Latest

ಮಕ್ಕಳಲ್ಲಿನ ಪ್ರತಿಭೆ ಗುರುತಿಸಲು ಇಂತಹ ಕಾರ್ಯಕ್ರಮಗಳು ಅವಶ್ಯ: ಸಿ. ಆರ್. ಪಿ ಸಾವಳಗಿ

ಮುಂಡಗೋಡ:  ತಾಲೂಕಿನ ಮುಡಸಾಲಿ ಗ್ರಾಮದಲ್ಲಿ ಜಿಲ್ಲಾ ಪಂಚಾಯತ್ ಉತ್ತರ ಕನ್ನಡ,ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಮುಂಡಗೋಡ(ಶೈ ಜಿಲ್ಲೆ ಶಿರಸಿ) ಸಮೂಹ ಸಂಪನ್ಮೂಲ ಕೇಂದ್ರ ಚಿಗಳ್ಳಿ ಇವರುಗಳ ಸಂಯುಕ್ತಾಶ್ರಯದಲ್ಲಿ 2022-23 ನೇ ಸಾಲಿನ ಚಿಗಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯು ಯಶಸ್ವಿಯಾಗಿ ನಡೆಯಿತು.
ಕಾರ್ಯಕ್ರಮವನ್ನು ಕಾತೂರು ಗ್ರಾಮ ಪಂಚಾಯತಿ ಅಧ್ಯಕ್ಷರಾದ ರೇಣುಕಾ ಮಾಯಣ್ಣನವರ ಉದ್ಘಾಟಿಸಿದರು.ಮುಖ್ಯ ಅತಿಥಿಗಳಾಗಿ ಕಾತೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಶಿವಾಜಿ ಶಿಂದೆ ಭಾಗವಹಿಸಿದ್ದರು.ಸಿ ಆರ್ ಪಿ ಪ್ರಶಾಂತ್ ಸಾವಳಗಿ ಮಾತನಾಡಿ ಶಾಲಾ ಹಂತದಿಂದಲೇ ಮಕ್ಕಳಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಪೋಷಸಿಲು ಇಂತಹ ಕಾರ್ಯಕ್ರಮಗಳು ಅವಶ್ಯವಾಗಿದ್ದು ಇದನ್ನು ನಮ್ಮ ಇಲಾಖೆ ಮಾಡುತ್ತಿದೆ ಎಂದರು.
ಮುಖ್ಯಾಧ್ಯಾಪಕರಾದ ನಾಗರಾಜ ಕಾಮನಳ್ಳಿ ಅವರು ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಹನಮಂತಪ್ಪ ಬೆಡಸಗಾಂವ ಅವರ ಸ್ಮರಣಾರ್ಥ ಶಾಲೆಗೆ ಸ್ಮಾರ್ಟ್ ಟಿವಿಯನ್ನು ದೇಣಿಗೆ ನೀಡಿದ ಕುಟುಂಬದವರಾದ ಶ್ರೀಮತಿ ಶಾಂತವ್ವ ಹನಮಂತಪ್ಪ ಬೆಡಸಗಾಂವ ಅವರನ್ನು ಸನ್ಮಾನಿಸಲಾಯಿತು.
ಊರಿನ ಹಿರಿಯರಾದ ನಿಂಗಪ್ಪ ಟೋಪೋಜಿ ಮಾತನಾಡಿದರು.
ಇಂತಹ ಕಾರ್ಯಕ್ರಮಗಳನ್ನು ಇಲಾಖೆಯಿಂದ ಬರುವ ಅನುದಾನದಲ್ಲಿ ವಿಜೃಂಭಣೆಯಿಂದ ಮಾಡುವುದು ಕಷ್ಟಸಾಧ್ಯ ಆದರೆ ಇಲ್ಲಿ ಊರಿನ ನಾಗರಿಕರೆಲ್ಲರೂ ಕೂಡಿ ತನು ಮನ ಧನ ಸಹಾಯದೊಂದಿಗೆ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದು ವಿಶೇಷವಾಗಿತ್ತು.
ಶಿಕ್ಷಕರಾದ ವೀರಯ್ಯ ಕುರಟ್ಟಿಮಠ ನಿರೂಪಿಸಿದರು,ಶಿಕ್ಷಕಿ ನಾಗರತ್ನಮ್ಮ ವಂದಿಸಿದರು.
ವರದಿ: ಮಂಜುನಾಥ ಹರಿಜನ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago