ಮದ್ದೂರು: ಕಾಲೇಜಿಗೆ ಹಾಗೂ ತಮ್ಮ ಊರುಗಳಿಗೆ ಹೋಗಬೇಕಾದಂತಹ ವಿದ್ಯಾರ್ಥಿಗಳು ಸರಿಯಾದ ರೀತಿಯ ಬಸ್ ವ್ಯವಸ್ಥೆ ಇಲ್ಲದ ಕಾರಣ ಇರುವ ಕೆಲವು ಬಸ್ಸುಗಳಲ್ಲಿ ಕುರಿಗಳ ಹಾಗೆ ತುಂಬಿಕೊಂಡು ಬಾಗಿಲಲ್ಲಿ ನೇತಾಡಿಕೊಂಡು ಹರಸಾಹಸ ಪಡುತ್ತಾ ಹೋಗುತ್ತಾರೆ. ಸಾರಿಗೆ ಇಲಾಖೆ ಹೆಚ್ಚಿನ ಬಸ್ಸುಗಳ ವ್ಯವಸ್ಥೆ ಕಲ್ಪಿಸದೆ ಇರುವ ಕಾರಣವೇ ವಿದ್ಯಾರ್ಥಿಗಳು ಬಾಗಿಲಲ್ಲಿ ನೇತಾಡಿಕೊಂಡು ಹರಸಾಹಸ ಪಡುತ್ತಿರುವುದು. ಇದು ಮದ್ದೂರು ಬಸ್ ಸ್ಟಾಪ್ ನಲ್ಲಿ ಕಂಡು ಬಂದಂತಹ ದೃಶ್ಯ. ಚಿಕ್ಕವರು, ದೊಡ್ಡವರು, ಗಂಡು, ಹೆಣ್ಣು ಯಾವುದನ್ನೂ ಲೆಕ್ಕಿಸದೆ ಕುರಿಗಳನ್ನು ತುಂಬಿಕೊಳ್ಳುವ ಹಾಗೆ ಬಸ್ಸಿನ ತುಂಬಾ ತುಂಬಿಕೊಂಡು ಬಾಗಿಲಲ್ಲು ಸಹ ಜೋತಾಡಿಕೊಂಡು ಹೋಗುತ್ತಿರುವುದನ್ನು ಕೆಲ ಸ್ಥಳೀಯರು ಚಿತ್ರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು. ಆದರೂ ಸಹ ಸಾರಿಗೆ ಇಲಾಖೆ ಎಚ್ಚೆತ್ತುಕೊಳ್ಳದಿರುವುದು ನಾಚಿಕೆಗೇಡಿನ ಸಂಗತಿ. ಹೆಚ್ಚಿನ ಬಸ್ಸುಗಳ ಆವಶ್ಯಕತೆ ಇದ್ದರೂ ಸಾರಿಗೆ ಇಲಾಖೆ ಕಲ್ಪಿಸದಿರುವುದನ್ನು ವಿರೋಧಿಸಿ ದಿನವೂ ವಿದ್ಯಾರ್ಥಿಗಳು ಸಾರಿಗೆ ಇಲಾಖೆಗೆ ಬೈದುಕೊಂಡೆ ಇರುವ ಬಸ್ಸಿನಲ್ಲಿ ಹರಸಾಹಸ ಪಡುತ್ತಾ ಚಲಿಸುತ್ತಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…