ಬಾಗಲಕೋಟೆ ತಾಲೂಕಿನ ನಾಯನೇಗಲಿ ಗ್ರಾಮದಲ್ಲಿ ಶ್ರೀ ಹರಳೇಶ್ವರ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಶಿಕ್ಷಕರ ಕೊರತೆ ಮತ್ತು ಕೆಲವು ಶಿಕ್ಷಕರು ಸರಿಯಾಗಿ ಪಾಠ ಬೋಧನೆ ಮಾಡುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು. ಈ ಹರಳೇಶ್ವರ ಪ್ರೌಢ ಶಾಲೆಯು ಅನುದಾನಿತ ಶಾಲೆಯಾಗಿದ್ದು ಇಲ್ಲಿ ಶಿಕ್ಷಕರ ಕೊರತೆಯಿಂದ ವಿದ್ಯಾರ್ಥಿಗಳು ಬೇಸತ್ತು ಹೋಗಿದ್ದಾರೆ. ಅಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿರುವ ವಿದ್ಯಾರ್ಥಿಯನ್ನು ಕೇಳಿದಾಗ ನಮಗೆ ಕನ್ನಡ, ಗಣಿತ ವಿಷಯಕ್ಕೆ ಮಾತ್ರ ಶಿಕ್ಷಕರಿದ್ದು ಇನ್ನುಳಿದ ವಿಷಯಗಳಿಗೆ ಶಾಶ್ವತ ಶಿಕ್ಷಕರಿಲ್ಲ ಎಂಬುದಾಗಿ ತಿಳಿಸಿದರು. ಈ ಹರಳೇಶ್ವರ ಪ್ರೌಢ ಶಾಲಾ ಸಂಸ್ಥೆಯ ಅಧ್ಯಕ್ಷ ಅದೆಲ್ಲೋ ಕುಳಿತು ತನ್ನ ಸಂಸ್ಥೆಯನ್ನು ನಡೆಸುತ್ತಿದ್ದಾನೆ. ಒಂದು ಸಂಸ್ಥೆಯ ಅಧ್ಯಕ್ಷ ಎಂಬುದನ್ನೇ ಮರೆತು ಬೇಕಾಬಿಟ್ಟಿಯಾಗಿ ವಿದ್ಯಾರ್ಥಿಗಳ ಜೀವನದ ಜೊತೆ ಚೆಲ್ಲಾಟ ಆಡುತ್ತಿದ್ದಾನೆ. ಈ ಸಂಸ್ಥೆಯ ಅಧ್ಯಕ್ಷನಾಗಿ ಶಾಲೆಗೆ ಒಂದು ದಿನ ಕಾಲಿಟಿಲ್ಲ ಮತ್ತು ವಿದ್ಯಾರ್ಥಿಗಳ ಕುಂದು ಕೊರತೆ ಬಗ್ಗೆ ಆಲಿಸಿಲ್ಲ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ವಿಚಾರ ತಿಳಿಸಿದರು ಸಹ ಅವರು ಕೂಡ ನಿಸ್ಸಹಾಯಕರಾಗಿದ್ದಾರೆ.
ಈ ಶಾಲೆಯ ಮುಖ್ಯೋಪಾಧ್ಯಾಯರಾದ ಎಸ್.ಕೆ.ಕಂದಗಲ್ ರವರು ಮಾತನಾಡಿ ಇದಕ್ಕೊಂದು ಶಾಶ್ವತ ಪರಿಹಾರ ಒದಗಿಸಿ ಕೊಡುವ ಕೆಲಸವನ್ನು ಮಾಡುತ್ತೇವೆಂದು ವಿದ್ಯಾರ್ಥಿಗಳ ಮನವೊಲಿಸುವ ಪ್ರಯತ್ನ ಮಾಡಿದರು.
ವರದಿ- ಮುತ್ತಪ್ಪ ಬಡಿಗೇರ
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…
ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…
ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…