Latest

ಮಳೆಯಲ್ಲಿ ನಿಂತು ಸರ್ಕಾರಕ್ಕೆ ಧಿಕ್ಕಾರ ಕೂಗುತ್ತಿರುವ ವಿದ್ಯಾರ್ಥಿಗಳು! ಕಾರಣವೇನು ಗೊತ್ತೆ?

ಬೆಂಗಳೂರು: ಸುಮ್ಮನಹಳ್ಳಿ ಹತ್ತಿರ ಇರುವಂತಹ ಸಜ್ಜೆಪಾಳ್ಯ, ಅಂಜನಗರ, ದಿನ್ನೂರು, ಹೆಬ್ಬಾಳದ ಬಳಿ ಗುಡ್ಡದಹಳ್ಳಿ ಮತ್ತು ಮಾಳಗಳ. ಸೇರಿದಂತೆ ಬೆಂಗಳೂರು ಉತ್ತರದ ಸುಮಾರು 6 ಬಿ.ಸಿ.ಎಂ ಹಾಸ್ಟೆಲ್ ಗಳನ್ನು ಯಲಹಂಕದ ಬಳಿ ಇರುವ ಮುತ್ತುಗದ ಹಳ್ಳಿ, ಶಿವಕೋಟೆ ಗ್ರಾಮ ಪಂಚಾಯಿತಿ, ಹೆಸರಘಟ್ಟ ಹೋಬಳಿ ಹತ್ತಿರ ವರ್ಗಾವಣೆ ಮಾಡುತ್ತಿದ್ದು ಹೊಸ ಹಾಸ್ಟೆಲ್ ಕಾಲೇಜುಗಳಿಗೆ ತುಂಬಾ ದೂರವಿದ್ದು ಸುಮಾರು 40 ರಿಂದ 50 ಕಿಲೋಮೀಟರ್ ಆಗುತ್ತದೆ. ಪ್ರಯಾಣದ ಸಮಯವೇ ದಿನಕ್ಕೆ ೨ ರಿಂದ 3 ತಾಸು ತೆಗೆದುಕೊಳ್ಳುತ್ತದೆ. ಮತ್ತು ಆ ಸ್ಥಳಕ್ಕೆ ಸರಿಯಾದ ರೀತಿಯ ಬಸ್ ವ್ಯವಸ್ಥೆಯು ಸಹ ಇಲ್ಲ.

ಹೊಸದಾಗಿ ಮಾಡಿರುವ ಹಾಸ್ಟೆಲ್ ನಿಂದ ಬಸ್ ಸ್ಟಾಪ್ ಗೆ ಬರಬೇಕೆಂದರೆ ವಿದ್ಯಾರ್ಥಿಗಳು ಸುಮಾರು ೨ ರಿಂದ 3 ಕಿಲೋಮೀಟರ್ ನಷ್ಟು ನಡೆಯಬೇಕು. ಆ ಸ್ಥಳ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವುದರಿಂದ ಇನ್ನೂ ಕೆಲ ಮೂಲಭೂತ ಸೌಕರ್ಯಗಳು ಸಹ ಇರುವುದಿಲ್ಲ. ಅದಕ್ಕಾಗಿ ವಿದ್ಯಾರ್ಥಿಗಳು ಇದನ್ನು ಅಧಿಕಾರಿಗಳಲ್ಲಿ ತಿಳಿಸಿದರೆ ಅವರು ಇದನ್ನು ಲೆಕ್ಕಿಸದೆ ನಾವು ವರ್ಗಾಯಿಸ್ತಿದ್ದೇವೆ ನೀವು ನಿಮ್ಮ ಲಗೇಜ್ ಗಳನ್ನು ತೆಗೆದುಕೊಂಡು ಬನ್ನಿ ಎಂದು ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಮಾಡಿ ವರ್ಗಾಯಿಸಲು ಸಿದ್ಧಗೊಂಡಿದ್ದಾರೆ. ವಿದ್ಯಾರ್ಥಿಗಳು ಶನಿವಾರದಿಂದ ಯಾವುದೇ ಕಾಲೇಜುಗಳಿಗೆ ಹೋಗದೆ ಹಾಸ್ಟೆಲಲ್ಲೇ ಉಳಿದು ವರ್ಗಾವಣೆ ಬೇಡ ಎಂದು ಅಧಿಕಾರಿಗಳ ಬಳಿ ಅಂಗಲಾಚಿ ಬೇಡಿಕೊಂಡಿದ್ದಾರೆ. ಅಧಿಕಾರಿಗಳು ಯಾವುದಕ್ಕೂ ಬಗ್ಗದ ಕಾರಣ ವಿದ್ಯಾರ್ಥಿಗಳು ಸೋಮವಾರದಂದು ಫ್ರೀಡಂ ಪಾರ್ಕ್ ಹತ್ತಿರ ಪ್ರೊಟೆಸ್ಟ್ ಮಾಡಿದ್ದಾರೆ ಆದರೆ ಅದು ಸಹ ಸಫಲವಾಗಿಲ್ಲ.

ಅಧಿಕಾರಿಗಳು ವಿದ್ಯಾರ್ಥಿಗಳ ಮೇಲೆ ಇಷ್ಟೆಲ್ಲಾ ದೌರ್ಜನ್ಯವೆಸಗುತ್ತಿದ್ದರು ಯಾವೊಬ್ಬ ಜನಪ್ರತಿನಿಧಿಯೂ ಇತ್ತ ಗಮನಹರಿಸಿರುವುದಿಲ್ಲ. ಅಧಿಕಾರಿಗಳ ಬಳಿ ಬೇಡಿಕೊಂಡು ಬೆಂಡಾದ ವಿದ್ಯಾರ್ಥಿಗಳು ನೊಂದು ಮಳೆಯಲ್ಲಿ ನಿಂತು ಸರ್ಕಾರಕ್ಕೆ ಧಿಕ್ಕಾರ ಕೂಗುತ್ತಾ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

ಭ್ರಷ್ಟರ ಬೇಟೆ

Recent Posts

ಚಲಿಸುವ ರೈಲು ಕೆಳಗೆ ಸಿಲುಕಿದ ತಂದೆ-ಮಗು: ಅದಮ್ಯ ಧೈರ್ಯದಿಂದ ಪಾರಾದ ಜೀವಗಳು!

ಬಾಂಗ್ಲಾದೇಶದ ಕಿಶೋರ್‌ಗಂಜ್ ಜಿಲ್ಲೆಯ ಭೈರಬ್ ರೈಲು ನಿಲ್ದಾಣದಲ್ಲಿ ನಡೆದ ಹೃದಯ ಕಲುಕುವ ಘಟನೆ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ…

16 hours ago

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ: ಅಥಣಿಯಲ್ಲಿ ಹೃದಯವಿದ್ರಾವಕ ಘಟನೆ

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿ 15 ವರ್ಷಗಳ ದಾಂಪತ್ಯ ಜೀವನ ನಡೆಸಿದ್ದ ಮಹಿಳೆಯೊಬ್ಬಳು ಗಂಡನ ವರದಕ್ಷಿಣೆ ಕಿರುಕುಳಕ್ಕೆ…

16 hours ago

ಬಿಜೆಪಿ ಯುವ ಮೋರ್ಚಾ ನಾಯಕ ವೆಂಕಟೇಶ್ ಕೊಲೆ ಪ್ರಕರಣ: ಆರು ಅಪರಾಧಿಗಳಿಗೆ ಗಲ್ಲು ಶಿಕ್ಷೆ

ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್‌ಎನ್ ವೆಂಕಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು…

16 hours ago

66ರ ವೃದ್ಧನಿಗೆ 35ರ ಯುವತಿಯೊಂದಿಗೆ ಮದುವೆ! ವಯಸ್ಸು ಕೇವಲ ಸಂಖ್ಯೆ ಮಾತ್ರವೇ?

66 ವರ್ಷದ ಸೋಮ್ ದೇವ್ ಮತ್ತು 35 ವರ್ಷದ ಯುವತಿಯ ವಿವಾಹ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.…

16 hours ago

ವಿಮೆ-ಆಸ್ತಿ ಲಾಭಕ್ಕಾಗಿ ಗಂಡನ ಕೊಲೆ: ಹರಿಯಾಣದಲ್ಲಿ ಪ್ರಿಯಕರ ನೊಂದಿಗೆ ಪತ್ನಿ ರಚಿಸಿದ್ದ ಸಂಚು ಬಯಲು.!

ಹರಿಯಾಣದ ಚರ್ಕಿ ದಾದ್ರಿ ಜಿಲ್ಲೆಯಲ್ಲಿ ನಡೆದ ಭೀಕರ ಘಟನೆಯೊಂದು ಮಾನವ ಸಂಬಂಧಗಳನ್ನೇ ಪ್ರಶ್ನಿಸುವಂತೆ ಮಾಡಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ,…

17 hours ago

ಬೆಂಗಳೂರು ಡ್ರಗ್ಸ್ ಜಾಲದ ಮೇಲೆ ಭಾರೀ ದಾಳಿ: ₹36 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ, 16 ಮಂದಿ ಬಂಧನ

ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ಮುಂದುವರೆಸಿದ್ದು, ನಾಲ್ವರು ವಿದೇಶಿಯರು ಸೇರಿದಂತೆ ಒಟ್ಟು 16 ಮಂದಿಯನ್ನು…

22 hours ago