Crime

ಕಾನೂನು ಕಾಲೇಜ್ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ: ಹಳೆಯ ವಿದ್ಯಾರ್ಥಿ ಸೇರಿ ಮೂವರು ಅರೆಸ್ಟ್

ಪಶ್ಚಿಮ ಬಂಗಾಳ, ಕೋಲ್ಕತ್ತಾ: ನಗರದಲ್ಲಿನ ಪ್ರತಿಷ್ಠಿತ ಕಾನೂನು ಕಾಲೇಜು ಪ್ರದೇಶದಲ್ಲಿ ಭಯಾನಕ ಘಟನೆ ಬೆಳಕಿಗೆ ಬಂದಿದೆ. ಕಸ್ಬಾದ ಕಾನೂನು ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳ ಕ್ಯಾಂಪಸ್ ನಲ್ಲಿ ಮೂವರು ಯುವಕರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಗಂಭೀರ ಆರೋಪ ಹೊರಸಲಾಗಿದೆ. ಘಟನೆ ಸಂಬಂಧ ಪೊಲೀಸರು ಈಗಾಗಲೇ ಮೂವರನ್ನು ಬಂಧಿಸಿ ತನಿಖೆ ಆರಂಭಿಸಿದ್ದಾರೆ.

ಪೊಲೀಸ್ ಮಾಹಿತಿ ಪ್ರಕಾರ, ಈ ಕೃತ್ಯ ಜೂನ್ 25ರಂದು ಸಂಜೆ 7.30ರಿಂದ ರಾತ್ರಿ 10.50ರ ನಡುವೆಯೇ ಕಾಲೇಜು ಆವರಣದಲ್ಲಿ ನಡೆದಿದ್ದು, ಘಟನೆಯ ಕುರಿತಂತೆ ಕಸ್ಬಾ ಪೊಲೀಸ್ ಠಾಣೆಯಲ್ಲಿ ಶಿಕ್ಕರದ ಎಫ್‌ಐಆರ್ ದಾಖಲಾಗಿದೆ. ಆರೋಪಿತರಾಗಿ ಪತ್ತೆಯಾಗಿರುವವರು—ಮೊನೊಜಿತ್ ಮಿಶ್ರಾ (31), ಜೈಬ್ ಅಹ್ಮದ್ (19) ಮತ್ತು ಪ್ರಮಿತ್ ಮುಖರ್ಜಿ (20) ಎಂದು ಗುರುತಿಸಲಾಗಿದೆ. ಇವರಲ್ಲಿ ಇಬ್ಬರು ಪ್ರಸ್ತುತ ವಿದ್ಯಾರ್ಥಿಗಳು ಆಗಿದ್ದರೆ, ಮಿಶ್ರಾ ಅವರು ಕಾಲೇಜಿನ ಹಳೆಯ ವಿದ್ಯಾರ್ಥಿಯಾಗಿದ್ದಾರೆ ಮತ್ತು ಪ್ರಮುಖ ಆರೋಪಿ ಎನ್ನಲಾಗಿದೆ.

ಜೂನ್ 26ರ ಸಂಜೆ, ತಲ್ಬಗನ್ ಕ್ರಾಸಿಂಗ್ ಬಳಿಯ ಸಿದ್ಧಾರ್ಥ ಶಂಕರ್ ಶಿಶು ರಾಯ್ ಉದ್ಯಾನದ ಬಳಿ ಮಿಶ್ರಾ ಮತ್ತು ಅಹ್ಮದ್ ಬಂಧನಕ್ಕೊಳಗಾಗಿದ್ದಾರೆ. ಈ ವೇಳೆ ಅವರ ಬಳಿಯಲ್ಲಿದ್ದ ಮೊಬೈಲ್‌ಫೋನ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಬಳಿಕ, ಜೂನ್ 27ರ ಬೆಳಗಿನ ಜಾವ 12.30ಕ್ಕೆ ಮೂರನೇ ಆರೋಪಿ ಪ್ರಮಿತ್ ಮುಖರ್ಜಿಯನ್ನು ಅವರ ನಿವಾಸದಿಂದ ಬಂಧಿಸಲಾಗಿದೆ.

ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ ಮತ್ತು ಹಲವರಿಂದ ಸಾಕ್ಷ್ಯ ಹೇಳಿಕೆಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಮೂವರಲ್ಲಿ ಹಳೆಯ ವಿದ್ಯಾರ್ಥಿಯೇ ಮುಖ್ಯ ಸಂಚುಕೋರನಾಗಿದ್ದು, ಘಟನೆಯ ಪೂರ್ವನಿಯೋಜಿತತೆಗೂ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.

ಈ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ ಮತ್ತು ಕಾನೂನು ಕಾಲೇಜು ಆವರಣದಲ್ಲಿ ಭದ್ರತೆ ಕುರಿತು ಪ್ರಶ್ನೆ ಎದ್ದಿದೆ. ವಿಷಯ ತಿಳಿದ ಕಾನೂನು ವಿದ್ಯಾರ್ಥಿಗಳ ನಡುವೆ ಆತಂಕ ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

8 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

8 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

8 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

8 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago