Latest

ಬಸ್ ತಡೆದು ಧರಣಿ ನಡೆಸಿದ ವಿದ್ಯಾರ್ಥಿಗಳು.

ಬಾಗಲಕೋಟೆ: ಜಿಲ್ಲೆಯ ಬಾಗಲಕೋಟೆ ತಾಲೂಕಿನ ಭಗವತಿ ಗ್ರಾಮದಲ್ಲಿ ಬಸ್ ತಡೆದು ವಿದ್ಯಾರ್ಥಿಗಳು ಧರಣಿ ನಡೆಸಿದ ಘಟನೆ ಇಂದು ನಡೆದಿದೆ.
ಬಾಗಲಕೋಟೆಯಿಂದ – ಜಡ್ರಾಮಕುಂಟಿಗೆ ತಲುಪ ಬೇಕಿರುವ ಬಸ್ಸು ಭರ್ತಿಯಾಗಿ ಕಾಲಿಡಲು ಜಾಗವಿಲ್ಲದೆ ವಿದ್ಯಾರ್ಥಿಗಳು ಮತ್ತು ಪ್ರಯಾಣಿಕರು ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ. ಬಾಗಲಕೋಟೆಯಿಂದ ಭಗವತಿ, ಕಡ್ಲಿಮಟ್ಟಿ, ಅಚನೂರು, ಹೊಲ್ದರು, ಹೀಗೆ ಮುಂತಾದ ಗ್ರಾಮಗಳ ಮೂಲಕ ಜಡ್ರಾಮಕುಂಟಿಗೆ ತಲುಪುವ ವಿದ್ಯಾರ್ಥಿಗಳ ಹಾಗೂ ಪ್ರಯಾಣಿಕರ ಸಮಸ್ಯೆ ಇದಾಗಿದ್ದು ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು ಇವರಿಗೆ ಶಾಶ್ವತ ಪರಿಹಾರ ಒದಗಿಸಿ ಕೊಡಬೇಕಾಗಿದೆ.

ಈ ವಿಷಯವಾಗಿ ವಿದ್ಯಾರ್ಥಿಗಳು ಸಾಕಷ್ಟು ಭಾರೀ ಮನವಿ ನೀಡಿದರು ಸಹ ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು ಸ್ಪಂದಿಸುತ್ತಿಲ್ಲವೆಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳಲ್ಲಿ ಬಸ್ ಪಾಸ್ ಮಾಡಿಸಲೆಂದು ಸಾಕಷ್ಟು ಹಣವನ್ನು ಪಡೆದುಕೊಳ್ಳುತ್ತಾರೆ ಆದರೆ ಅದೇ ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜುಗಳಿಗೆ ಹೋಗಿ ಬರಲು ಸರಿಯಾದ ಬಸ್ಸಿನ ವ್ಯವಸ್ಥೆ ಇಲ್ಲವೆಂದು ಅಲ್ಲಿನ ವಿದ್ಯಾರ್ಥಿಗಳು ಅಸಹಾಯಕರಾಗಿ ತಿಳಿಸಿದರು.

ಇದೇ ವೇಳೆಯಲ್ಲಿ ಹತ್ತಿರವಿದ್ದ 112 ಪೊಲೀಸ್ ಅಧಿಕಾರಿಗಳು ವಿದ್ಯಾರ್ಥಿಗಳ ಮನವೊಲಿಸುವ ಪ್ರಯತ್ನ ಮಾಡಿದರು ಸಹ ಪಟ್ಟು ಬಿಡದ ವಿದ್ಯಾರ್ಥಿಗಳು ನಮಗೆ ಮತ್ತೊಂದು ಬಸ್ಸು ಬಿಡುವವರೆಗೂ ಧರಣಿಯನ್ನು ಬಿಡುವುದಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು.
ಕೊನೆಗೆ ತಿಳಿ ಹೇಳಿ ಎಲ್ಲಾ ವಿದ್ಯಾರ್ಥಿಗಳನ್ನು ಕಳುಹಿಸಲಾಯಿತು.
ಈಗಲಾದರೂ ಬಾಗಲಕೋಟೆ ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು ಇತ್ತ ಕಡೆ ಗಮನಹರಿಸಿ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು.

ವರದಿ: ವಿಶ್ವನಾಥ ಭಜಂತ್ರಿ

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago