ಬಸವನ ಬಾಗೇವಾಡಿ ತಾಲ್ಲೂಕಿನ ಸರಕಾರಿ ಕಸ್ತೂರ ಬಾ ಗಾಂಧಿ ಬಾಲಕಿಯರ ವಸತಿ ನಿಲಯ ಕಾಮನಕೇರಿಯಲ್ಲಿ ವಿದ್ಯಾರ್ಥಿಗಳು ಸುಮಾರು ಒಂದು ವಾರದಿಂದ ಕುಡಿಯುವ ಹಾಗೂ ಬಳಕೆಗೆ ನೀರಿನ ಸಮಸ್ಯೆ ಎದುರಿಸುತ್ತಿದ್ದು ಯಾವೊಬ್ಬ ಅಧಿಕಾರಿಯೂ ಇತ್ತ ಗಮನ ಹರಿಸದೆ ಇರುವುದು ಶೋಚನೀಯ. ವಸತಿ ನಿಲಯದಲ್ಲಿ ಸುಮಾರು 142 ಹೆಣ್ಣು ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು,ಅದರಲ್ಲಿ ವಿಶೇಷವಾಗಿ ಬಡ ಮಕ್ಕಳು,ಅನಾಥ ಮಕ್ಕಳು, ದೇವದಾಸಿಯ ರ ಮಕ್ಕಳು ಹಾಗೂ ವಲಸೆ ಹೋದ ಮಕ್ಕಳು ಸುಮಾರು 10 ವರ್ಷ ಮೇಲ್ಪಟ್ಟು ಮತ್ತು 14 ವರ್ಷದ ಒಳಗಿನ 6 ರಿಂದ 9 ನೆಯ ತರಗತಿಯ ವಿದ್ಯಾರ್ಥಿಗಳು ವಾಸವಿದ್ದು ಮೊದಲಿಗೆ ಇದ್ದ ಬೋರ್ ವೆಲ್ ನ ನೀರು ಸಂಪೂರ್ಣ ಕಡಿಮೆಯಾಗಿದ್ದು. ಪ್ರತಿ ದಿನ ಮಕ್ಕಳಿಗೆ ಸ್ನಾನ ಮಾಡಲು, ಬಟ್ಟೆ ತೊಳೆಯಲು, ಅಡುಗೆ ಮಾಡಲು ಹಾಗೂ ವಿದ್ಯಾರ್ಥಿಗಳು ದಿನ ನಿತ್ಯ ಕುಡಿಯಲು ಸರಿಯಾಗಿ ನೀರಿನ ವ್ಯವಸ್ಥೆ ಇಲ್ಲದೆ ಇರುವುದು ಕಂಡು ಬಂದಿರುತ್ತದೆ. ಇದರ ಬಗ್ಗೆ ಹಲವು ಬಾರಿ ಶಾಲಾ ಮಕ್ಕಳಿಗೆ ಬೋರ್ ವೆಲ್ ವ್ಯವಸ್ಥೆ ಕಲ್ಪಿಸಲು ಹಲವು ಬಾರಿ ಗುರುಮಾತೆಯರು ಮನವಿ ಮಾಡಿಕೊಂಡಿದ್ದರು ಸಹ ಯಾವುದೇ ಪ್ರಯೋಜನ ಇನ್ನುವರೆಗೂ ಆಗಿರುವುದಿಲ್ಲ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ವಸತಿ ನಿಲಯಕ್ಕೆ ಬೇಟಿ ಕೊಟ್ಟು ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸಬೇಕು ಎಂಬುದು ಪತ್ರಿಕೆಯ ಆಶಯವಾಗಿದೆ.
ವರದಿ:ಸಂಗಪ್ಪ ಚಲವಾದಿ
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…