ಮದ್ದೂರು: ಕಾಲೇಜಿಗೆ ಹಾಗೂ ತಮ್ಮ ಊರುಗಳಿಗೆ ಹೋಗಬೇಕಾದಂತಹ ವಿದ್ಯಾರ್ಥಿಗಳು ಸರಿಯಾದ ರೀತಿಯ ಬಸ್ ವ್ಯವಸ್ಥೆ ಇಲ್ಲದ ಕಾರಣ ಇರುವ ಕೆಲವು ಬಸ್ಸುಗಳಲ್ಲಿ ಕುರಿಗಳ ಹಾಗೆ ತುಂಬಿಕೊಂಡು ಬಾಗಿಲಲ್ಲಿ ನೇತಾಡಿಕೊಂಡು ಹರಸಾಹಸ ಪಡುತ್ತಾ ಹೋಗುತ್ತಾರೆ. ಸಾರಿಗೆ ಇಲಾಖೆ ಹೆಚ್ಚಿನ ಬಸ್ಸುಗಳ ವ್ಯವಸ್ಥೆ ಕಲ್ಪಿಸದೆ ಇರುವ ಕಾರಣವೇ ವಿದ್ಯಾರ್ಥಿಗಳು ಬಾಗಿಲಲ್ಲಿ ನೇತಾಡಿಕೊಂಡು ಹರಸಾಹಸ ಪಡುತ್ತಿರುವುದು. ಇದು ಮದ್ದೂರು ಬಸ್ ಸ್ಟಾಪ್ ನಲ್ಲಿ ಕಂಡು ಬಂದಂತಹ ದೃಶ್ಯ. ಚಿಕ್ಕವರು, ದೊಡ್ಡವರು, ಗಂಡು, ಹೆಣ್ಣು ಯಾವುದನ್ನೂ ಲೆಕ್ಕಿಸದೆ ಕುರಿಗಳನ್ನು ತುಂಬಿಕೊಳ್ಳುವ ಹಾಗೆ ಬಸ್ಸಿನ ತುಂಬಾ ತುಂಬಿಕೊಂಡು ಬಾಗಿಲಲ್ಲು ಸಹ ಜೋತಾಡಿಕೊಂಡು ಹೋಗುತ್ತಿರುವುದನ್ನು ಕೆಲ ಸ್ಥಳೀಯರು ಚಿತ್ರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು. ಆದರೂ ಸಹ ಸಾರಿಗೆ ಇಲಾಖೆ ಎಚ್ಚೆತ್ತುಕೊಳ್ಳದಿರುವುದು ನಾಚಿಕೆಗೇಡಿನ ಸಂಗತಿ. ಹೆಚ್ಚಿನ ಬಸ್ಸುಗಳ ಆವಶ್ಯಕತೆ ಇದ್ದರೂ ಸಾರಿಗೆ ಇಲಾಖೆ ಕಲ್ಪಿಸದಿರುವುದನ್ನು ವಿರೋಧಿಸಿ ದಿನವೂ ವಿದ್ಯಾರ್ಥಿಗಳು ಸಾರಿಗೆ ಇಲಾಖೆಗೆ ಬೈದುಕೊಂಡೆ ಇರುವ ಬಸ್ಸಿನಲ್ಲಿ ಹರಸಾಹಸ ಪಡುತ್ತಾ ಚಲಿಸುತ್ತಿದ್ದಾರೆ.
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…
ಬೆಂಗಳೂರು: ಶಸ್ತ್ರಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಚಿನ್ನಾಭರಣ ಕಳವು ಮಾಡಿದ್ದ ಆರೋಪದ ಮೇಲೆ ಆಸ್ಪತ್ರೆಯ ಮಹಿಳಾ ಸಿಬ್ಬಂದಿಯನ್ನು ಹೆಣ್ಣೂರು…