ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಬಕಾರಿ ಅಕ್ರಮಗಳನ್ನು ತಡೆಯಲು ಇಲಾಖೆಯು ಜುಲೈ 2024ರಿಂದ ನಿರಂತರ ಜಾರಿ ಕಾರ್ಯಾಚರಣೆಗಳನ್ನು ಕೈಗೊಂಡಿದ್ದು, ಈ ಅವಧಿಯಲ್ಲಿ ಒಟ್ಟು 31 ಘೋರ ಪ್ರಕರಣಗಳನ್ನು ದಾಖಲಿಸಲಾಗಿದೆ. ಒಟ್ಟಾರೆ ₹9.31 ಕೋಟಿ ಮೌಲ್ಯದ ಅಕ್ರಮ ಸೊತ್ತನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಬಕಾರಿ ಉಪ ಆಯುಕ್ತರು ತಿಳಿಸಿದ್ದಾರೆ.
ವಶಪಡಿಸಿಕೊಳ್ಳಲಾದ ವಸ್ತುಗಳು:
115.350 ಲೀ. ಗೋವಾ ಮದ್ಯ
47.250 ಲೀ. ಡಿಫೆನ್ಸ್ ಮದ್ಯ
140.940 ಲೀ. ಅಕ್ರಮ ಮದ್ಯ
56.570 ಲೀ. ಬಿಯರ್
244.920 ಲೀ. ವೈನ್
115 ಲೀ. ಶೇಂದಿ
92 ಲೀ. ಬೆಲ್ಲದ ಕೊಳೆ
64.750 ಲೀ. ಕಳ್ಳಬಟ್ಟಿ
4 ವಾಹನಗಳು
ಒಟ್ಟು 876.780 ಲೀ. ಅಕ್ರಮ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ.
ಅಕ್ರಮ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮಗಳು:
ಅಬಕಾರಿ ಇಲಾಖೆಯು ಅಕ್ರಮ ಮದ್ಯ ಸರಬರಾಜನ್ನು ತಡೆಯಲು ಸಮರ್ಥ ಕ್ರಮಗಳನ್ನು ತೆಗೆದುಕೊಂಡಿದೆ. ಮದುವೆ, ಸಭೆ, ಸಮಾರಂಭಗಳಲ್ಲಿ ಮದ್ಯ ಸರಬರಾಜು ಮಾಡಲು ನೀಡುವ ಸಾಂದರ್ಭಿಕ CL-5 ಪರವಾನಗಿಗಳನ್ನು ಕಟ್ಟುನಿಟ್ಟಾಗಿ ಪರಿಶೀಲಿಸಲಾಗುತ್ತಿದೆ. 2023-24ನೇ ಸಾಲಿನಲ್ಲಿ ಏಪ್ರಿಲ್ ರಿಂದ 2024ರ ಜನವರಿ 15ರ ವರೆಗೆ 432 CL-5 ಪರವಾನಗಿಗಳನ್ನು ನೀಡಲಾಗಿದ್ದು, ಏಪ್ರಿಲ್ 2024ರಿಂದ 2025ರ ಜನವರಿ 15ರ ವರೆಗೆ 865 ಪರವಾನಗಿಗಳನ್ನು ಮಂಜೂರು ಮಾಡಲಾಗಿದೆ.
ಸಮಾಜಕ್ಕೆ ತೊಂದರೆ ಇಲ್ಲದಂತೆ ಜಾರಿಗೆ ಕ್ರಮ:
ಸಮಾಜದ ಶಾಂತಿ ಕದಡುವಂತಿಲ್ಲದೆ ಅಧಿಕಾರಿಗಳು ಸಮವಸ್ತ್ರ ಧರಿಸದೇ ಸಭೆ, ಸಮಾರಂಭಗಳಿಗೆ ಭೇಟಿ ನೀಡಿ, ಅನಧಿಕೃತ ಮದ್ಯ ಸರಬರಾಜನ್ನು ತಡೆಯುತ್ತಿದ್ದಾರೆ. ಗೋವಾ ಮತ್ತು ಡಿಫೆನ್ಸ್ ಮದ್ಯದ ಅಕ್ರಮ ಪೂರೈಕೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟಲಾಗಿದೆ ಎಂದು ಪ್ರಕಟಣೆಯಲ್ಲಿ ವಿವರಿಸಲಾಗಿದೆ.
ಅಬಕಾರಿ ಇಲಾಖೆಯ ಈ ನಿಗಾ ಕ್ರಮಗಳಿಂದ ಅಕ್ರಮ ಮದ್ಯ ವ್ಯಾಪಾರ ತೀವ್ರವಾಗಿ ಕಡಿಮೆಯಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಇಲಾಖೆ ಸಜ್ಜಾಗಿದೆ.
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…