ಬಾಗಲಕೋಟೆ ತಾಲೂಕಿನ ನಾಯನೇಗಲಿ ಗ್ರಾಮದಲ್ಲಿ ಶ್ರೀ ಹರಳೇಶ್ವರ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಶಿಕ್ಷಕರ ಕೊರತೆ ಮತ್ತು ಕೆಲವು ಶಿಕ್ಷಕರು ಸರಿಯಾಗಿ ಪಾಠ ಬೋಧನೆ ಮಾಡುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು. ಈ ಹರಳೇಶ್ವರ ಪ್ರೌಢ ಶಾಲೆಯು ಅನುದಾನಿತ ಶಾಲೆಯಾಗಿದ್ದು ಇಲ್ಲಿ ಶಿಕ್ಷಕರ ಕೊರತೆಯಿಂದ ವಿದ್ಯಾರ್ಥಿಗಳು ಬೇಸತ್ತು ಹೋಗಿದ್ದಾರೆ. ಅಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿರುವ ವಿದ್ಯಾರ್ಥಿಯನ್ನು ಕೇಳಿದಾಗ ನಮಗೆ ಕನ್ನಡ, ಗಣಿತ ವಿಷಯಕ್ಕೆ ಮಾತ್ರ ಶಿಕ್ಷಕರಿದ್ದು ಇನ್ನುಳಿದ ವಿಷಯಗಳಿಗೆ ಶಾಶ್ವತ ಶಿಕ್ಷಕರಿಲ್ಲ ಎಂಬುದಾಗಿ ತಿಳಿಸಿದರು. ಈ ಹರಳೇಶ್ವರ ಪ್ರೌಢ ಶಾಲಾ ಸಂಸ್ಥೆಯ ಅಧ್ಯಕ್ಷ ಅದೆಲ್ಲೋ ಕುಳಿತು ತನ್ನ ಸಂಸ್ಥೆಯನ್ನು ನಡೆಸುತ್ತಿದ್ದಾನೆ. ಒಂದು ಸಂಸ್ಥೆಯ ಅಧ್ಯಕ್ಷ ಎಂಬುದನ್ನೇ ಮರೆತು ಬೇಕಾಬಿಟ್ಟಿಯಾಗಿ ವಿದ್ಯಾರ್ಥಿಗಳ ಜೀವನದ ಜೊತೆ ಚೆಲ್ಲಾಟ ಆಡುತ್ತಿದ್ದಾನೆ. ಈ ಸಂಸ್ಥೆಯ ಅಧ್ಯಕ್ಷನಾಗಿ ಶಾಲೆಗೆ ಒಂದು ದಿನ ಕಾಲಿಟಿಲ್ಲ ಮತ್ತು ವಿದ್ಯಾರ್ಥಿಗಳ ಕುಂದು ಕೊರತೆ ಬಗ್ಗೆ ಆಲಿಸಿಲ್ಲ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ವಿಚಾರ ತಿಳಿಸಿದರು ಸಹ ಅವರು ಕೂಡ ನಿಸ್ಸಹಾಯಕರಾಗಿದ್ದಾರೆ.
ಈ ಶಾಲೆಯ ಮುಖ್ಯೋಪಾಧ್ಯಾಯರಾದ ಎಸ್.ಕೆ.ಕಂದಗಲ್ ರವರು ಮಾತನಾಡಿ ಇದಕ್ಕೊಂದು ಶಾಶ್ವತ ಪರಿಹಾರ ಒದಗಿಸಿ ಕೊಡುವ ಕೆಲಸವನ್ನು ಮಾಡುತ್ತೇವೆಂದು ವಿದ್ಯಾರ್ಥಿಗಳ ಮನವೊಲಿಸುವ ಪ್ರಯತ್ನ ಮಾಡಿದರು.
ವರದಿ- ಮುತ್ತಪ್ಪ ಬಡಿಗೇರ
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…