್ತೀಚಿನ ಘಟನೆ ಈ ಮಾತಿಗೆ ಸಜೀವ ಉದಾಹರಣೆ.
ವಿಜಯನಗರ ಜಿಲ್ಲೆಯ ಇಂಜಿನಿಯರಿಂಗ್ ಕಾಲೇಜೊಂದರಲ್ಲಿ ಘಟನೆ ನಡೆದಿದೆ. ಕಾಲೇಜು ಆವರಣದಲ್ಲಿ ಓರ್ವ ವಿದ್ಯಾರ್ಥಿನಿ ತನ್ನ ಫೋನ್ನಲ್ಲಿ ಮಾತನಾಡುತ್ತಿದ್ದರು. ಇದೇ ವೇಳೆ, ಆಕೆಯ ವರ್ತನೆ ಗಮನಿಸಿದ ಮಹಿಳಾ ಉಪನ್ಯಾಸಕಿ ಶಿಸ್ತಿಗೆ ಕರೆತಂದು, ಆಕೆಯಿಂದ ಫೋನ್ನ್ನು ಕಸಿದುಕೊಂಡರು. ಈ ಘಟನೆಗೆ ಕೋಪಗೊಂಡ ವಿದ್ಯಾರ್ಥಿನಿ, ಉಪನ್ಯಾಸಕಿಗೆ ಬಾಯಿಗೆ ಬಂದಂತೆ ನಿಂದನೆ ಮಾಡಲು ಆರಂಭಿಸಿದಳು.
ವಿವಾದ ಮುಂದುವರೆದಂತೆಯೇ, ವಿದ್ಯಾರ್ಥಿನಿ ತನ್ನ ಕಾಲಿನಲ್ಲಿದ್ದ ಚಪ್ಪಲಿಯನ್ನು ತೆಗೆದು ಉಪನ್ಯಾಸಕಿಯ ಮೇಲೆ ಹಲ್ಲೆ ನಡೆಸಿದಳು. ತಕ್ಷಣವೇ ಉಪನ್ಯಾಸಕಿಯು ಕೂಡ ತಾಳ್ಮೆ ಕಳೆದುಕೊಂಡು ವಿದ್ಯಾರ್ಥಿನಿಗೆ ಪ್ರತಿದಾಳಿ ಮಾಡಿದರು. ಈ ಗಲಾಟೆಯಲ್ಲಿ ಮತ್ತೊಬ್ಬ ವಿದ್ಯಾರ್ಥಿ ಮಧ್ಯ ಪ್ರವೇಶಿಸಿ ಜಗಳ ನಿಲ್ಲಿಸಿದರು.
ಈ ಘಟನೆ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋ ಹೊರಬಿದ್ದ ಬಳಿಕ ವಿದ್ಯಾರ್ಥಿನಿಯ ವರ್ತನೆಗೆ ನೆಟ್ಟಿಗರು ತೀವ್ರವಾಗಿ ಪ್ರತಿಕ್ರಿಯಿಸುತ್ತಿದ್ದಾರೆ. ಆದರೆ ಈವರೆಗೆ ಕಾಲೇಜು ಆಡಳಿತ ಮಂಡಳಿಯಿಂದ ಯಾವುದೇ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ.
ಈ ಘಟನೆ, ಗುರು-ಶಿಷ್ಯರ ನಡುವಿನ ಪರಸ್ಪರ ಗೌರವದ ಬಾಳದಂಟು ಕ್ಷೀಣಿಸುತ್ತಿರುವುದನ್ನು ತೋರಿಸುತ್ತಿದೆ. ವಿದ್ಯಾರ್ಥಿಗಳ ಶಿಸ್ತಿನ ಕುಸಿತ ಮತ್ತು ಶಿಕ್ಷಕರ ಮೇಲಿನ ವಿಶ್ವಾಸದ ಕೊರತೆ ಹೇಗೆ ಭವಿಷ್ಯವನ್ನು ಹಾನಿಗೊಳಿಸಬಹುದು ಎಂಬುದಕ್ಕೆ ಇದು ಎಚ್ಚರಿಕೆ ಪರಿಣಮಿಸಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…