ಮದ್ದೂರು: ಕಾಲೇಜಿಗೆ ಹಾಗೂ ತಮ್ಮ ಊರುಗಳಿಗೆ ಹೋಗಬೇಕಾದಂತಹ ವಿದ್ಯಾರ್ಥಿಗಳು ಸರಿಯಾದ ರೀತಿಯ ಬಸ್ ವ್ಯವಸ್ಥೆ ಇಲ್ಲದ ಕಾರಣ ಇರುವ ಕೆಲವು ಬಸ್ಸುಗಳಲ್ಲಿ ಕುರಿಗಳ ಹಾಗೆ ತುಂಬಿಕೊಂಡು ಬಾಗಿಲಲ್ಲಿ ನೇತಾಡಿಕೊಂಡು ಹರಸಾಹಸ ಪಡುತ್ತಾ ಹೋಗುತ್ತಾರೆ. ಸಾರಿಗೆ ಇಲಾಖೆ ಹೆಚ್ಚಿನ ಬಸ್ಸುಗಳ ವ್ಯವಸ್ಥೆ ಕಲ್ಪಿಸದೆ ಇರುವ ಕಾರಣವೇ ವಿದ್ಯಾರ್ಥಿಗಳು ಬಾಗಿಲಲ್ಲಿ ನೇತಾಡಿಕೊಂಡು ಹರಸಾಹಸ ಪಡುತ್ತಿರುವುದು. ಇದು ಮದ್ದೂರು ಬಸ್ ಸ್ಟಾಪ್ ನಲ್ಲಿ ಕಂಡು ಬಂದಂತಹ ದೃಶ್ಯ. ಚಿಕ್ಕವರು, ದೊಡ್ಡವರು, ಗಂಡು, ಹೆಣ್ಣು ಯಾವುದನ್ನೂ ಲೆಕ್ಕಿಸದೆ ಕುರಿಗಳನ್ನು ತುಂಬಿಕೊಳ್ಳುವ ಹಾಗೆ ಬಸ್ಸಿನ ತುಂಬಾ ತುಂಬಿಕೊಂಡು ಬಾಗಿಲಲ್ಲು ಸಹ ಜೋತಾಡಿಕೊಂಡು ಹೋಗುತ್ತಿರುವುದನ್ನು ಕೆಲ ಸ್ಥಳೀಯರು ಚಿತ್ರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು. ಆದರೂ ಸಹ ಸಾರಿಗೆ ಇಲಾಖೆ ಎಚ್ಚೆತ್ತುಕೊಳ್ಳದಿರುವುದು ನಾಚಿಕೆಗೇಡಿನ ಸಂಗತಿ. ಹೆಚ್ಚಿನ ಬಸ್ಸುಗಳ ಆವಶ್ಯಕತೆ ಇದ್ದರೂ ಸಾರಿಗೆ ಇಲಾಖೆ ಕಲ್ಪಿಸದಿರುವುದನ್ನು ವಿರೋಧಿಸಿ ದಿನವೂ ವಿದ್ಯಾರ್ಥಿಗಳು ಸಾರಿಗೆ ಇಲಾಖೆಗೆ ಬೈದುಕೊಂಡೆ ಇರುವ ಬಸ್ಸಿನಲ್ಲಿ ಹರಸಾಹಸ ಪಡುತ್ತಾ ಚಲಿಸುತ್ತಿದ್ದಾರೆ.
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…
ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…
ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್ಐಆರ್…