Latest

ಬಾಗಲಕೋಟೆ ನಗರದಲ್ಲಿ ಬಸ್ಸಿಗಾಗಿ ವಿದ್ಯಾರ್ಥಿಗಳ ಗೋಳಾಟ; ಕಣ್ಮುಂದೆ ಕಂಡರೂ ಸಹ ಕುರುಡರಾದರಾ? ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು.

ಬಾಗಲಕೋಟೆ ನಗರದಲ್ಲಿ ಶಾಸಕರು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ ಆದರೆ ವಿದ್ಯಾರ್ಥಿಗಳು ಶಾಲೆ-ಕಾಲೇಜುಗಳಿಗೆ ಹೋಗಲು ಬಸ್ಸುಗಳ ವ್ಯವಸ್ಥೆ ಮಾತ್ರ ಮಾಡಿಲ್ಲವೆಂದು ವಿದ್ಯಾರ್ಥಿಗಳ ಮೂಲಕ ತಿಳಿದು ಬರುತ್ತಿದೆ. ಸಾಕಷ್ಟು ವರ್ಷಗಳಿಂದ ಬಸ್ಸುಗಳ ಕೊರತೆಯಿದೆ ಎಂದು ಪರದಾಡುತ್ತಿರುವ ವಿದ್ಯಾರ್ಥಿಗಳು,
ಈ ಸಮಸ್ಯೆಯನ್ನು ಪ್ರತಿನಿತ್ಯವೂ ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು ನೋಡಿದರೂ ಸಹ ಇದನ್ನು ಬಗೆಹರಿಸುವ ಮನಸ್ಸು ಮಾತ್ರ ಯಾವೊಬ್ಬ ಕುರುಡ ಅಧಿಕಾರಿಯೂ ಮಾಡಿಲ್ಲ.
ಬೆಳಿಗ್ಗೆ 9 ಗಂಟೆಗೆ ನವನಗರ ಬಸ್ ನಿಲ್ದಾಣದಿಂದ ಎಲ್ಐಸಿ, ಅಂಬೇಡ್ಕರ್ ಭವನ, ಸೆಕ್ಟರ್ 45 ರ ಮಾರ್ಗವಾಗಿ ಹೋಗುವ ಬಸ್ಸು ಒಂದೇ ಇರುವ ಕಾರಣ ವಿದ್ಯಾರ್ಥಿಗಳಿಗೆ ಬಸ್ ನಲ್ಲಿ ನಿಲ್ಲಲು ಕೂಡ ಜಾಗವಿಲ್ಲದಂತಾಗಿದೆ. ಈ ಮಾರ್ಗವಾಗಿ ಐಟಿಐ ಸರ್ಕಾರಿ ಕಾಲೇಜು, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು, ಆರ್.ಎಮ್.ಎಸ್.ಎ ಶಾಲೆ,ಮತ್ತು ಅರುಣೋದಯ ಪ್ಯಾರಾಮೆಡಿಕಲ್ ಕಾಲೇಜುಗಳು ಸೇರಿದಂತೆ ಸಾಕಷ್ಟು ಶಾಲೆ-ಕಾಲೇಜುಗಳಿವೆ. ಅಷ್ಟೇ ಅಲ್ಲದೆ ಬೇರೇ ಬೇರೆ ಹಳ್ಳಿಗಳಿಂದ ಸರಿ ಸುಮಾರು 500-600 ವಿದ್ಯಾರ್ಥಿಗಳು ಈ ಮಾರ್ಗವಾಗಿ ಸಂಚರಿಸುತ್ತಾರೆ. ಹಳ್ಳಿಗಳಿಂದ ಬಸ್ ನಿಲ್ದಾಣಕ್ಕೆ ಬಂದ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ತಮ್ಮ ತಮ್ಮ ಶಾಲಾ ಕಾಲೇಜುಗಳಿಗೆ ತೆರಳಲು ಸರಿಯಾದ ಬಸ್ ಗಳ ವ್ಯವಸ್ಥೆ ಇಲ್ಲದಂತಾಗಿದೆ. ಇರುವ ಒಂದೇ ಬಸ್ ನಲ್ಲಿ ಜಾಗ ಸಾಲದೆ ಬಾಗಿಲಲ್ಲಿ ಜೋತು ಬಿದ್ದು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಷ್ಟೇ ಅಲ್ಲದೆ ವಿದ್ಯಾರ್ಥಿಗಳು ಬಿದ್ದು ಸಣ್ಣ ಪುಟ್ಟ ಗಾಯಗಳು ಆಗಿದ್ದು ಉಂಟು. ಇದೆಲ್ಲದರ ನಡುವೆ ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ತರಗತಿಗಳಿಗೆ ಹೋಗಲಾರದೆ ಆಟೋ ಮೂಲಕ ಹಾಗೂ ನಡೆದುಕೊಂಡು ಹೋಗುವಂತಹ ಪರಿಸ್ಥಿತಿ ಎದುರಾಗಿದೆ. ಹಾಗೂ ಶಿಕ್ಷಕರಿಂದ ಬೈಯಿಸಿಕೊಂಡು, ಹೊಡೆಸಿಕೊಂಡು ವಿದ್ಯಾರ್ಥಿಗಳನ್ನು ಹೊರಗೆ ನಿಲ್ಲಿಸಿ ಮನೆಗೆ ಕಳಿಸಿರುವ ಘಟನೆಗಳು ಕೂಡ ಸಾಕಷ್ಟಾಗಿವೆ. ಈ ಸಮಸ್ಯೆಯನ್ನು ಪರಿಹರಿಸುವಂತೆ ಕೆ.ಎಸ್.ಆರ್.ಟಿ.ಸಿ ಕಚೇರಿಗೆ ತೆರಳಿ ಮನವಿ ಪತ್ರದ ಮೂಲಕ ಮನವಿ ಸಲ್ಲಿಸಿದ್ದರು ಸಹ ಅಧಿಕಾರಿಗಳು ಕ್ಯಾರೇ ಎನ್ನುತ್ತಿಲ್ಲ.
ಹೀಗೆ ಮುಂದುವರೆದರೆ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ.
ಈ ವರದಿಯನ್ನು ಗಮನಿಸಿಯಾದರೂ ಕೆ.ಎಸ್.ಆರ್.ಟಿ.ಸಿ. ಅಧಿಕಾರಿಗಳು ಎಚ್ಚೆತ್ತುಕೊಳ್ಳುತ್ತಾರಾ? ಅಥವಾ ವಿದ್ಯಾರ್ಥಿಗಳ ಪ್ರಾಣದ ಜೊತೆ ಚೆಲ್ಲಾಟವಾಡುತ್ತಾರಾ? ಕಾದು ನೋಡಬೇಕಿದೆ.

ವರದಿ: ವಿಶ್ವನಾಥ ಭಜಂತ್ರಿ

ಭ್ರಷ್ಟರ ಬೇಟೆ

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

16 hours ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

16 hours ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

16 hours ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

16 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

16 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

2 days ago