Latest

ಕುಡಿಯುವ ನೀರಿನ ಸಮಸ್ಯೆಯಿಂದ ಬಳಲುತ್ತಿರುವ ಕಸ್ತೂರಬಾ ವಸತಿ ನಿಲಯದ ವಿದ್ಯಾರ್ಥಿಗಳು.

ಬಸವನ ಬಾಗೇವಾಡಿ ತಾಲ್ಲೂಕಿನ ಸರಕಾರಿ ಕಸ್ತೂರ ಬಾ ಗಾಂಧಿ ಬಾಲಕಿಯರ ವಸತಿ ನಿಲಯ ಕಾಮನಕೇರಿಯಲ್ಲಿ ವಿದ್ಯಾರ್ಥಿಗಳು ಸುಮಾರು ಒಂದು ವಾರದಿಂದ ಕುಡಿಯುವ ಹಾಗೂ ಬಳಕೆಗೆ ನೀರಿನ ಸಮಸ್ಯೆ ಎದುರಿಸುತ್ತಿದ್ದು ಯಾವೊಬ್ಬ ಅಧಿಕಾರಿಯೂ ಇತ್ತ ಗಮನ ಹರಿಸದೆ ಇರುವುದು ಶೋಚನೀಯ. ವಸತಿ ನಿಲಯದಲ್ಲಿ ಸುಮಾರು 142 ಹೆಣ್ಣು ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು,ಅದರಲ್ಲಿ ವಿಶೇಷವಾಗಿ ಬಡ ಮಕ್ಕಳು,ಅನಾಥ ಮಕ್ಕಳು, ದೇವದಾಸಿಯ ರ ಮಕ್ಕಳು ಹಾಗೂ ವಲಸೆ ಹೋದ ಮಕ್ಕಳು ಸುಮಾರು 10 ವರ್ಷ ಮೇಲ್ಪಟ್ಟು ಮತ್ತು 14 ವರ್ಷದ ಒಳಗಿನ 6 ರಿಂದ 9 ನೆಯ ತರಗತಿಯ ವಿದ್ಯಾರ್ಥಿಗಳು ವಾಸವಿದ್ದು ಮೊದಲಿಗೆ ಇದ್ದ ಬೋರ್ ವೆಲ್ ನ ನೀರು ಸಂಪೂರ್ಣ ಕಡಿಮೆಯಾಗಿದ್ದು. ಪ್ರತಿ ದಿನ ಮಕ್ಕಳಿಗೆ ಸ್ನಾನ ಮಾಡಲು, ಬಟ್ಟೆ ತೊಳೆಯಲು, ಅಡುಗೆ ಮಾಡಲು ಹಾಗೂ ವಿದ್ಯಾರ್ಥಿಗಳು ದಿನ ನಿತ್ಯ ಕುಡಿಯಲು ಸರಿಯಾಗಿ ನೀರಿನ ವ್ಯವಸ್ಥೆ ಇಲ್ಲದೆ ಇರುವುದು ಕಂಡು ಬಂದಿರುತ್ತದೆ. ಇದರ ಬಗ್ಗೆ ಹಲವು ಬಾರಿ ಶಾಲಾ ಮಕ್ಕಳಿಗೆ ಬೋರ್ ವೆಲ್ ವ್ಯವಸ್ಥೆ ಕಲ್ಪಿಸಲು ಹಲವು ಬಾರಿ ಗುರುಮಾತೆಯರು ಮನವಿ ಮಾಡಿಕೊಂಡಿದ್ದರು ಸಹ ಯಾವುದೇ ಪ್ರಯೋಜನ ಇನ್ನುವರೆಗೂ ಆಗಿರುವುದಿಲ್ಲ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ವಸತಿ ನಿಲಯಕ್ಕೆ ಬೇಟಿ ಕೊಟ್ಟು ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸಬೇಕು ಎಂಬುದು ಪತ್ರಿಕೆಯ ಆಶಯವಾಗಿದೆ.

ವರದಿ:ಸಂಗಪ್ಪ ಚಲವಾದಿ

ಭ್ರಷ್ಟರ ಬೇಟೆ

Recent Posts

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

49 seconds ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

2 minutes ago

ಹುಬ್ಬಳ್ಳಿ–ಅಂಕೋಲಾ ರೈಲ್ವೆ ಯೋಜನೆಗೆ ಭೂಸ್ವಾಧೀನ ಅಧಿಕೃತ ಚಾಲನೆ

163 ಕಿ.ಮೀ. ಉದ್ದದ ಯೋಜನೆ; ಉತ್ತರ ಕನ್ನಡದ 40 ಗ್ರಾಮಗಳು ಭೂಸ್ವಾಧೀನ ವ್ಯಾಪ್ತಿಗೆ ಉತ್ತರ ಕನ್ನಡ: ಹಲವು ವರ್ಷಗಳಿಂದ ನನೆಗುದಿಗೆ…

3 minutes ago

ಪಾಂಡೆಗಾಂವ–ಕಂಗೋಳಿ ರಸ್ತೆ ಕೆಸರಿನ ಹೊಂಡ: ಜನರ ಆಕ್ರೋಶ, ಕಾಮಗಾರಿ ವಿಳಂಬವಾದರೆ ರಸ್ತೆ ತಡೆ ಎಚ್ಚರಿಕೆ

ಮಳೆ ಬಂದರೆ ಕೆಸರುಗದ್ದೆ; ವಿದ್ಯಾರ್ಥಿಗಳು, ವೃದ್ಧರು, ರೋಗಿಗಳ ಸಂಚಾರಕ್ಕೆ ಸಂಕಷ್ಟ — ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಕಾಗವಾಡ: ಬೆಳಗಾವಿ…

4 minutes ago

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

15 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

15 hours ago