ಮುಂಡಗೋಡ: ದಿನಾಂಕ 16 ರಂದು ಯಲ್ಲಾಪುರದಲ್ಲಿ ನಡೆದ ಜಿಲ್ಲಾಮಟ್ಟದ ಚೆಸ್ ಸ್ಪರ್ಧೆಯಲ್ಲಿ ಮುಂಡಗೋಡ ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಸುಳ್ಳಳ್ಳಿ ಶಾಲೆಯ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ ಆಗಿದ್ದಾರೆ.
ಬಾಲಕರ ವಿಭಾಗದಲ್ಲಿ ವಿನಾಯಕ ಬಸವಣ್ಣಿ ಪಾಟೀಲ (6ನೇ ತರಗತಿ),ಬಾಲಕಿಯರ ವಿಭಾಗದಲ್ಲಿ ಸುನಿತಾ ವಿಠ್ಠು ಯಮಕರ(7ನೇ ತರಗತಿ).
ಶಾಲಾ ಮಕ್ಕಳಿಗೆ ಪಾಠದೊಂದಿಗೆ ವಿವಿಧ ಆಟಗಳನ್ನು ಶಾಲೆಯಲ್ಲಿರುವ ಮುಖ್ಯ ಶಿಕ್ಷಕರಾದ ಶ್ರೀ ನಾರಾಯಣ ಗೊಟಗೋಡಿ,ಸಹ ಶಿಕ್ಷಕರಾದ ಶ್ರೀ ನಾಗರಾಜ ಆರ್.ಕೆ,ಅತಿಥಿ ಶಿಕ್ಷಕರಾದ ಶ್ರೀ ಶಿವಪ್ಪ ಚಿಟಗೇರಿ ಇವರುಗಳು ವಿದ್ಯಾರ್ಥಿಗಳಿಗೆ ಆಟದ ಸಂಪೂರ್ಣ ತರಬೇತಿಯನ್ನು ನೀಡುತ್ತಿದ್ದಾರೆ.
ವಿಜೇತ ಆಟಗಾರರಿಗೆ ಹಾಗೂ ಭಾಗವಹಿಸಿದ ಎಲ್ಲಾ ಆಟಗಾರರಿಗೆ ಸುಳ್ಳಳ್ಳಿ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು ಎಸ್ ಡಿ ಎಂ ಸಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಗ್ರಾಮದ ಎಲ್ಲಾ ನಾಗರಿಕರು, ತಾಲೂಕಿನ ಎಲ್ಲಾ ಶಿಕ್ಷಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ತಾಲೂಕಿನ ದೈಹಿಕ ಶಿಕ್ಷಣ ಪರಿವೀಕ್ಷಕರು, ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕ ಘಟಕದ ಅಧ್ಯಕ್ಷರು ಅಭಿನಂದಿಸಿದ್ದಾರೆ.
ವರದಿ:ಮಂಜುನಾಥ ಎಫ್ ಎಚ್.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…