Latest

ಬಾಗಲಕೋಟೆ ನಗರದಲ್ಲಿ ಬಸ್ಸಿಗಾಗಿ ವಿದ್ಯಾರ್ಥಿಗಳ ಗೋಳಾಟ; ಕಣ್ಮುಂದೆ ಕಂಡರೂ ಸಹ ಕುರುಡರಾದರಾ? ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು.

ಬಾಗಲಕೋಟೆ ನಗರದಲ್ಲಿ ಶಾಸಕರು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ ಆದರೆ ವಿದ್ಯಾರ್ಥಿಗಳು ಶಾಲೆ-ಕಾಲೇಜುಗಳಿಗೆ ಹೋಗಲು ಬಸ್ಸುಗಳ ವ್ಯವಸ್ಥೆ ಮಾತ್ರ ಮಾಡಿಲ್ಲವೆಂದು ವಿದ್ಯಾರ್ಥಿಗಳ ಮೂಲಕ ತಿಳಿದು ಬರುತ್ತಿದೆ. ಸಾಕಷ್ಟು ವರ್ಷಗಳಿಂದ ಬಸ್ಸುಗಳ ಕೊರತೆಯಿದೆ ಎಂದು ಪರದಾಡುತ್ತಿರುವ ವಿದ್ಯಾರ್ಥಿಗಳು,
ಈ ಸಮಸ್ಯೆಯನ್ನು ಪ್ರತಿನಿತ್ಯವೂ ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು ನೋಡಿದರೂ ಸಹ ಇದನ್ನು ಬಗೆಹರಿಸುವ ಮನಸ್ಸು ಮಾತ್ರ ಯಾವೊಬ್ಬ ಕುರುಡ ಅಧಿಕಾರಿಯೂ ಮಾಡಿಲ್ಲ.
ಬೆಳಿಗ್ಗೆ 9 ಗಂಟೆಗೆ ನವನಗರ ಬಸ್ ನಿಲ್ದಾಣದಿಂದ ಎಲ್ಐಸಿ, ಅಂಬೇಡ್ಕರ್ ಭವನ, ಸೆಕ್ಟರ್ 45 ರ ಮಾರ್ಗವಾಗಿ ಹೋಗುವ ಬಸ್ಸು ಒಂದೇ ಇರುವ ಕಾರಣ ವಿದ್ಯಾರ್ಥಿಗಳಿಗೆ ಬಸ್ ನಲ್ಲಿ ನಿಲ್ಲಲು ಕೂಡ ಜಾಗವಿಲ್ಲದಂತಾಗಿದೆ. ಈ ಮಾರ್ಗವಾಗಿ ಐಟಿಐ ಸರ್ಕಾರಿ ಕಾಲೇಜು, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು, ಆರ್.ಎಮ್.ಎಸ್.ಎ ಶಾಲೆ,ಮತ್ತು ಅರುಣೋದಯ ಪ್ಯಾರಾಮೆಡಿಕಲ್ ಕಾಲೇಜುಗಳು ಸೇರಿದಂತೆ ಸಾಕಷ್ಟು ಶಾಲೆ-ಕಾಲೇಜುಗಳಿವೆ. ಅಷ್ಟೇ ಅಲ್ಲದೆ ಬೇರೇ ಬೇರೆ ಹಳ್ಳಿಗಳಿಂದ ಸರಿ ಸುಮಾರು 500-600 ವಿದ್ಯಾರ್ಥಿಗಳು ಈ ಮಾರ್ಗವಾಗಿ ಸಂಚರಿಸುತ್ತಾರೆ. ಹಳ್ಳಿಗಳಿಂದ ಬಸ್ ನಿಲ್ದಾಣಕ್ಕೆ ಬಂದ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ತಮ್ಮ ತಮ್ಮ ಶಾಲಾ ಕಾಲೇಜುಗಳಿಗೆ ತೆರಳಲು ಸರಿಯಾದ ಬಸ್ ಗಳ ವ್ಯವಸ್ಥೆ ಇಲ್ಲದಂತಾಗಿದೆ. ಇರುವ ಒಂದೇ ಬಸ್ ನಲ್ಲಿ ಜಾಗ ಸಾಲದೆ ಬಾಗಿಲಲ್ಲಿ ಜೋತು ಬಿದ್ದು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಷ್ಟೇ ಅಲ್ಲದೆ ವಿದ್ಯಾರ್ಥಿಗಳು ಬಿದ್ದು ಸಣ್ಣ ಪುಟ್ಟ ಗಾಯಗಳು ಆಗಿದ್ದು ಉಂಟು. ಇದೆಲ್ಲದರ ನಡುವೆ ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ತರಗತಿಗಳಿಗೆ ಹೋಗಲಾರದೆ ಆಟೋ ಮೂಲಕ ಹಾಗೂ ನಡೆದುಕೊಂಡು ಹೋಗುವಂತಹ ಪರಿಸ್ಥಿತಿ ಎದುರಾಗಿದೆ. ಹಾಗೂ ಶಿಕ್ಷಕರಿಂದ ಬೈಯಿಸಿಕೊಂಡು, ಹೊಡೆಸಿಕೊಂಡು ವಿದ್ಯಾರ್ಥಿಗಳನ್ನು ಹೊರಗೆ ನಿಲ್ಲಿಸಿ ಮನೆಗೆ ಕಳಿಸಿರುವ ಘಟನೆಗಳು ಕೂಡ ಸಾಕಷ್ಟಾಗಿವೆ. ಈ ಸಮಸ್ಯೆಯನ್ನು ಪರಿಹರಿಸುವಂತೆ ಕೆ.ಎಸ್.ಆರ್.ಟಿ.ಸಿ ಕಚೇರಿಗೆ ತೆರಳಿ ಮನವಿ ಪತ್ರದ ಮೂಲಕ ಮನವಿ ಸಲ್ಲಿಸಿದ್ದರು ಸಹ ಅಧಿಕಾರಿಗಳು ಕ್ಯಾರೇ ಎನ್ನುತ್ತಿಲ್ಲ.
ಹೀಗೆ ಮುಂದುವರೆದರೆ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ.
ಈ ವರದಿಯನ್ನು ಗಮನಿಸಿಯಾದರೂ ಕೆ.ಎಸ್.ಆರ್.ಟಿ.ಸಿ. ಅಧಿಕಾರಿಗಳು ಎಚ್ಚೆತ್ತುಕೊಳ್ಳುತ್ತಾರಾ? ಅಥವಾ ವಿದ್ಯಾರ್ಥಿಗಳ ಪ್ರಾಣದ ಜೊತೆ ಚೆಲ್ಲಾಟವಾಡುತ್ತಾರಾ? ಕಾದು ನೋಡಬೇಕಿದೆ.

ವರದಿ: ವಿಶ್ವನಾಥ ಭಜಂತ್ರಿ

ಭ್ರಷ್ಟರ ಬೇಟೆ

Recent Posts

ಮಗಳ ಹುಟ್ಟುಹಬ್ಬಕ್ಕೆ ಸರ್‌ಪ್ರೈಸ್ ಕೊಡಲು ಹೋದ ಪೋಷಕರಿಗೆ ಆಘಾತ; ರೂಮ್ ಕಿಟಕಿಯಿಂದ ಜಿಗಿದ ಯುವಕ!

ಅಮೃತಸರ: ಉನ್ನತ ಶಿಕ್ಷಣಕ್ಕಾಗಿ ದೂರದ ನಗರಕ್ಕೆ ಮಕ್ಕಳನ್ನು ಕಳುಹಿಸುವ ಪೋಷಕರು ಅವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ…

15 hours ago

ಬದುಕಿದ್ದಾಗ ದೂರ, ಸಾವಿನಲ್ಲೂ ನಿರ್ಲಕ್ಷ್ಯ: ₹5,100 ಕಳುಹಿಸಿ ವಿಡಿಯೋ ಕಾಲ್ ನಲ್ಲೆ ತಂದೆಯ ಅಂತ್ಯಸಂಸ್ಕಾರ ಮಾಡಿಸಿದ ಹೆಣ್ಣುಮಕ್ಕಳು

ಹೆತ್ತ ಮಕ್ಕಳ ಸುಖ-ಸಂತೋಷಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗ ಮಾಡುವ ತಂದೆ-ತಾಯಿಯರಿಗೆ ವೃದ್ಧಾಪ್ಯದಲ್ಲಿ ಸಿಗುವ ಪ್ರತಿಫಲ ಕೆಲವೊಮ್ಮೆ ಎಷ್ಟು ನೋವಿನದ್ದಾಗಿರುತ್ತದೆ…

16 hours ago

ಮಂಡ್ಯದಲ್ಲಿ ಯುವತಿಯ ಅನುಮಾನಾಸ್ಪದ ಸಾವು: ರಸ್ತೆ ಅಪಘಾತ ಪ್ರಕರಣಕ್ಕೆ ಹೊಸ ತಿರುವು, ಅತ್ಯಾಚಾರ ಯತ್ನದ ಬಳಿಕ ಕೊಲೆ ಆರೋಪ!

ಮಂಡ್ಯದಲ್ಲಿ ರಸ್ತೆ ಅಪಘಾತವೆಂದು ಆರಂಭದಲ್ಲಿ ದಾಖಲಾಗಿದ್ದ ಯುವತಿಯ ಸಾವಿನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಸಾಮಾನ್ಯ ಅಪಘಾತ…

16 hours ago

ಶಾಲೆಯ ಕ್ಲಾಸ್‌ರೂಮ್‌ನಲ್ಲಿ ಶಿಕ್ಷಕ-ಶಿಕ್ಷಕಿಯ ರೋಮ್ಯಾನ್ಸ್: ಹಿಡನ್ ಕ್ಯಾಮೆರಾ ವಿಡಿಯೊ ವೈರಲ್..!

ಕನ್ನೌಜ್ (ಉತ್ತರ ಪ್ರದೇಶ): ಶಿಕ್ಷಣ ಕ್ಷೇತ್ರದ ಗೌರವಕ್ಕೆ ಧಕ್ಕೆ ತರುವಂತಹ ಘಟನೆಯೊಂದು ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.…

16 hours ago

ಒಂಟಿ ಯುವತಿಯ ಮನೆಗೆ ನುಗ್ಗಲು ಯತ್ನಿಸಿದ ಡೆಲಿವರಿ ಬಾಯ್? ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ಘಟನೆ!

ಬೆಂಗಳೂರು: ನಗರದ ಅಪಾರ್ಟ್‌ಮೆಂಟ್‌ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…

2 days ago

ಪ್ಯಾಕಿಂಗ್ ಕೆಲಸದ ಆಮಿಷಕ್ಕೆ ಕೋಟಿ ಕೋಟಿ ವಂಚನೆ: ದಂಪತಿ ಬಂಧನ, ಹಲವು ಜಿಲ್ಲೆಗಳಲ್ಲಿ ಪ್ರಕರಣ ದಾಖಲು!

ಬೆಂಗಳೂರು: ಮನೆದಲ್ಲೇ ಕುಳಿತು ಬೂದುಬತ್ತಿ, ಮೆಣದಬತ್ತಿ ಹಾಗೂ ಪೇಪರ್ ಪ್ಲೇಟ್ ಪ್ಯಾಕಿಂಗ್ ಕೆಲಸ ನೀಡಿ ಹೆಚ್ಚಿನ ಆದಾಯ ಗಳಿಸಬಹುದು ಎಂದು…

2 days ago