Categories: Latest

ವಿದ್ಯಾರ್ಥಿಗಳಿಂದಲೇ ಶೌಚಾಲಯ ಸ್ವಚ್ಛತೆ: ಹೊಸೂರು ಕೆಪಿಎಸ್ ಶಾಲೆಯ ವಿಡಿಯೋ ವೈರಲ್; ಪೋಷಕರ ಆಕ್ರೋಶ

ಗೌರಿಬಿದನೂರು: ತಾಲ್ಲೂಕಿನ ಹೊಸೂರು ಗ್ರಾಮದ ಕೆಪಿಎಸ್ (ಕರ್ನಾಟಕ ಪಬ್ಲಿಕ್ ಸ್ಕೂಲ್) ಶಾಲೆಯಲ್ಲಿ ವಿದ್ಯಾರ್ಥಿಗಳಿಂದಲೇ ಶೌಚಾಲಯ ಸ್ವಚ್ಛಗೊಳಿಸುತ್ತಿರುವ ಆರೋಪ ಕೇಳಿಬಂದಿದ್ದು, ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆಗೆ ಸಂಬಂಧಿಸಿದಂತೆ ಶಾಲಾ ಆಡಳಿತದ ವಿರುದ್ಧ ಪೋಷಕರು ಹಾಗೂ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೈರಲ್ ಆಗಿರುವ ವಿಡಿಯೋದಲ್ಲಿ ಶಾಲೆಯ ಆವರಣದ ಪಕ್ಕದಲ್ಲಿರುವ ಶೌಚಾಲಯವನ್ನು ಓರ್ವ ವಿದ್ಯಾರ್ಥಿ ಸ್ವಚ್ಛಗೊಳಿಸುತ್ತಿರುವುದು ಕಂಡುಬಂದಿದೆ. ಮತ್ತಿಬ್ಬರು ವಿದ್ಯಾರ್ಥಿಗಳು ಪೈಪ್ ಮೂಲಕ ನೀರು ಹಾಕುತ್ತಿರುವ ದೃಶ್ಯವೂ ವಿಡಿಯೋದಲ್ಲಿದೆ. ಈ ದೃಶ್ಯಗಳು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸುರಕ್ಷತೆ ಹಾಗೂ ಶಿಕ್ಷಣದ ಗುಣಮಟ್ಟದ ಕುರಿತು ಪೋಷಕರಲ್ಲಿ ಆತಂಕ ಮೂಡಿಸಿದೆ.

ಮಕ್ಕಳನ್ನು ಉತ್ತಮ ಶಿಕ್ಷಣ ಪಡೆಯಲು ಶಾಲೆಗೆ ಕಳುಹಿಸಲಾಗುತ್ತದೆ. ಆದರೆ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸುವಂತಹ ಕೆಲಸಗಳನ್ನು ಮಾಡಿಸುವುದು ಸೂಕ್ತವಲ್ಲ ಎಂದು ಪೋಷಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಶಾಲೆಯಲ್ಲಿ ಇಂತಹ ಘಟನೆಗಳು ನಡೆಯದಂತೆ ಮುಖ್ಯ ಶಿಕ್ಷಕರು ಹಾಗೂ ಶಾಲಾ ಆಡಳಿತ ಮಂಡಳಿ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕಿತ್ತು ಎಂದು ಅವರು ಹೇಳಿದ್ದಾರೆ.

ಶಾಲೆಗಳಿಗೆ ಸರ್ಕಾರದಿಂದ ವಿವಿಧ ಮೂಲಗಳ ಮೂಲಕ ಅನುದಾನ ಹಾಗೂ ಸೌಲಭ್ಯಗಳು ದೊರೆಯುತ್ತಿದ್ದು, ಶೌಚಾಲಯಗಳ ಸ್ವಚ್ಛತೆ ಸೇರಿದಂತೆ ಮೂಲಸೌಕರ್ಯಗಳ ನಿರ್ವಹಣೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ವಿದ್ಯಾರ್ಥಿಗಳನ್ನು ಇಂತಹ ಕೆಲಸಗಳಿಗೆ ಬಳಸಿಕೊಳ್ಳುವ ಬದಲು ಅಗತ್ಯವಿದ್ದಲ್ಲಿ ಸ್ವಚ್ಛತಾ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಪೋಷಕರು ಆಗ್ರಹಿಸಿದ್ದಾರೆ.

ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸುವ ಕೆಲಸ ಮಾಡಿಸಿರುವುದು ನಿಜವಾಗಿದ್ದರೆ, ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಸಮಗ್ರವಾಗಿ ಪರಿಶೀಲಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯೆ ಪಡೆಯಲು ಕೆಪಿಎಸ್ ಶಾಲೆಯ ಮುಖ್ಯ ಶಿಕ್ಷಕ ಗಂಗಾಧರಯ್ಯ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಲು ಪ್ರಯತ್ನಿಸಿದರೂ ಅವರು ಕರೆ ಸ್ವೀಕರಿಸಲಿಲ್ಲ.

ಅಧಿಕಾರಿಗಳಿಂದ ಪರಿಶೀಲನೆ

ಘಟನೆ ಕುರಿತು ಪ್ರತಿಕ್ರಿಯಿಸಿರುವ ಪ್ರಭಾರ ಬಿಇಒ ಗಂಗಾ ರೆಡ್ಡಿ, “ಮುಖ್ಯ ಶಿಕ್ಷಕರು ವಿದ್ಯಾರ್ಥಿಗಳಿಂದ ಇಂತಹ ಕೆಲಸ ಮಾಡಿಸುವುದು ತಪ್ಪು. ಘಟನೆ ನಡೆದಿರುವ ಕುರಿತು ಪರಿಶೀಲನೆ ನಡೆಸಲು ತಂಡವನ್ನು ಕಳುಹಿಸಲಾಗಿದೆ. ಘಟನೆಯ ಬಗ್ಗೆ ಮುಖ್ಯ ಶಿಕ್ಷಕರಿಗೆ ನೋಟಿಸ್ ನೀಡಲಾಗುವುದು” ಎಂದು ತಿಳಿಸಿದ್ದಾರೆ.

ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಘಟನೆ ಕುರಿತು ಶಿಕ್ಷಣ ಇಲಾಖೆ ಕೈಗೊಳ್ಳಲಿರುವ ಮುಂದಿನ ಕ್ರಮದತ್ತ ಇದೀಗ ಪೋಷಕರು ಹಾಗೂ ಸಾರ್ವಜನಿಕರು ಗಮನಹರಿಸಿದ್ದಾರೆ.

ವರದಿ: ಅವಿನಾಶ್

ಭ್ರಷ್ಟರ ಬೇಟೆ

Recent Posts

ಪ್ರೀತಿಸಿ ಮದುವೆಯಾದ ದಂಪತಿ ದುರಂತ ಅಂತ್ಯ: ಪತ್ನಿಯನ್ನು ಕೊಂದು ಸಿವಿಲ್ ಇಂಜಿನಿಯರ್ ಆತ್ಮಹತ್ಯೆ

ಬೆಂಗಳೂರು: ಪ್ರೀತಿಸಿ ಮನೆಯವರ ಒಪ್ಪಿಗೆಯೊಂದಿಗೆ ನಾಲ್ಕು ವರ್ಷಗಳ ಹಿಂದೆ ವಿವಾಹವಾಗಿದ್ದ ದಂಪತಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ರಾಜಗೋಪಾಲನಗರ ಪೊಲೀಸ್…

20 hours ago

ಪತಿ ಕೆಲಸಕ್ಕೆ ಹೋದ ಬಳಿಕ ಮಧ್ಯರಾತ್ರಿ ಆಹಾರ ಮಳಿಗೆಯಲ್ಲಿ ಪ್ರಿಯಕರನೊಂದಿಗೆ ಪತ್ನಿ: ನೇರವಾಗಿ ಸಿಕ್ಕಿಬಿದ ನಂತರ ಹೈಡ್ರಾಮ..!

ಭೋಪಾಲ್: ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ ದಾಂಪತ್ಯ ಸಂಬಂಧಕ್ಕೆ ಸಂಬಂಧಿಸಿದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ. ಪತಿ ರಾತ್ರಿ ಪಾಳಿಯ…

23 hours ago

ರಾಯಚೂರಿನಲ್ಲಿ ಉಗ್ರ ನೊಂದಿಗೆ ಸಂಪರ್ಕ: ಶಸ್ತ್ರಾಸ್ತ್ರ ಸಂಗ್ರಹ ಹಾಗೂ ಹಿಂಸಾಚಾರಕ್ಕೆ ಪ್ರಚೋದನೆ, ಟೀ ಸ್ಟಾಲ್ ಮಾಲೀಕ ಬಂಧನ

ರಾಯಚೂರು: ಭಾರತದಲ್ಲಿ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಿ ಹಿಂಸಾಚಾರಕ್ಕೆ ಪ್ರಚೋದನೆ ನೀಡಲು ಸಂಚು ರೂಪಿಸಿದ್ದ ಆರೋಪದ ಹಿನ್ನೆಲೆಯಲ್ಲಿ ರಾಯಚೂರು ಪೊಲೀಸರು ಟೀ ಸ್ಟಾಲ್…

2 days ago

5 ದಿನದಲ್ಲೇ ಮದುವೆಗೆ ಬಿಗ್ ಟ್ವಿಸ್ಟ್: ‘ಗಂಡ ಬೇಡ’ ಎಂದ ನವವಧು, ತಾಳಿ-ಕಾಲು ಚೈನು ಬಿಚ್ಚಿಟ್ಟು ತವರಿಗೆ!

ಮದುವೆ ಎನ್ನುವುದು ಜೀವನಪೂರ್ತಿ ಜೊತೆಯಾಗಿ ಸಾಗುವ ಬಾಂಧವ್ಯ ಎಂಬ ನಂಬಿಕೆ ಇದೆ. ಆದರೆ ಸಾಮಾಜಿಕ ಜಾಲತಾಣಗಳ ಮೂಲಕ ಆರಂಭವಾಗುವ ಕೆಲವು…

2 days ago

ಎನ್‌ಸಿಆರ್ ಪ್ರಕರಣ ಇತ್ಯರ್ಥಕ್ಕೆ ₹1 ಲಕ್ಷ ಲಂಚ: ಲೋಕಾಯುಕ್ತ ಬಲೆಗೆ ಹಳೇಬೀಡು ಪಿಎಸ್‌ಐ

ಹಾಸನ: ಎನ್‌ಸಿಆರ್ ಪ್ರಕರಣವೊಂದನ್ನು ಇತ್ಯರ್ಥಪಡಿಸಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಹಳೇಬೀಡು ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್…

2 days ago

ಹೋಟೆಲ್ ರೂಂನಲ್ಲಿ ಮಹಿಳೆಯೊಂದಿಗೆ ಅಧಿಕಾರಿಯಿದ್ದ ವಿಡಿಯೋ ವೈರಲ್: ವಿದ್ಯುತ್ ಇಲಾಖೆ ತನಿಖೆ!

ಲಖನೌ: ಸರ್ಕಾರಿ ಅಧಿಕಾರಿಯೊಬ್ಬರು ಮಹಿಳೆಯೊಂದಿಗೆ ಹೋಟೆಲ್ ಕೊಠಡಿಯಲ್ಲಿ ಇರುವ ದೃಶ್ಯ ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದೀಗ…

3 days ago