ಬಾಗಲಕೋಟೆ ತಾಲೂಕಿನ ನಾಯನೇಗಲಿ ಗ್ರಾಮದಲ್ಲಿ ಶ್ರೀ ಹರಳೇಶ್ವರ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಶಿಕ್ಷಕರ ಕೊರತೆ ಮತ್ತು ಕೆಲವು ಶಿಕ್ಷಕರು ಸರಿಯಾಗಿ ಪಾಠ ಬೋಧನೆ ಮಾಡುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು. ಈ ಹರಳೇಶ್ವರ ಪ್ರೌಢ ಶಾಲೆಯು ಅನುದಾನಿತ ಶಾಲೆಯಾಗಿದ್ದು ಇಲ್ಲಿ ಶಿಕ್ಷಕರ ಕೊರತೆಯಿಂದ ವಿದ್ಯಾರ್ಥಿಗಳು ಬೇಸತ್ತು ಹೋಗಿದ್ದಾರೆ. ಅಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿರುವ ವಿದ್ಯಾರ್ಥಿಯನ್ನು ಕೇಳಿದಾಗ ನಮಗೆ ಕನ್ನಡ, ಗಣಿತ ವಿಷಯಕ್ಕೆ ಮಾತ್ರ ಶಿಕ್ಷಕರಿದ್ದು ಇನ್ನುಳಿದ ವಿಷಯಗಳಿಗೆ ಶಾಶ್ವತ ಶಿಕ್ಷಕರಿಲ್ಲ ಎಂಬುದಾಗಿ ತಿಳಿಸಿದರು. ಈ ಹರಳೇಶ್ವರ ಪ್ರೌಢ ಶಾಲಾ ಸಂಸ್ಥೆಯ ಅಧ್ಯಕ್ಷ ಅದೆಲ್ಲೋ ಕುಳಿತು ತನ್ನ ಸಂಸ್ಥೆಯನ್ನು ನಡೆಸುತ್ತಿದ್ದಾನೆ. ಒಂದು ಸಂಸ್ಥೆಯ ಅಧ್ಯಕ್ಷ ಎಂಬುದನ್ನೇ ಮರೆತು ಬೇಕಾಬಿಟ್ಟಿಯಾಗಿ ವಿದ್ಯಾರ್ಥಿಗಳ ಜೀವನದ ಜೊತೆ ಚೆಲ್ಲಾಟ ಆಡುತ್ತಿದ್ದಾನೆ. ಈ ಸಂಸ್ಥೆಯ ಅಧ್ಯಕ್ಷನಾಗಿ ಶಾಲೆಗೆ ಒಂದು ದಿನ ಕಾಲಿಟಿಲ್ಲ ಮತ್ತು ವಿದ್ಯಾರ್ಥಿಗಳ ಕುಂದು ಕೊರತೆ ಬಗ್ಗೆ ಆಲಿಸಿಲ್ಲ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ವಿಚಾರ ತಿಳಿಸಿದರು ಸಹ ಅವರು ಕೂಡ ನಿಸ್ಸಹಾಯಕರಾಗಿದ್ದಾರೆ.
ಈ ಶಾಲೆಯ ಮುಖ್ಯೋಪಾಧ್ಯಾಯರಾದ ಎಸ್.ಕೆ.ಕಂದಗಲ್ ರವರು ಮಾತನಾಡಿ ಇದಕ್ಕೊಂದು ಶಾಶ್ವತ ಪರಿಹಾರ ಒದಗಿಸಿ ಕೊಡುವ ಕೆಲಸವನ್ನು ಮಾಡುತ್ತೇವೆಂದು ವಿದ್ಯಾರ್ಥಿಗಳ ಮನವೊಲಿಸುವ ಪ್ರಯತ್ನ ಮಾಡಿದರು.
ವರದಿ- ಮುತ್ತಪ್ಪ ಬಡಿಗೇರ
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಅಕ್ರಮ ಸ್ಕ್ಯಾನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವೈದ್ಯರನ್ನು ಬಂಧಿಸಿರುವ ಘಟನೆ…
ಭೂಸ್ವಾಧೀನ ಸಂಬಂಧಿತ ಬಾಕಿ ಕಂದಾಯ ಪ್ರಕರಣವನ್ನು ಪರಿಹರಿಸಲು ಲಂಚ ಪಡೆಯುತ್ತಿದ್ದ ವೇಳೆ ಕೆಎಎಸ್ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಘಟನೆ…
ಇತ್ತೀಚಿನ ದಿನಗಳಲ್ಲಿ ದಾಂಪತ್ಯ ಜೀವನ ಸಣ್ಣಪುಟ್ಟ ವಿಚಾರಗಳಿಗೂ ಕುಸಿಯುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಹೊಂದಾಣಿಕೆಯ ಕೊರತೆ, ಅಕ್ರಮ ಸಂಬಂಧಗಳು ಸೇರಿದಂತೆ ಹಲವು…
ಮಾಜಿ ಪ್ರಧಾನಿ Rajiv Gandhi ಹತ್ಯೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸಿದ್ದ ಎ.ಜಿ. ಪೆರಾರಿವಾಲನ್ ಇದೀಗ ವಕೀಲರಾಗಿರುವುದು ಗಮನಸೆಳೆಯುವ ಬೆಳವಣಿಗೆಯಾಗಿದೆ. 2022ರಲ್ಲಿ…
ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ದುರಂತ ಘಟನೆ ಸಂಭವಿಸಿದೆ. ಪತಿಯ ಅನೈತಿಕ ಸಂಬಂಧ ಹಾಗೂ ನಿರಂತರ ದೈಹಿಕ-ಮಾನಸಿಕ…
ಹೈದರಾಬಾದ್: ಬಣ್ಣದ ಲೋಕದಲ್ಲಿ ಮತ್ತೆ ವಂಚನೆ ಆರೋಪ ಕೇಳಿಬಂದಿದ್ದು, ತೆಲುಗು ಬಿಗ್ಬಾಸ್ ಮೂಲಕ ಜನಪ್ರಿಯತೆ ಪಡೆದ ನಟಿ ಆಶು ರೆಡ್ಡಿ…