ಬೆಂಗಳೂರು: ಖಾಸಗಿ ಎಂಜಿನಿಯರಿಂಗ್ ಕಾಲೇಜಿನ ನಾಲ್ಕನೇ ಮಹಡಿಯಿಂದ ಹಾರಿ 21 ವರ್ಷದ ಬಿಸಿಎ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ. ಮೃತಳು ಕೇರಳದ ಕೋಝಿಕ್ಕೋಡ್ ಮೂಲದ ಲಕ್ಷ್ಮಿ ಮಿತ್ರ ಎಂದು ಗುರುತಿಸಲಾಗಿದೆ.

ಲಕ್ಷ್ಮಿ ಖಾಸಗಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಆರನೇ ಸೆಮಿಸ್ಟರ್ ಬಿಸಿಎ (ವಿಮಾನಯಾನ) ವಿದ್ಯಾರ್ಥಿನಿಯಾಗಿದ್ದು, ಮಧ್ಯಾಹ್ನ ಸುಮಾರು 1:30ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ.

ಘಟನೆ ಸಂಭವುತ್ತಿದ್ದಂತೆಯೇ ಕಾಲೇಜು ಸಿಬ್ಬಂದಿ ತಕ್ಷಣವೇ ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು, ಆದರೆ ವೈದ್ಯರು ಅಲ್ಲಿಯೇ ಆಕೆ ಮೃತಪಟ್ಟಿರುವುದಾಗಿ ದೃಢಪಡಿಸಿದರು.

ಈ ತನಕ ಆತ್ಮಹತ್ಯೆಯ ಕಾರಣ ಸ್ಪಷ್ಟವಾಗಿಲ್ಲ, ಹಾಗೂ ಯಾವುದೇ ಸುಳಿವು ಅಥವಾ ಸುದೀರ್ಘ ಪತ್ರ ಪತ್ತೆಯಾಗಿಲ್ಲ. ಸ್ಥಳೀಯ ಪೊಲೀಸರು ಪ್ರಕರಣದ ಬಗ್ಗೆ ತನಿಖೆ ಆರಂಭಿಸಿದ್ದು, ಸಂತ್ರಸ್ತೆಯ ಪೋಷಕರ ಆಗಮನಕ್ಕಾಗಿ ಕಾಯುತ್ತಿದ್ದಾರೆ.

ಘಟನೆಗೆ ನಿಖರ ಕಾರಣ ಏನಿರಬಹುದು ಎಂಬುದನ್ನು ತಿಳಿಯಲು ಪೊಲೀಸರು ವಿದ್ಯಾರ್ಥಿನಿಯ ಸ್ನೇಹಿತರು, ಕಾಲೇಜು ಸಿಬ್ಬಂದಿ ಹಾಗೂ ಕುಟುಂಬ ಸದಸ್ಯರಿಂದ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

Related News

error: Content is protected !!