Latest

ಮಳೆಯಲ್ಲಿ ನಿಂತು ಸರ್ಕಾರಕ್ಕೆ ಧಿಕ್ಕಾರ ಕೂಗುತ್ತಿರುವ ವಿದ್ಯಾರ್ಥಿಗಳು! ಕಾರಣವೇನು ಗೊತ್ತೆ?

ಬೆಂಗಳೂರು: ಸುಮ್ಮನಹಳ್ಳಿ ಹತ್ತಿರ ಇರುವಂತಹ ಸಜ್ಜೆಪಾಳ್ಯ, ಅಂಜನಗರ, ದಿನ್ನೂರು, ಹೆಬ್ಬಾಳದ ಬಳಿ ಗುಡ್ಡದಹಳ್ಳಿ ಮತ್ತು ಮಾಳಗಳ. ಸೇರಿದಂತೆ ಬೆಂಗಳೂರು ಉತ್ತರದ ಸುಮಾರು 6 ಬಿ.ಸಿ.ಎಂ ಹಾಸ್ಟೆಲ್ ಗಳನ್ನು ಯಲಹಂಕದ ಬಳಿ ಇರುವ ಮುತ್ತುಗದ ಹಳ್ಳಿ, ಶಿವಕೋಟೆ ಗ್ರಾಮ ಪಂಚಾಯಿತಿ, ಹೆಸರಘಟ್ಟ ಹೋಬಳಿ ಹತ್ತಿರ ವರ್ಗಾವಣೆ ಮಾಡುತ್ತಿದ್ದು ಹೊಸ ಹಾಸ್ಟೆಲ್ ಕಾಲೇಜುಗಳಿಗೆ ತುಂಬಾ ದೂರವಿದ್ದು ಸುಮಾರು 40 ರಿಂದ 50 ಕಿಲೋಮೀಟರ್ ಆಗುತ್ತದೆ. ಪ್ರಯಾಣದ ಸಮಯವೇ ದಿನಕ್ಕೆ ೨ ರಿಂದ 3 ತಾಸು ತೆಗೆದುಕೊಳ್ಳುತ್ತದೆ. ಮತ್ತು ಆ ಸ್ಥಳಕ್ಕೆ ಸರಿಯಾದ ರೀತಿಯ ಬಸ್ ವ್ಯವಸ್ಥೆಯು ಸಹ ಇಲ್ಲ.

ಹೊಸದಾಗಿ ಮಾಡಿರುವ ಹಾಸ್ಟೆಲ್ ನಿಂದ ಬಸ್ ಸ್ಟಾಪ್ ಗೆ ಬರಬೇಕೆಂದರೆ ವಿದ್ಯಾರ್ಥಿಗಳು ಸುಮಾರು ೨ ರಿಂದ 3 ಕಿಲೋಮೀಟರ್ ನಷ್ಟು ನಡೆಯಬೇಕು. ಆ ಸ್ಥಳ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವುದರಿಂದ ಇನ್ನೂ ಕೆಲ ಮೂಲಭೂತ ಸೌಕರ್ಯಗಳು ಸಹ ಇರುವುದಿಲ್ಲ. ಅದಕ್ಕಾಗಿ ವಿದ್ಯಾರ್ಥಿಗಳು ಇದನ್ನು ಅಧಿಕಾರಿಗಳಲ್ಲಿ ತಿಳಿಸಿದರೆ ಅವರು ಇದನ್ನು ಲೆಕ್ಕಿಸದೆ ನಾವು ವರ್ಗಾಯಿಸ್ತಿದ್ದೇವೆ ನೀವು ನಿಮ್ಮ ಲಗೇಜ್ ಗಳನ್ನು ತೆಗೆದುಕೊಂಡು ಬನ್ನಿ ಎಂದು ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಮಾಡಿ ವರ್ಗಾಯಿಸಲು ಸಿದ್ಧಗೊಂಡಿದ್ದಾರೆ. ವಿದ್ಯಾರ್ಥಿಗಳು ಶನಿವಾರದಿಂದ ಯಾವುದೇ ಕಾಲೇಜುಗಳಿಗೆ ಹೋಗದೆ ಹಾಸ್ಟೆಲಲ್ಲೇ ಉಳಿದು ವರ್ಗಾವಣೆ ಬೇಡ ಎಂದು ಅಧಿಕಾರಿಗಳ ಬಳಿ ಅಂಗಲಾಚಿ ಬೇಡಿಕೊಂಡಿದ್ದಾರೆ. ಅಧಿಕಾರಿಗಳು ಯಾವುದಕ್ಕೂ ಬಗ್ಗದ ಕಾರಣ ವಿದ್ಯಾರ್ಥಿಗಳು ಸೋಮವಾರದಂದು ಫ್ರೀಡಂ ಪಾರ್ಕ್ ಹತ್ತಿರ ಪ್ರೊಟೆಸ್ಟ್ ಮಾಡಿದ್ದಾರೆ ಆದರೆ ಅದು ಸಹ ಸಫಲವಾಗಿಲ್ಲ.

ಅಧಿಕಾರಿಗಳು ವಿದ್ಯಾರ್ಥಿಗಳ ಮೇಲೆ ಇಷ್ಟೆಲ್ಲಾ ದೌರ್ಜನ್ಯವೆಸಗುತ್ತಿದ್ದರು ಯಾವೊಬ್ಬ ಜನಪ್ರತಿನಿಧಿಯೂ ಇತ್ತ ಗಮನಹರಿಸಿರುವುದಿಲ್ಲ. ಅಧಿಕಾರಿಗಳ ಬಳಿ ಬೇಡಿಕೊಂಡು ಬೆಂಡಾದ ವಿದ್ಯಾರ್ಥಿಗಳು ನೊಂದು ಮಳೆಯಲ್ಲಿ ನಿಂತು ಸರ್ಕಾರಕ್ಕೆ ಧಿಕ್ಕಾರ ಕೂಗುತ್ತಾ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

ಭ್ರಷ್ಟರ ಬೇಟೆ

Recent Posts

2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕ ಘೋಷಣೆ: ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೌರವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…

15 hours ago

ಗೆಳತಿಯ ಲವ್ ಮ್ಯಾರೇಜ್ ಎಡವಟ್ಟು: ಮಾಡದ ತಪ್ಪಿಗೆ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…

20 hours ago

ಮದುವೆಯಾಗಿ ನಾಲ್ಕೇ ತಿಂಗಳಲ್ಲಿ ನವವಿವಾಹಿತೆಯ ಸಾವು: ಪತಿ ವಿರುದ್ಧ ಕೊಲೆ, ವರದಕ್ಷಿಣೆ ಕಿರುಕುಳ ಆರೋಪ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…

20 hours ago

ಪೊಲೀಸರ ಎದುರೇ ರಂಪಾಟ ನಡೆಸಿದ್ದ ‘ಮಚ್ ಮಂಜ’ ಬಂಧನ; ಮಹಾರಾಷ್ಟ್ರದಲ್ಲಿ ಸೆರೆ, ನ್ಯಾಯಾಂಗ ಬಂಧನಕ್ಕೆ ಒಪ್ಪಿಗೆ

ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…

20 hours ago

ಕಾನಸೂರು ವಸತಿ ಶಾಲೆ ವಿದ್ಯಾರ್ಥಿ ಗೋಕುಲ ಗೌಡ ಸಾವು ಪ್ರಕರಣ: ಇಬ್ಬರು ಸಿಬ್ಬಂದಿ ಅಮಾನತು

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…

20 hours ago

ಮನೆಯಲ್ಲೇ ಸಂಗ್ರಹಿಸಿದ್ದ ನಾಡಬಾಂಬ್ ಸ್ಫೋಟ; ಹಳಿಯಾಳದ ಕಾಳಗಿನಕೊಪ್ಪ ಗ್ರಾಮದಲ್ಲಿ ಆತಂಕ

ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್‌ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…

20 hours ago