Categories: Latest

ರಾಂಪೂರ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರ ಬದಲಾವಣೆಗೆ ವಿದ್ಯಾರ್ಥಿಗಳ ಪಟ್ಟು

ಬಾಗಲಕೋಟೆ: ಜಿಲ್ಲೆಯ ಬಾಗಲಕೋಟೆ ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜು ರಾಂಪೂರ (ಆರ್.ಸಿ) ಗ್ರಾಮದಲ್ಲಿ ಇಂದು ವಿದ್ಯಾರ್ಥಿಗಳು ಅತಿಥಿ ಉಪನ್ಯಾಸಕರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಈ ಪ್ರತಿಭಟನೆ ವಿಷಯ ತಿಳಿದು ನಮ್ಮ ವರದಿಗಾರರು ಕಾಲೇಜಿಗೆ ಭೇಟಿ ನೀಡಿ ಪ್ರತಿಭಟನೆ ಕುರಿತು ವಿದ್ಯಾರ್ಥಿಗಳನ್ನು ಕೇಳಿದಾಗ ವಿದ್ಯಾರ್ಥಿಗಳು ಹಲವಾರು ಸಮಸ್ಯೆಗಳ ಪಟ್ಟಿಯನ್ನು ಅತಿಥಿ ಉಪನ್ಯಾಸಕರ ಕುರಿತು ತಿಳಿಸಿದ್ದಾರೆ. ಈ 2026-27 ನೇ ಶೈಕ್ಷಣಿಕ ಸಾಲಿನಲ್ಲಿ ಮೂರು ವಿಷಯಗಳಿಗೆ ಮೂವರು ಅತಿಥಿ ಉಪನ್ಯಾಸಕರು ಈ ಕಾಲೇಜಿನಲ್ಲಿ ನೇಮಕಗೊಂಡಿದ್ದಾರೆ.
ಆದರೆ ಎರಡು ವಿಷಯಗಳಾದ ಅರ್ಥಶಾಸ್ತ್ರ ಮತ್ತು ಸಮಾಜ ಶಾಸ್ತ್ರ ವಿಷಯಗಳ ಶಿಕ್ಷಕರು ಹೇಳಿದ ಪಾಠ ಬೋಧನೆ ಯಾವುದೇ ವಿದ್ಯಾರ್ಥಿಗಳಿಗೆ ಅರ್ಥವಾಗುತ್ತಿಲ್ಲವೆಂದು ತಮ್ಮ ವೇದನೆಯನ್ನು ಹಂಚಿಕೊಂಡಿದ್ದಾರೆ. ಕೆಲವು ವಿದ್ಯಾರ್ಥಿಗಳಿಗೆ ಅರ್ಥಶಾಸ್ತ್ರದ ಅತಿಥಿ ಶಿಕ್ಷಕರು ಬಾಯಿಗೆ ಬಂದಂತೆ ಬೈಯುತ್ತಾರೆ ಹಾಗೂ ಅವರ ವರ್ತನೆಗಳು ಸರಿ ಇಲ್ಲವೆಂದು ತಿಳಿಸಿದ್ದಾರೆ. ಹೀಗಾಗಿ ಈ ಮೊದಲಿದ್ದ ಅತಿಥಿ ಉಪನ್ಯಾಸಕರನ್ನೆ ಮುಂದುವರೆಸಿ ಇದೀಗ ಹೊಸದಾಗಿ ನೇಮಕಗೊಂಡ ಅತಿಥಿ ಉಪನ್ಯಾಸಕರು ನಮಗೆ ಬೇಡವೆಂದು ವಿದ್ಯಾರ್ಥಿಗಳು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ಅಷ್ಟೇ ಅಲ್ಲದೆ ಈ ಕಾಲೇಜಿನಲ್ಲಿ ವಿದ್ಯಾರ್ಥಿಗಳನ್ನು ಕೆಲವರು ಶಿಕ್ಷಕರು ಟಾರ್ಗೆಟ್ ಮಾಡಿ ಬೈಯುತ್ತಾರೆ ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ.

ಈ ವಿಷಯದ ಕುರಿತು ಕಾಲೇಜಿನ ಪ್ರಾಂಶುಪಾಲರಾದ ಎಸ್.ಎಸ್.ಮೇಟಿಯವರಿಗೆ ಕೇಳಿದಾಗ ಅತಿಥಿ ಉಪನ್ಯಾಸಕರ ನೇಮಕಾತಿ ಮೆರಿಟ್ ಆಧಾರದ ಮೇಲೆ ನಡೆಯುವುದರಿಂದ ಈಗಿರುವ ಅತಿಥಿ ಉಪನ್ಯಾಸಕರಿಗೆ ಅನುಭವ ಕಮ್ಮಿ ಇದ್ದು ಈ ರೀತಿ ಸಮಸ್ಯೆಯಾಗಿದೆ ಎಂದು ತಿಳಿಸಿದ್ದಾರೆ. ಆದರೂ ಸಹ ವಿದ್ಯಾರ್ಥಿಗಳಿಂದ ಲಿಖಿತವಾಗಿ ಸಮಸ್ಯೆಗಳ ಕುರಿತು ಅರ್ಜಿಯನ್ನು ಪಡೆದುಕೊಂಡಿದ್ದೇವೆ ಅದನ್ನು ನಮ್ಮ ಮೇಲಾಧಿಕಾರಿಗಳಿಗೆ ಕಳುಹಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುತ್ತೇವೆ ಎಂದು ವರದಿಗಾರರಿಗೆ ತಿಳಿಸಿದ್ದಾರೆ.
ಈ ವಿಷಯದ ಕುರಿತು ಜಿಲ್ಲೆಯ ಕಾಲೇಜುಗಳ ಉಪ ನಿರ್ದೇಶಕರಾದ ಪುಂಡಲೀಕ ಕಾಂಬಳೆ ಯವರ ಜೊತೆ ವರದಿಗಾರರು ಕರೆ ಮೂಲಕ ಮಾತನಾಡಿದಾಗ ವಿದ್ಯಾರ್ಥಿಗಳಿಗೆ ವಿಷಯ ಅರ್ಥವಾಗಿಲ್ಲವೆಂದರೆ ಹಾಗೂ ಅತಿಥಿ ಶಿಕ್ಷಕರ ವರ್ತನೆಗಳು ಸರಿ ಇಲ್ಲ ಎಂಬ ಆರೋಪಗಳು ಕಂಡು ಬಂದಲ್ಲಿ, ವಿದ್ಯಾರ್ಥಿಗಳ ಅಭಿಪ್ರಾಯ ಮತ್ತು ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರುಗಳ ಹೇಳಿಕೆಯ ಆಧಾರದ ಮೇಲೆ ಪ್ರಾಂಶುಪಾಲರು ಅಂತವರನ್ನು ತೆಗೆದುಹಾಕಲು ಅವಕಾಶವಿದೆ ಎಂದಿದ್ದಾರೆ.
ಆದರೆ ಇದೇ ಮಾಹಿತಿಯನ್ನು ಕಾಲೇಜಿನ ಪ್ರಾಂಶುಪಾಲರಿಗೆ ತಿಳಿಸಿದಾಗ ಅತಿಥಿ ಶಿಕ್ಷಕರನ್ನು ನಾವು ತೆಗೆದುಹಾಕಲು ಆಗುವುದಿಲ್ಲ ನಮ್ಮ ಮೇಲಾಧಿಕಾರಿಗಳಿಗೆ ಮಾತ್ರ ತೆಗೆದುಹಾಕಲು ಅವಕಾಶವಿದೆ ಎಂದು ಹೇಳಿದ್ದಾರೆ. ಒಟ್ಟಾರೆಯಾಗಿ ಈ ವಿಷಯದಲ್ಲಿ ಒಬ್ಬರಿಗೊಬ್ಬರ ಮೇಲೆ ಜಾರಿಕೊಳ್ಳುವುದನ್ನು ಬಿಟ್ಟು ವಿದ್ಯಾರ್ಥಿಗಳ ಕಲಿಕೆಗೆ ಹಾಗೂ ಉತ್ತಮ ಶಿಕ್ಷಕರ ನೇಮಕಾತಿಗೆ ಅವಕಾಶ ಮಾಡಿಕೊಡಬೇಕು.

ಈಗಾಗಲೇ ಈ ವಿಷಯವು ಮಾನ್ಯ ಉಪ ನಿರ್ದೇಶಕರ ಗಮನಕ್ಕೆ ಬಂದಿದ್ದು ವಿದ್ಯಾರ್ಥಿಗಳ ಶೈಕ್ಷಣಿಕ ಬಲವರ್ಧನೆಗೆ ಯಾವ ರೀತಿಯ ಪರಿಹಾರ ಒದಗಿಸಿ ಕೊಡುತ್ತಾರೆ ಎಂದು ಕಾದು ನೋಡಬೇಕಿದೆ.

ವರದಿ: ವಿಶ್ವನಾಥ ಭಜಂತ್ರಿ

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

10 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

10 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

10 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

10 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

10 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

10 hours ago