Latest

ಶಿಕ್ಷಕಿಯ ನಿರ್ಲಕ್ಷ್ಯದಿಂದ ಕಣ್ಣು ಕಳೆದುಕೊಂಡ ವಿದ್ಯಾರ್ಥಿ : ನ್ಯಾಯಕ್ಕಾಗಿ ಪೋಷಕರ ಪ್ರತಿಭಟನೆ

ಚಿಂತಾಮಣಿ, ಏಪ್ರಿಲ್ 4: ಚಿಂತಾಮಣಿ ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮುಂಭಾಗ ಶುಕ್ರವಾರ ನಡೆದ ಘಟನೆಯು ಆತಂಕ ಹುಟ್ಟಿಸಿದೆ. ಶಾಲಾ ಶಿಕ್ಷಕಿಯ ನಿರ್ಲಕ್ಷ್ಯದಿಂದ ಓಂದನೇ ತರಗತಿಯ ವಿದ್ಯಾರ್ಥಿಯೊಬ್ಬ ತನ್ನ ಕಣ್ಣಿನ ಬೆಳಕನ್ನು ಕಳೆದುಕೊಂಡಿರುವ ಘಟನೆ ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ.ಶಿಕ್ಷಕಿಯ ನಿರ್ಲಕ್ಷ್ಯದಿಂದ ವಿದ್ಯಾರ್ಥಿ ಕಣ್ಣು ಕಳೆದುಕೊಂಡ ದುರ್ಘಟನೆ:

ಅಪಘಾತದ ಹಿನ್ನೆಲೆ:
ಚಿಂತಾಮಣಿ ತಾಲ್ಲೂಕಿನ ಮುರುಗಮಲ್ಲ ಹೋಬಳಿಯ ಯಗವಕೋಟೆ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಯಾಗಿದ್ದ 8 ವರ್ಷದ ಯಶ್ವಂತ್ ತನ್ನ ದಿನನಿತ್ಯದ ಪಾಠವಾಡುತ್ತಿದ್ದ. ಆದರೆ, ಅವನ ಜೀವನದಲ್ಲಿ ತಿರುವು ತಂದ ದುರ್ಘಟನೆ ಘಟಿಸಿತು.

ಶಿಕ್ಷಕಿ ಸರಸ್ವತಿ, ಶಿಸ್ತಿಗಾಗಿ ಬೇರೆ ವಿದ್ಯಾರ್ಥಿಯನ್ನು ಹೊಡೆಯಲು ಹೋಗಿ ತಿರುಗದ ಕೂಲಿನಿಂದ ಯಶ್ವಂತ್ ಅವರ ಕಣ್ಣಿಗೆ ತೀವ್ರವಾಗಿ ಪೆಟ್ಟಾಗಿ, ಪರಿಣಾಮವಾಗಿ ಅವನ ಬಲ ಕಣ್ಣು ಗಂಭೀರ ಹಾನಿಗೊಳಗಾಯಿತು. ತಕ್ಷಣವೇ ಪೋಷಕರು ವೈದ್ಯಕೀಯ ಚಿಕಿತ್ಸೆಗಾಗಿ ಕಣ್ಣಿನ ಆಸ್ಪತ್ರೆಗೆ ಕರೆದೊಯ್ದರೂ, ತಜ್ಞ ವೈದ್ಯರು, ಬಾಲಕನ ಕಣ್ಣು ನಷ್ಟವಾಗಿರುವುದಾಗಿ ದೃಢಪಡಿಸಿದರು.

ನ್ಯಾಯಕ್ಕಾಗಿ ಪೋಷಕರ ಹೋರಾಟ:
ಈ ದುರ್ಘಟನೆಗೆ ಶಿಕ್ಷಕಿಯ ನಿರ್ಲಕ್ಷ್ಯವೇ ಕಾರಣ ಎಂದು ಪೋಷಕರು ಪೊಲೀಸ್ ಠಾಣೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ದೂರು ಸಲ್ಲಿಸಿದರು. ಆದರೆ, ಯಾವುದೇ ಕ್ರಮ ಕೈಗೊಳ್ಳದ ಕಾರಣ, ಬಾಲಕ ಯಶ್ವಂತ್ ಹಾಗೂ ಅವರ ಪೋಷಕರು ನ್ಯಾಯಕ್ಕಾಗಿ ಶಿಕ್ಷಣಾಧಿಕಾರಿಗಳ ಕಚೇರಿ ಮುಂದೆ ಧರಣಿ ನಡೆಸಿದರು.

“ನಮ್ಮ ಮಗನ ಭವಿಷ್ಯ ಕತ್ತಲಾಯಿತು. ಶಿಕ್ಷಕಿಯ ವಿರುದ್ಧ ಕಠಿಣ ಕ್ರಮ ಜರುಗಿಸುವವರೆಗೂ ನಾವು ಹೋರಾಟವನ್ನು ಮುಂದುವರಿಸುತ್ತೇವೆ,” ಎಂದು ಪೋಷಕರು ಮನವಿ ಮಾಡಿದರು.

ಈ ಕುರಿತು ಸಂಬಂಧಿತ ಇಲಾಖೆ ಕ್ರಮ ಕೈಗೊಳ್ಳುತ್ತದೆಯೇ ಎಂಬುದು ಕಾಯಬೇಕಾಗಿದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

9 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

9 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

9 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

9 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago