ತೆಲಂಗಾಣದ ನರಸಾಪುರದಲ್ಲಿ ಆನ್ಲೈನ್ ಬೆಟ್ಟಿಂಗ್ ಮತ್ತೊಮ್ಮೆ ದುರ್ಭಾಗ್ಯಕರ ಕೊನೆಗೆ ಕಾರಣವಾಗಿದ್ದು, 20 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬನು ತನ್ನ ಜೀವವನ್ನೇ ಹೊತ್ತೊಯ್ಯಿಕೊಂಡಿದ್ದಾನೆ.
ಮಹಬೂಬಾಬಾದ್ ಜಿಲ್ಲೆಯ ಪುಲ್ಲೂರು ಗ್ರಾಮದ ಸೂರ್ಯ ಥಂಡಾ ನಿವಾಸಿ ತರುಣ್ (20), ಬಿವಿಆರ್ಐಟಿ ಎಂಜಿನಿಯರಿಂಗ್ ಕಾಲೇಜಿನ ಎರಡನೇ ವರ್ಷದ ವಿದ್ಯಾರ್ಥಿಯಾಗಿದ್ದ. ಆತ ಬುಧವಾರ ಸಂಜೆ ನರಸಾಪುರದಲ್ಲಿರುವ ಖಾಸಗಿ ಹಾಸ್ಟೆಲ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.
ಪೋಷಕರು ಕಾಲೇಜು ಶುಲ್ಕಕ್ಕಾಗಿ ಆತನ ಖಾತೆಗೆ 40 ಸಾವಿರ ರೂ. ಜಮಾ ಮಾಡಿದ್ದರು. ಇದರ ಜೊತೆಗೆ ತರುಣ್ ತನ್ನ ಸ್ನೇಹಿತರಿಂದ ಮತ್ತೂ 30 ಸಾವಿರ ರೂ. ಸಾಲ ಪಡೆದು ಆನ್ಲೈನ್ ಬೆಟ್ಟಿಂಗ್ನಲ್ಲಿ ಬಂಡವಾಳ ಹೂಡಿದ್ದ. ಆದರೆ ಬೆಟ್ಟಿಂಗ್ನಲ್ಲಿ ಸಂಪೂರ್ಣವಾಗಿ 70 ಸಾವಿರ ರೂಪಾಯಿ ಕಳೆದುಕೊಂಡಿದ್ದ.
ಈ ನಷ್ಟವನ್ನು ಕುಟುಂಬದವರೊಂದಿಗೆ ಹಂಚಿಕೊಳ್ಳುವ ಧೈರ್ಯ ತರುಣ್ಗೆ ಆಗಿರಲಿಲ್ಲ. ಜೊತೆಗೆ ಸ್ನೇಹಿತರಿಗೆ ಸಾಲ ಮರುಪಾವತಿಸುವ ದವಡೆಯಲ್ಲಿ ಆತ ಸಂಕಟಕ್ಕೊಳಗಾಗಿ ನಿರ್ಣಾಯಕ ಹೆಜ್ಜೆಯೆತ್ತಿದ್ದಾನೆ ಎನ್ನಲಾಗುತ್ತಿದೆ.
ಆತನ ಆತ್ಮಹತ್ಯೆ ಸುದ್ದಿ ತಿಳಿದ ತಕ್ಷಣ ಪೋಷಕರು ಶೋಕಸಾಗರದಲ್ಲಿ ಮುಳುಗಿದ್ದು, ಆತ್ಮಹತ್ಯೆಗೆ ಕಾರಣವಾದ ಆನ್ಲೈನ್ ಬೆಟ್ಟಿಂಗ್ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಬೇಡಿಕೆಯನ್ನು ಹಾಕಿದ್ದಾರೆ.
ಈ ಸಂಬಂಧ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗುತ್ತಿರುವ ಆನ್ಲೈನ್ ಬೆಟ್ಟಿಂಗ್ ಖೇಲಾಟದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…