Latest

ಶಿಷ್ಯವೇತನ ಹಗರಣ ಪ್ರಕರಣ: ಮಾಜಿ ಅಧ್ಯಕ್ಷ ಭೀಮಾಶಂಕರ್ ಬಿಲಗುಂದಿ ನಿವಾಸದಲ್ಲಿ ಇಡಿ ದಾಳಿ

ಕಲಬುರಗಿ: ಹೆಚ್ಕೆಇ ಸೊಸೈಟಿಯ ಮಾಜಿ ಅಧ್ಯಕ್ಷ ಹಾಗೂ ಜಿಲ್ಲಾ ಕಾಂಗ್ರೆಸ್ ನಾಯಕ ಭೀಮಾಶಂಕರ್ ಬಿಲಗುಂದಿ ಅವರ ಮನೆ ಮೇಲೆ ಇಂದು ಇಡಿ (ಅವಕಾಸಿ ನಿರ್ದೇಶನಾಲಯ) ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಕಲಬುರಗಿಯ ರಿಂಗ್‌ ರೋಡ್ ಬಳಿ ಇರುವ ಅವರ ನಿವಾಸದಲ್ಲಿ ನಾಲ್ವರು ಸದಸ್ಯರಿರುವ ತಂಡ ಬೆಳಗ್ಗೆಯಿಂದಲೇ ಶೋಧ ಕಾರ್ಯಾಚರಣೆ ನಡೆಸುತ್ತಿದೆ.

ಈ ದಾಳಿಯ ಹಿನ್ನೆಲೆ ಎಂಆರ್‌ಎಂಸಿ ಮೆಡಿಕಲ್ ಕಾಲೇಜಿನ ಶಿಷ್ಯವೇತನದ ಹಗರಣಕ್ಕೆ ಸಂಬಂಧಪಟ್ಟಿರುವ ಸಾಧ್ಯತೆ ಇರುವುದಾಗಿ ಮೂಲಗಳಿಂದ ತಿಳಿದುಬಂದಿದೆ. 2018ರಿಂದ 2024ರ ಅವಧಿಯಲ್ಲಿ ಹೈದರಾಬಾದ್ ಮೂಲದ ಖಾಸಗಿ ಶಿಕ್ಷಣ ಸಂಸ್ಥೆಗೆ ಇಬ್ಬರು ಅವಧಿಗೆ ಅಧ್ಯಕ್ಷರಾಗಿದ್ದ ಭೀಮಾಶಂಕರ್ ಬಿಲಗುಂದಿ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿವೆ.

ಮೂಲಗಳ ಪ್ರಕಾರ, ಸುಮಾರು 700 ಮಂದಿ ಎಂಬಿಬಿಎಸ್ ವಿದ್ಯಾರ್ಥಿಗಳ ಶಿಷ್ಯವೇತನವಾಗಿ ಅಂದಾಜು 80 ಕೋಟಿ ರೂಪಾಯಿ ಹಣವನ್ನು ಮಂಜೂರು ಮಾಡದೆ ವಂಚಿಸಿರುವ ಆರೋಪ ಭೀಮಾಶಂಕರ್ ಮೇಲೆ ಇದೆ. ಪಾಸ್ ಆದ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಲಭ್ಯವಿದ್ದ ಸ್ಕಾಲರ್‌ಶಿಪ್ ಹಣವನ್ನು ಕೊಡದೆ, ಸಂಸ್ಥೆಯ ಖಾತೆಗೆ ಹರಿಸಿದ್ದಿರುವ ಅನುಮಾನವೂ ವ್ಯಕ್ತವಾಗಿದೆ.

2024ರಲ್ಲಿ ಸುಮಾರು 400ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಶಿಷ್ಯವೇತನ ನೀಡದೆ ವಂಚನೆಯ ಆರೋಪ ಚರ್ಚೆಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಇಡಿಗೆ ಈ ಬಗ್ಗೆ ಮಾಹಿತಿ ತಲುಪಿದ್ದು, ಅದರ ಆಧಾರದಲ್ಲಿ ಇಂದು ದಾಳಿ ನಡೆದಿದೆ ಎನ್ನಲಾಗುತ್ತಿದೆ.

ಇಡಿಯ ಅಧಿಕಾರಿಗಳು ಈ ವೇಳೆ ಮನೆ ಹಾಗೂ ಕಚೇರಿಗಳ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದು, ಹಣದ ಹೂಡಿಕೆ, ಬ್ಯಾಂಕ್ ಖಾತೆಗಳ ವಿವರ ಹಾಗೂ ಭೂಸ್ವಾಮ್ಯದ ದಾಖಲೆಗಳನ್ನೂ ವಶಪಡಿಸಿಕೊಂಡಿದ್ದಾರೆ.

ಹಗರಣ ಕುರಿತು ತನಿಖೆ ಮುಂದುವರಿದಿದ್ದು, ಭವಿಷ್ಯದಲ್ಲಿ ಮತ್ತಷ್ಟು ಮಾಹಿತಿಗಳು ಹೊರಬರುವ ಸಾಧ್ಯತೆಯಿದೆ.

nazeer ahamad

Recent Posts

ಮನೆ ಬಳಕೆಗೆ ಸಿಗದ ಗೃಹಬಳಕೆಯ ಸಿಲಿಂಡರ್‌ಗಳು ಹೋಟೆಲ್‌ಗಳಲ್ಲಿ , ಅಧಿಕಾರಿಗಳ ನಿರ್ಲಕ್ಷ್ಯ

ಮುಂಡಗೋಡ: ಪ್ರಸ್ತುತ ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಇರಾನ್–ಅಮೇರಿಕಾ ಉದ್ವಿಗ್ನತೆ (ಯುದ್ಧ) ಪರಿಣಾಮವಾಗಿ ಇಂಧನ ಕ್ಷೇತ್ರದಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ. ಈ ಪರಿಸ್ಥಿತಿಯ…

1 hour ago

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳು: ಆಸಕ್ತರಿಗೆ ಉದ್ಯೋಗದ ಸುವರ್ಣಾವಕಾಶ

ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…

7 hours ago

ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ

ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…

7 hours ago

ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..!

ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…

7 hours ago

ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ

ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…

7 hours ago

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

8 hours ago