ಬಾಗಲಕೋಟೆ: ಜಿಲ್ಲೆಯ ಬಾಗಲಕೋಟೆ ತಾಲೂಕಿನ ಭಗವತಿ ಗ್ರಾಮದಲ್ಲಿ ಬಸ್ ತಡೆದು ವಿದ್ಯಾರ್ಥಿಗಳು ಧರಣಿ ನಡೆಸಿದ ಘಟನೆ ಇಂದು ನಡೆದಿದೆ.
ಬಾಗಲಕೋಟೆಯಿಂದ – ಜಡ್ರಾಮಕುಂಟಿಗೆ ತಲುಪ ಬೇಕಿರುವ ಬಸ್ಸು ಭರ್ತಿಯಾಗಿ ಕಾಲಿಡಲು ಜಾಗವಿಲ್ಲದೆ ವಿದ್ಯಾರ್ಥಿಗಳು ಮತ್ತು ಪ್ರಯಾಣಿಕರು ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ. ಬಾಗಲಕೋಟೆಯಿಂದ ಭಗವತಿ, ಕಡ್ಲಿಮಟ್ಟಿ, ಅಚನೂರು, ಹೊಲ್ದರು, ಹೀಗೆ ಮುಂತಾದ ಗ್ರಾಮಗಳ ಮೂಲಕ ಜಡ್ರಾಮಕುಂಟಿಗೆ ತಲುಪುವ ವಿದ್ಯಾರ್ಥಿಗಳ ಹಾಗೂ ಪ್ರಯಾಣಿಕರ ಸಮಸ್ಯೆ ಇದಾಗಿದ್ದು ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು ಇವರಿಗೆ ಶಾಶ್ವತ ಪರಿಹಾರ ಒದಗಿಸಿ ಕೊಡಬೇಕಾಗಿದೆ.
ಈ ವಿಷಯವಾಗಿ ವಿದ್ಯಾರ್ಥಿಗಳು ಸಾಕಷ್ಟು ಭಾರೀ ಮನವಿ ನೀಡಿದರು ಸಹ ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು ಸ್ಪಂದಿಸುತ್ತಿಲ್ಲವೆಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳಲ್ಲಿ ಬಸ್ ಪಾಸ್ ಮಾಡಿಸಲೆಂದು ಸಾಕಷ್ಟು ಹಣವನ್ನು ಪಡೆದುಕೊಳ್ಳುತ್ತಾರೆ ಆದರೆ ಅದೇ ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜುಗಳಿಗೆ ಹೋಗಿ ಬರಲು ಸರಿಯಾದ ಬಸ್ಸಿನ ವ್ಯವಸ್ಥೆ ಇಲ್ಲವೆಂದು ಅಲ್ಲಿನ ವಿದ್ಯಾರ್ಥಿಗಳು ಅಸಹಾಯಕರಾಗಿ ತಿಳಿಸಿದರು.
ಇದೇ ವೇಳೆಯಲ್ಲಿ ಹತ್ತಿರವಿದ್ದ 112 ಪೊಲೀಸ್ ಅಧಿಕಾರಿಗಳು ವಿದ್ಯಾರ್ಥಿಗಳ ಮನವೊಲಿಸುವ ಪ್ರಯತ್ನ ಮಾಡಿದರು ಸಹ ಪಟ್ಟು ಬಿಡದ ವಿದ್ಯಾರ್ಥಿಗಳು ನಮಗೆ ಮತ್ತೊಂದು ಬಸ್ಸು ಬಿಡುವವರೆಗೂ ಧರಣಿಯನ್ನು ಬಿಡುವುದಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು.
ಕೊನೆಗೆ ತಿಳಿ ಹೇಳಿ ಎಲ್ಲಾ ವಿದ್ಯಾರ್ಥಿಗಳನ್ನು ಕಳುಹಿಸಲಾಯಿತು.
ಈಗಲಾದರೂ ಬಾಗಲಕೋಟೆ ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು ಇತ್ತ ಕಡೆ ಗಮನಹರಿಸಿ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು.
ವರದಿ: ವಿಶ್ವನಾಥ ಭಜಂತ್ರಿ
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…