Latest

ಕುಡಿಯುವ ನೀರಿನ ಸಮಸ್ಯೆಯಿಂದ ಬಳಲುತ್ತಿರುವ ಕಸ್ತೂರಬಾ ವಸತಿ ನಿಲಯದ ವಿದ್ಯಾರ್ಥಿಗಳು.

ಬಸವನ ಬಾಗೇವಾಡಿ ತಾಲ್ಲೂಕಿನ ಸರಕಾರಿ ಕಸ್ತೂರ ಬಾ ಗಾಂಧಿ ಬಾಲಕಿಯರ ವಸತಿ ನಿಲಯ ಕಾಮನಕೇರಿಯಲ್ಲಿ ವಿದ್ಯಾರ್ಥಿಗಳು ಸುಮಾರು ಒಂದು ವಾರದಿಂದ ಕುಡಿಯುವ ಹಾಗೂ ಬಳಕೆಗೆ ನೀರಿನ ಸಮಸ್ಯೆ ಎದುರಿಸುತ್ತಿದ್ದು ಯಾವೊಬ್ಬ ಅಧಿಕಾರಿಯೂ ಇತ್ತ ಗಮನ ಹರಿಸದೆ ಇರುವುದು ಶೋಚನೀಯ. ವಸತಿ ನಿಲಯದಲ್ಲಿ ಸುಮಾರು 142 ಹೆಣ್ಣು ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು,ಅದರಲ್ಲಿ ವಿಶೇಷವಾಗಿ ಬಡ ಮಕ್ಕಳು,ಅನಾಥ ಮಕ್ಕಳು, ದೇವದಾಸಿಯ ರ ಮಕ್ಕಳು ಹಾಗೂ ವಲಸೆ ಹೋದ ಮಕ್ಕಳು ಸುಮಾರು 10 ವರ್ಷ ಮೇಲ್ಪಟ್ಟು ಮತ್ತು 14 ವರ್ಷದ ಒಳಗಿನ 6 ರಿಂದ 9 ನೆಯ ತರಗತಿಯ ವಿದ್ಯಾರ್ಥಿಗಳು ವಾಸವಿದ್ದು ಮೊದಲಿಗೆ ಇದ್ದ ಬೋರ್ ವೆಲ್ ನ ನೀರು ಸಂಪೂರ್ಣ ಕಡಿಮೆಯಾಗಿದ್ದು. ಪ್ರತಿ ದಿನ ಮಕ್ಕಳಿಗೆ ಸ್ನಾನ ಮಾಡಲು, ಬಟ್ಟೆ ತೊಳೆಯಲು, ಅಡುಗೆ ಮಾಡಲು ಹಾಗೂ ವಿದ್ಯಾರ್ಥಿಗಳು ದಿನ ನಿತ್ಯ ಕುಡಿಯಲು ಸರಿಯಾಗಿ ನೀರಿನ ವ್ಯವಸ್ಥೆ ಇಲ್ಲದೆ ಇರುವುದು ಕಂಡು ಬಂದಿರುತ್ತದೆ. ಇದರ ಬಗ್ಗೆ ಹಲವು ಬಾರಿ ಶಾಲಾ ಮಕ್ಕಳಿಗೆ ಬೋರ್ ವೆಲ್ ವ್ಯವಸ್ಥೆ ಕಲ್ಪಿಸಲು ಹಲವು ಬಾರಿ ಗುರುಮಾತೆಯರು ಮನವಿ ಮಾಡಿಕೊಂಡಿದ್ದರು ಸಹ ಯಾವುದೇ ಪ್ರಯೋಜನ ಇನ್ನುವರೆಗೂ ಆಗಿರುವುದಿಲ್ಲ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ವಸತಿ ನಿಲಯಕ್ಕೆ ಬೇಟಿ ಕೊಟ್ಟು ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸಬೇಕು ಎಂಬುದು ಪತ್ರಿಕೆಯ ಆಶಯವಾಗಿದೆ.

ವರದಿ:ಸಂಗಪ್ಪ ಚಲವಾದಿ

ಭ್ರಷ್ಟರ ಬೇಟೆ

Recent Posts

ಕುಡಿತದ ದುರಂತ ಅಂತ್ಯ: ಆಸ್ತಿ ಹಣದ ಜಗಳಕ್ಕೆ ತಾಯಿಯನ್ನೇ ಕೊಂದ ಮಗಳು-ಮೊಮ್ಮಗ!

ಬೆಂಗಳೂರು ನಗರದ ಕೆಂಗೇರಿ ಠಾಣಾ ವ್ಯಾಪ್ತಿಯ ಸುಭಾಷ್ ನಗರದಲ್ಲಿ ನಡೆದ ಭೀಕರ ಘಟನೆ ಒಂದು ಕುಟುಂಬದ ದುಸ್ಥಿತಿಯನ್ನು ಬಯಲಿಗೆಳೆದಿದೆ. ಮದ್ಯಪಾನದ…

3 hours ago

ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ: ಪ್ರೌಢಶಾಲಾ ಶಿಕ್ಷಕಿ ಬಂಧನ

ಅಮೆರಿಕದ ಜಾರ್ಜಿಯಾ ರಾಜ್ಯದಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ಪ್ರೌಢಶಾಲಾ ಶಿಕ್ಷಕಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ…

3 hours ago

ಬಿಡದಿ ಟೌನ್‌ಶಿಪ್‌ ವಿರೋಧ ನಾಟಕ: ಅಲ್ಲಿ ಅನಿತಾ ಕುಮಾರಸ್ವಾಮಿ 100 ಎಕರೆ ಜಮೀನಿದೆ, ಕುಮಾರಸ್ವಾಮಿ ವಿರುದ್ಧ ಎಂ.ಬಿ. ಪಾಟೀಲ್ ವಾಗ್ದಾಳಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

7 hours ago

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಆರ್‌ಡಿಪಿಆರ್ ಎಇಇ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಇಲಾಖೆಯ ಸಹಾಯಕ…

7 hours ago

ಸಚಿವ ಸತೀಶ್ ಜಾರಕಿಹೊಳಿ ಅಳಿಯ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಮನೆ ಸೇರಿ 6 ಕಡೆ ಇಡಿ ದಾಳಿ

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…

7 hours ago

ಮದುವೆಗೆ ಕೆಲವೇ ದಿನ ಬಾಕಿ… ಭಾವಿ ಪತ್ನಿಯಿಂದಲೇ 400 ಅಡಿ ಕಣಿವೆಗೆ ತಳ್ಳಿ ಹತ್ಯೆ!

ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…

7 hours ago