ಬಾಗಲಕೋಟೆ: ತಾಲೂಕಿನ ನಾಯನೇಗಲಿ ಗ್ರಾಮದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ ಹಾಗೂ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ, ವಿದ್ಯುತ್ ವ್ಯವಸ್ಥೆ ಸೇರಿ ವಿವಿಧ ಮೂಲಭೂತ ಸೌಕರ್ಯಗಳು ಇಲ್ಲದ ಕಾರಣ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಈ ವೇಳೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಧಿಕ್ಕಾರ ಕೂಗುತ್ತಾ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ನಮಗೆ ಮುಖ್ಯವಾಗಿ ಉಪನ್ಯಾಸಕರ ಕೊರತೆಯಿದ್ದು ಆದಷ್ಟು ಬೇಗನೆ ಕೊರತೆ ನೀಗಿಸಬೇಕು ಇಲ್ಲದಿದ್ದರೆ ಇದಕ್ಕಿಂತ ದೊಡ್ಡ ಪ್ರತಿಭಟನೆ ನಡೆಸುತ್ತೇವೆಂದು ತಿಳಿಸಿದರು.
ಈ ಪ್ರತಿಭಟನೆಯನ್ನು ತಡೆಯಬೇಕೆಂದು ಕೆಲ ಉಪನ್ಯಾಸಕರು ಹಾಗೂ ಪೋಲೀಸ್ ಅಧಿಕಾರಿಗಳು ಹರಸಾಹಸ ಪಟ್ಟರು ಸಹ ಯಾವುದಕ್ಕೂ ಜಗ್ಗದ ವಿದ್ಯಾರ್ಥಿಗಳು, ಪಟ್ಟು ಹಿಡಿದು ಮೇಲಾಧಿಕಾರಿಗಳು ಬಂದು ನಮಗೆ ನ್ಯಾಯ ಒದಗಿಸುವ ವರೆಗೂ ನಮ್ಮ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ತಿಳಿಸಿದರು. ಈ ವಿಷಯವನ್ನು ಅರಿತು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಭೇಟಿ ನೀಡಿ ವಿದ್ಯಾರ್ಥಿಗಳ ತೊಂದರೆಗಳನ್ನು ಆಲಿಸಿ ಅವರಿಗೆ ಉಪನ್ಯಾಸಕರ ವ್ಯವಸ್ಥೆ ಹಾಗೂ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಎರಡು ದಿನಗಳಲ್ಲಿ ಕಲ್ಪಿಸಿಕೊಡುತ್ತೇವೆಂದು ಆಶ್ವಾಸನೆ ನೀಡಿದ ಮೇಲೆ ವಿದ್ಯಾರ್ಥಿಗಳು ಪ್ರತಿಭಟನೆಯನ್ನು ಕೈ ಬಿಟ್ಟರು.
ಆದಷ್ಟು ಬೇಗನೆ ನಮ್ಮ ತೊಂದರೆಗಳಿಗೆ ಸ್ಪಂದಿಸದಿದ್ದರೆ ಇದಕ್ಕಿಂತ ದೊಡ್ಡ ಹೋರಾಟಕ್ಕೂ ನಾವು ಸಿದ್ಧರಿದ್ದೇವೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳ, ಪೋಲೀಸ್ ಇಲಾಖೆ, ಹಾಗೂ ಊರಿನ ಹಿರಿಯರ ಸಮ್ಮುಖದಲ್ಲೇ ತಿಳಿಸಿದರು.
ವರದಿ: ವಿಶ್ವನಾಥ ಭಜಂತ್ರಿ
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…