Latest

ಶಿಷ್ಯವೇತನ ಹಗರಣ ಪ್ರಕರಣ: ಮಾಜಿ ಅಧ್ಯಕ್ಷ ಭೀಮಾಶಂಕರ್ ಬಿಲಗುಂದಿ ನಿವಾಸದಲ್ಲಿ ಇಡಿ ದಾಳಿ

ಕಲಬುರಗಿ: ಹೆಚ್ಕೆಇ ಸೊಸೈಟಿಯ ಮಾಜಿ ಅಧ್ಯಕ್ಷ ಹಾಗೂ ಜಿಲ್ಲಾ ಕಾಂಗ್ರೆಸ್ ನಾಯಕ ಭೀಮಾಶಂಕರ್ ಬಿಲಗುಂದಿ ಅವರ ಮನೆ ಮೇಲೆ ಇಂದು ಇಡಿ (ಅವಕಾಸಿ ನಿರ್ದೇಶನಾಲಯ) ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಕಲಬುರಗಿಯ ರಿಂಗ್‌ ರೋಡ್ ಬಳಿ ಇರುವ ಅವರ ನಿವಾಸದಲ್ಲಿ ನಾಲ್ವರು ಸದಸ್ಯರಿರುವ ತಂಡ ಬೆಳಗ್ಗೆಯಿಂದಲೇ ಶೋಧ ಕಾರ್ಯಾಚರಣೆ ನಡೆಸುತ್ತಿದೆ.

ಈ ದಾಳಿಯ ಹಿನ್ನೆಲೆ ಎಂಆರ್‌ಎಂಸಿ ಮೆಡಿಕಲ್ ಕಾಲೇಜಿನ ಶಿಷ್ಯವೇತನದ ಹಗರಣಕ್ಕೆ ಸಂಬಂಧಪಟ್ಟಿರುವ ಸಾಧ್ಯತೆ ಇರುವುದಾಗಿ ಮೂಲಗಳಿಂದ ತಿಳಿದುಬಂದಿದೆ. 2018ರಿಂದ 2024ರ ಅವಧಿಯಲ್ಲಿ ಹೈದರಾಬಾದ್ ಮೂಲದ ಖಾಸಗಿ ಶಿಕ್ಷಣ ಸಂಸ್ಥೆಗೆ ಇಬ್ಬರು ಅವಧಿಗೆ ಅಧ್ಯಕ್ಷರಾಗಿದ್ದ ಭೀಮಾಶಂಕರ್ ಬಿಲಗುಂದಿ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿವೆ.

ಮೂಲಗಳ ಪ್ರಕಾರ, ಸುಮಾರು 700 ಮಂದಿ ಎಂಬಿಬಿಎಸ್ ವಿದ್ಯಾರ್ಥಿಗಳ ಶಿಷ್ಯವೇತನವಾಗಿ ಅಂದಾಜು 80 ಕೋಟಿ ರೂಪಾಯಿ ಹಣವನ್ನು ಮಂಜೂರು ಮಾಡದೆ ವಂಚಿಸಿರುವ ಆರೋಪ ಭೀಮಾಶಂಕರ್ ಮೇಲೆ ಇದೆ. ಪಾಸ್ ಆದ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಲಭ್ಯವಿದ್ದ ಸ್ಕಾಲರ್‌ಶಿಪ್ ಹಣವನ್ನು ಕೊಡದೆ, ಸಂಸ್ಥೆಯ ಖಾತೆಗೆ ಹರಿಸಿದ್ದಿರುವ ಅನುಮಾನವೂ ವ್ಯಕ್ತವಾಗಿದೆ.

2024ರಲ್ಲಿ ಸುಮಾರು 400ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಶಿಷ್ಯವೇತನ ನೀಡದೆ ವಂಚನೆಯ ಆರೋಪ ಚರ್ಚೆಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಇಡಿಗೆ ಈ ಬಗ್ಗೆ ಮಾಹಿತಿ ತಲುಪಿದ್ದು, ಅದರ ಆಧಾರದಲ್ಲಿ ಇಂದು ದಾಳಿ ನಡೆದಿದೆ ಎನ್ನಲಾಗುತ್ತಿದೆ.

ಇಡಿಯ ಅಧಿಕಾರಿಗಳು ಈ ವೇಳೆ ಮನೆ ಹಾಗೂ ಕಚೇರಿಗಳ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದು, ಹಣದ ಹೂಡಿಕೆ, ಬ್ಯಾಂಕ್ ಖಾತೆಗಳ ವಿವರ ಹಾಗೂ ಭೂಸ್ವಾಮ್ಯದ ದಾಖಲೆಗಳನ್ನೂ ವಶಪಡಿಸಿಕೊಂಡಿದ್ದಾರೆ.

ಹಗರಣ ಕುರಿತು ತನಿಖೆ ಮುಂದುವರಿದಿದ್ದು, ಭವಿಷ್ಯದಲ್ಲಿ ಮತ್ತಷ್ಟು ಮಾಹಿತಿಗಳು ಹೊರಬರುವ ಸಾಧ್ಯತೆಯಿದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

9 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

9 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

9 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

9 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago