Categories: Latest

ರಾಂಪೂರ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರ ಬದಲಾವಣೆಗೆ ವಿದ್ಯಾರ್ಥಿಗಳ ಪಟ್ಟು

ಬಾಗಲಕೋಟೆ: ಜಿಲ್ಲೆಯ ಬಾಗಲಕೋಟೆ ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜು ರಾಂಪೂರ (ಆರ್.ಸಿ) ಗ್ರಾಮದಲ್ಲಿ ಇಂದು ವಿದ್ಯಾರ್ಥಿಗಳು ಅತಿಥಿ ಉಪನ್ಯಾಸಕರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಈ ಪ್ರತಿಭಟನೆ ವಿಷಯ ತಿಳಿದು ನಮ್ಮ ವರದಿಗಾರರು ಕಾಲೇಜಿಗೆ ಭೇಟಿ ನೀಡಿ ಪ್ರತಿಭಟನೆ ಕುರಿತು ವಿದ್ಯಾರ್ಥಿಗಳನ್ನು ಕೇಳಿದಾಗ ವಿದ್ಯಾರ್ಥಿಗಳು ಹಲವಾರು ಸಮಸ್ಯೆಗಳ ಪಟ್ಟಿಯನ್ನು ಅತಿಥಿ ಉಪನ್ಯಾಸಕರ ಕುರಿತು ತಿಳಿಸಿದ್ದಾರೆ. ಈ 2026-27 ನೇ ಶೈಕ್ಷಣಿಕ ಸಾಲಿನಲ್ಲಿ ಮೂರು ವಿಷಯಗಳಿಗೆ ಮೂವರು ಅತಿಥಿ ಉಪನ್ಯಾಸಕರು ಈ ಕಾಲೇಜಿನಲ್ಲಿ ನೇಮಕಗೊಂಡಿದ್ದಾರೆ.
ಆದರೆ ಎರಡು ವಿಷಯಗಳಾದ ಅರ್ಥಶಾಸ್ತ್ರ ಮತ್ತು ಸಮಾಜ ಶಾಸ್ತ್ರ ವಿಷಯಗಳ ಶಿಕ್ಷಕರು ಹೇಳಿದ ಪಾಠ ಬೋಧನೆ ಯಾವುದೇ ವಿದ್ಯಾರ್ಥಿಗಳಿಗೆ ಅರ್ಥವಾಗುತ್ತಿಲ್ಲವೆಂದು ತಮ್ಮ ವೇದನೆಯನ್ನು ಹಂಚಿಕೊಂಡಿದ್ದಾರೆ. ಕೆಲವು ವಿದ್ಯಾರ್ಥಿಗಳಿಗೆ ಅರ್ಥಶಾಸ್ತ್ರದ ಅತಿಥಿ ಶಿಕ್ಷಕರು ಬಾಯಿಗೆ ಬಂದಂತೆ ಬೈಯುತ್ತಾರೆ ಹಾಗೂ ಅವರ ವರ್ತನೆಗಳು ಸರಿ ಇಲ್ಲವೆಂದು ತಿಳಿಸಿದ್ದಾರೆ. ಹೀಗಾಗಿ ಈ ಮೊದಲಿದ್ದ ಅತಿಥಿ ಉಪನ್ಯಾಸಕರನ್ನೆ ಮುಂದುವರೆಸಿ ಇದೀಗ ಹೊಸದಾಗಿ ನೇಮಕಗೊಂಡ ಅತಿಥಿ ಉಪನ್ಯಾಸಕರು ನಮಗೆ ಬೇಡವೆಂದು ವಿದ್ಯಾರ್ಥಿಗಳು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ಅಷ್ಟೇ ಅಲ್ಲದೆ ಈ ಕಾಲೇಜಿನಲ್ಲಿ ವಿದ್ಯಾರ್ಥಿಗಳನ್ನು ಕೆಲವರು ಶಿಕ್ಷಕರು ಟಾರ್ಗೆಟ್ ಮಾಡಿ ಬೈಯುತ್ತಾರೆ ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ.

ಈ ವಿಷಯದ ಕುರಿತು ಕಾಲೇಜಿನ ಪ್ರಾಂಶುಪಾಲರಾದ ಎಸ್.ಎಸ್.ಮೇಟಿಯವರಿಗೆ ಕೇಳಿದಾಗ ಅತಿಥಿ ಉಪನ್ಯಾಸಕರ ನೇಮಕಾತಿ ಮೆರಿಟ್ ಆಧಾರದ ಮೇಲೆ ನಡೆಯುವುದರಿಂದ ಈಗಿರುವ ಅತಿಥಿ ಉಪನ್ಯಾಸಕರಿಗೆ ಅನುಭವ ಕಮ್ಮಿ ಇದ್ದು ಈ ರೀತಿ ಸಮಸ್ಯೆಯಾಗಿದೆ ಎಂದು ತಿಳಿಸಿದ್ದಾರೆ. ಆದರೂ ಸಹ ವಿದ್ಯಾರ್ಥಿಗಳಿಂದ ಲಿಖಿತವಾಗಿ ಸಮಸ್ಯೆಗಳ ಕುರಿತು ಅರ್ಜಿಯನ್ನು ಪಡೆದುಕೊಂಡಿದ್ದೇವೆ ಅದನ್ನು ನಮ್ಮ ಮೇಲಾಧಿಕಾರಿಗಳಿಗೆ ಕಳುಹಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುತ್ತೇವೆ ಎಂದು ವರದಿಗಾರರಿಗೆ ತಿಳಿಸಿದ್ದಾರೆ.
ಈ ವಿಷಯದ ಕುರಿತು ಜಿಲ್ಲೆಯ ಕಾಲೇಜುಗಳ ಉಪ ನಿರ್ದೇಶಕರಾದ ಪುಂಡಲೀಕ ಕಾಂಬಳೆ ಯವರ ಜೊತೆ ವರದಿಗಾರರು ಕರೆ ಮೂಲಕ ಮಾತನಾಡಿದಾಗ ವಿದ್ಯಾರ್ಥಿಗಳಿಗೆ ವಿಷಯ ಅರ್ಥವಾಗಿಲ್ಲವೆಂದರೆ ಹಾಗೂ ಅತಿಥಿ ಶಿಕ್ಷಕರ ವರ್ತನೆಗಳು ಸರಿ ಇಲ್ಲ ಎಂಬ ಆರೋಪಗಳು ಕಂಡು ಬಂದಲ್ಲಿ, ವಿದ್ಯಾರ್ಥಿಗಳ ಅಭಿಪ್ರಾಯ ಮತ್ತು ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರುಗಳ ಹೇಳಿಕೆಯ ಆಧಾರದ ಮೇಲೆ ಪ್ರಾಂಶುಪಾಲರು ಅಂತವರನ್ನು ತೆಗೆದುಹಾಕಲು ಅವಕಾಶವಿದೆ ಎಂದಿದ್ದಾರೆ.
ಆದರೆ ಇದೇ ಮಾಹಿತಿಯನ್ನು ಕಾಲೇಜಿನ ಪ್ರಾಂಶುಪಾಲರಿಗೆ ತಿಳಿಸಿದಾಗ ಅತಿಥಿ ಶಿಕ್ಷಕರನ್ನು ನಾವು ತೆಗೆದುಹಾಕಲು ಆಗುವುದಿಲ್ಲ ನಮ್ಮ ಮೇಲಾಧಿಕಾರಿಗಳಿಗೆ ಮಾತ್ರ ತೆಗೆದುಹಾಕಲು ಅವಕಾಶವಿದೆ ಎಂದು ಹೇಳಿದ್ದಾರೆ. ಒಟ್ಟಾರೆಯಾಗಿ ಈ ವಿಷಯದಲ್ಲಿ ಒಬ್ಬರಿಗೊಬ್ಬರ ಮೇಲೆ ಜಾರಿಕೊಳ್ಳುವುದನ್ನು ಬಿಟ್ಟು ವಿದ್ಯಾರ್ಥಿಗಳ ಕಲಿಕೆಗೆ ಹಾಗೂ ಉತ್ತಮ ಶಿಕ್ಷಕರ ನೇಮಕಾತಿಗೆ ಅವಕಾಶ ಮಾಡಿಕೊಡಬೇಕು.

ಈಗಾಗಲೇ ಈ ವಿಷಯವು ಮಾನ್ಯ ಉಪ ನಿರ್ದೇಶಕರ ಗಮನಕ್ಕೆ ಬಂದಿದ್ದು ವಿದ್ಯಾರ್ಥಿಗಳ ಶೈಕ್ಷಣಿಕ ಬಲವರ್ಧನೆಗೆ ಯಾವ ರೀತಿಯ ಪರಿಹಾರ ಒದಗಿಸಿ ಕೊಡುತ್ತಾರೆ ಎಂದು ಕಾದು ನೋಡಬೇಕಿದೆ.

ವರದಿ: ವಿಶ್ವನಾಥ ಭಜಂತ್ರಿ

ಭ್ರಷ್ಟರ ಬೇಟೆ

Recent Posts

ಫೇಕ್ ಅಟ್ರಾಸಿಟಿ ಕೇಸ್ ಆರೋಪ: ಮನನೊಂದು ವಿಷ ಸೇವಿಸಿದ ವ್ಯಾಪಾರಿ ಸಾವು, ಹಲವು ಮಂದಿ ಪೊಲೀಸರ ವಶಕ್ಕೆ

ಬೆಂಗಳೂರು ಹೊರವಲಯದ ಕಾಡುಗೋಡಿ ಸಮೀಪದ ಚನ್ನಸಂದ್ರದ ಎಕೆಜಿ ಕಾಲೋನಿಯಲ್ಲಿ ಫೇಕ್ ಅಟ್ರಾಸಿಟಿ ಕೇಸ್‌ನಿಂದ ಮನನೊಂದು ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ…

6 hours ago

ತಾಯಿ-ಮಗಳು ಪ್ರೇಮಕಥೆಯ ಶಾಕ್ ಟ್ವಿಸ್ಟ್: ಒಂದೇ ಕುಟುಂಬದಲ್ಲಿ ಬಯಲಾದ ಅಕ್ರಮ ಸಂಬಂಧದ ಜಾಲ, ತಾಯಿ ಸಾವಿನಲ್ಲಿ ಅಂತ್ಯ!

ಜೈಪುರದ ಅರಂಗೇರಿ ಪ್ರದೇಶದಲ್ಲಿ ನಡೆದ ವಿಚಿತ್ರ ಘಟನೆ ಕುಟುಂಬದೊಳಗಿನ ಅಕ್ರಮ ಸಂಬಂಧಗಳ ಜಾಲವನ್ನು ಬಹಿರಂಗಪಡಿಸಿದ್ದು, ಕೊನೆಗೆ ಮಹಿಳೆಯೊಬ್ಬಳ ಸಾವಿನಲ್ಲಿ ಅಂತ್ಯಗೊಂಡಿದೆ.…

6 hours ago

ಬೈಕ್ ಪಾರ್ಕಿಂಗ್ ಜಗಳಕ್ಕೆ ರಕ್ತರಂಜಿತ ಅಂತ್ಯ: ಮಹಿಳೆ ಹತ್ಯೆ, ಪತಿ ಗಂಭೀರ

ದೆಹಲಿಯ ನೈಋತ್ಯ ಭಾಗದ ಬಿಂದಾಪುರದಲ್ಲಿ ಬೈಕ್ ಪಾರ್ಕಿಂಗ್ ವಿಚಾರವಾಗಿ ಆರಂಭವಾದ ಜಗಳ ಭೀಕರ ಹತ್ಯೆಯಲ್ಲಿ ಅಂತ್ಯಗೊಂಡಿದೆ. ನೆರೆಹೊರೆಯವರೊಂದಿಗೆ ಉಂಟಾದ ವಾಗ್ವಾದದ…

6 hours ago

ಪತ್ನಿಯೊಂದಿಗೆ ಸಂಬಂಧದ ಶಂಕೆ: ವ್ಯಕ್ತಿಯ ಹತ್ಯೆ, ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಅನೈತಿಕ ಸಂಬಂಧದ ಶಂಕೆ ಹಿನ್ನೆಲೆ ವ್ಯಕ್ತಿಯೊಬ್ಬರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ…

6 hours ago

ಗೋಹತ್ಯೆ ಪ್ರಕರಣಗಳ ಹಿನ್ನೆಲೆ: ಭಟ್ಕಳದ ಇಸ್ಮಾಯಿಲ್ ಹವ್ವಾ 6 ತಿಂಗಳು ಗಡಿಪಾರು, ರಾಯಚೂರಿಗೆ ಸ್ಥಳಾಂತರ

ಭಟ್ಕಳ: ಭಟ್ಕಳ ಶಹರ ಪೊಲೀಸ್ ಠಾಣಾ ವ್ಯಾಪ್ತಿಯ ಮೂಸಾನಗರ ನಿವಾಸಿ ಇಸ್ಮಾಯಿಲ್ ಹವ್ವಾ (46) ಅವರನ್ನು ಆರು ತಿಂಗಳ ಅವಧಿಗೆ…

6 hours ago

ಪರಪ್ಪನ ಅಗ್ರಹಾರ ಜೈಲಿನಲ್ಲಿ ಪವಿತ್ರ ಗೌಡಗೆ ವಿಶೇಷ ಸೌಲಭ್ಯ ಆರೋಪ: ಸಂಧ್ಯಾ ನಾಗರಾಜ್ ಮತ್ತೊಂದು ಆಡಿಯೋ ಬಿಡುಗಡೆ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೆಲ ಕೈದಿಗಳಿಗೆ ವಿಶೇಷ ಸೌಲಭ್ಯಗಳು ಹಾಗೂ ರಾಜಾತಿಥ್ಯದ ರೀತಿಯ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂಬ…

1 day ago