ಬಾಗಲಕೋಟೆ ತಾಲೂಕಿನ ನಾಯನೇಗಲಿ ಗ್ರಾಮದಲ್ಲಿ ಶ್ರೀ ಹರಳೇಶ್ವರ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಶಿಕ್ಷಕರ ಕೊರತೆ ಮತ್ತು ಕೆಲವು ಶಿಕ್ಷಕರು ಸರಿಯಾಗಿ ಪಾಠ ಬೋಧನೆ ಮಾಡುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು. ಈ ಹರಳೇಶ್ವರ ಪ್ರೌಢ ಶಾಲೆಯು ಅನುದಾನಿತ ಶಾಲೆಯಾಗಿದ್ದು ಇಲ್ಲಿ ಶಿಕ್ಷಕರ ಕೊರತೆಯಿಂದ ವಿದ್ಯಾರ್ಥಿಗಳು ಬೇಸತ್ತು ಹೋಗಿದ್ದಾರೆ. ಅಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿರುವ ವಿದ್ಯಾರ್ಥಿಯನ್ನು ಕೇಳಿದಾಗ ನಮಗೆ ಕನ್ನಡ, ಗಣಿತ ವಿಷಯಕ್ಕೆ ಮಾತ್ರ ಶಿಕ್ಷಕರಿದ್ದು ಇನ್ನುಳಿದ ವಿಷಯಗಳಿಗೆ ಶಾಶ್ವತ ಶಿಕ್ಷಕರಿಲ್ಲ ಎಂಬುದಾಗಿ ತಿಳಿಸಿದರು. ಈ ಹರಳೇಶ್ವರ ಪ್ರೌಢ ಶಾಲಾ ಸಂಸ್ಥೆಯ ಅಧ್ಯಕ್ಷ ಅದೆಲ್ಲೋ ಕುಳಿತು ತನ್ನ ಸಂಸ್ಥೆಯನ್ನು ನಡೆಸುತ್ತಿದ್ದಾನೆ. ಒಂದು ಸಂಸ್ಥೆಯ ಅಧ್ಯಕ್ಷ ಎಂಬುದನ್ನೇ ಮರೆತು ಬೇಕಾಬಿಟ್ಟಿಯಾಗಿ ವಿದ್ಯಾರ್ಥಿಗಳ ಜೀವನದ ಜೊತೆ ಚೆಲ್ಲಾಟ ಆಡುತ್ತಿದ್ದಾನೆ. ಈ ಸಂಸ್ಥೆಯ ಅಧ್ಯಕ್ಷನಾಗಿ ಶಾಲೆಗೆ ಒಂದು ದಿನ ಕಾಲಿಟಿಲ್ಲ ಮತ್ತು ವಿದ್ಯಾರ್ಥಿಗಳ ಕುಂದು ಕೊರತೆ ಬಗ್ಗೆ ಆಲಿಸಿಲ್ಲ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ವಿಚಾರ ತಿಳಿಸಿದರು ಸಹ ಅವರು ಕೂಡ ನಿಸ್ಸಹಾಯಕರಾಗಿದ್ದಾರೆ.
ಈ ಶಾಲೆಯ ಮುಖ್ಯೋಪಾಧ್ಯಾಯರಾದ ಎಸ್.ಕೆ.ಕಂದಗಲ್ ರವರು ಮಾತನಾಡಿ ಇದಕ್ಕೊಂದು ಶಾಶ್ವತ ಪರಿಹಾರ ಒದಗಿಸಿ ಕೊಡುವ ಕೆಲಸವನ್ನು ಮಾಡುತ್ತೇವೆಂದು ವಿದ್ಯಾರ್ಥಿಗಳ ಮನವೊಲಿಸುವ ಪ್ರಯತ್ನ ಮಾಡಿದರು.
ವರದಿ- ಮುತ್ತಪ್ಪ ಬಡಿಗೇರ
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…