Latest

“ಸುಧಾಮೂರ್ತಿ ಅವರ ಆಸ್ತಿ ಜಗದಗಲ, ತಿಳುವಳಿಕೆ ಚಮಚದಗಲ” -ನಟ ಚೇತನ್‌ ಟೀಕೆ

ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರು ಇತ್ತೀಚೆಗೆ ‘ಖಾನೆ ಮೇ ಕ್ಯಾ ಹೈ’ ಯೂಟ್ಯೂಬ್ ಚಾನೆಲ್‌ನ ‘ಖಾನೆ ಮೇ ಕೌನ್ ಹೇ’ ಎಂಬ ಸಂಚಿಕೆಯಲ್ಲಿ ಕಾಣಿಸಿಕೊಂಡಿದ್ದರು. ಆ ವೇಳೆ ತಮ್ಮ ಆಹಾರ ಕ್ರಮದ ರೀತಿ, ನೀತಿಗಳ ಬಗ್ಗೆ ಮಾತನಾಡಿದ್ದರು. ಇನ್ನು ಅದೇ ವೇಳೆ ಸುಧಾ ಮೂರ್ತಿ ಅವರು ನೀಡಿದ ಹೇಳಿಕೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ಈ ವಿಚಾರವಾಗಿ ನಟ ಚೇತನ್‌ ಅಹಿಂಸಾ ಅವರು ನೇರವಾಗಿ ಸುಧಾಮೂರ್ತಿ ಅವರನ್ನು ಟ್ವೀಟ್‌ ಮೂಲಕ ಟೀಕಿಸಿದ್ದಾರೆ.
“ನಾನು ಶುದ್ಧ ಸಸ್ಯಾಹಾರಿ, ಮೊಟ್ಟೆ, ಈರುಳ್ಳಿ, ಬೆಳ್ಳುಳ್ಳಿ ಕೂಡ ಸೇವಿಸುವುದಿಲ್ಲ. ವಿದೇಶಕ್ಕೆ ಹೋಗುವಾಗ ತಮಗೆ ಬೇಕಾದ ಊಟ ತಿಂಡಿಯನ್ನು ರೆಡಿ ಮಾಡಿಕೊಂಡು ಬ್ಯಾಗ್ ನಲ್ಲಿ ಹಾಕಿಕೊಂಡು ಹೋಗುತ್ತೇನೆ. ಈ ಹೋಟೆಲ್‌ಗಳಲ್ಲಿ ಸಸ್ಯಾಹಾರ-ಮಾಂಸಾಹಾರ ಭಕ್ಷ್ಯಗಳಿಗೆ ಒಂದೇ ಚಮಚ ಬಳಸುವ ಬಗ್ಗೆ ನನ್ನ ಮನಸ್ಸಿಗೆ ತುಂಬಾ ಆತಂಕವಾಗುತ್ತದೆ. ಹೀಗಾಗಿ ವಿದೇಶಕ್ಕೆ ಹೋಗುವಾಗ ಸ್ಪೂನ್ ಕೂಡ ಜೊತೆಗೆ ತೆಗೆದುಕೊಂಡು ಹೋಗುತ್ತೇನೆ” ಎಂದು ಸುಧಾ ಮೂರ್ತಿ ಅವರು ಹೇಳಿರುವ ಮಾತು ಟ್ರೋಲ್ ಆಗುತ್ತಿದೆ.
ಇನ್ನು ಈ ಕುರಿತು ಟ್ವೀಟ್‌ ಮಾಡಿರುವ ನಟ ಚೇತನ್‌ “ಸುಧಾಮೂರ್ತಿಯವರು ನಮ್ಮ ಬ್ರಾಹ್ಮಣ್ಯ-ಬಂಡವಾಳಶಾಹಿ ಸಮಾಜದಿಂದ ಅತಿಯಾದ ಬಿಲ್ಡಪ್‌ನಿಂದ ಗುರುತಿಸಲ್ಪಟ್ಟ ಮತ್ತು ಅನರ್ಹವಾಗಿ ಗೌರವಿಸಲ್ಪಟ್ಟ ಸಾರ್ವಜನಿಕ ವ್ಯಕ್ತಿ” ಮುಂದುವರಿದು, “ಅವರು ತನ್ನ ಸೀಮಿತ, ಮಡಿವಂತಿಕೆಯ ಚಿಂತನೆಯನ್ನು ಬಹಿರಂಗಪಡಿಸುವ ಹೇಳಿಕೆಗಳನ್ನು ನಿರಂತರವಾಗಿ ಮಾಡುತ್ತಾರೆ. ಸುಧಾಮೂರ್ತಿಯವರು ಹೆಚ್ಚು ಮಾತನಾಡಬೇಕು; ಅವರ ಆಸ್ತಿ ಜಗದಗಲ -ತಿಳಿವಳಿಕೆ ಚಮಚದಗಲ!” ಎಂದು ಟೀಕಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಮಗಳ ಹುಟ್ಟುಹಬ್ಬಕ್ಕೆ ಸರ್‌ಪ್ರೈಸ್ ಕೊಡಲು ಹೋದ ಪೋಷಕರಿಗೆ ಆಘಾತ; ರೂಮ್ ಕಿಟಕಿಯಿಂದ ಜಿಗಿದ ಯುವಕ!

ಅಮೃತಸರ: ಉನ್ನತ ಶಿಕ್ಷಣಕ್ಕಾಗಿ ದೂರದ ನಗರಕ್ಕೆ ಮಕ್ಕಳನ್ನು ಕಳುಹಿಸುವ ಪೋಷಕರು ಅವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ…

23 hours ago

ಬದುಕಿದ್ದಾಗ ದೂರ, ಸಾವಿನಲ್ಲೂ ನಿರ್ಲಕ್ಷ್ಯ: ₹5,100 ಕಳುಹಿಸಿ ವಿಡಿಯೋ ಕಾಲ್ ನಲ್ಲೆ ತಂದೆಯ ಅಂತ್ಯಸಂಸ್ಕಾರ ಮಾಡಿಸಿದ ಹೆಣ್ಣುಮಕ್ಕಳು

ಹೆತ್ತ ಮಕ್ಕಳ ಸುಖ-ಸಂತೋಷಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗ ಮಾಡುವ ತಂದೆ-ತಾಯಿಯರಿಗೆ ವೃದ್ಧಾಪ್ಯದಲ್ಲಿ ಸಿಗುವ ಪ್ರತಿಫಲ ಕೆಲವೊಮ್ಮೆ ಎಷ್ಟು ನೋವಿನದ್ದಾಗಿರುತ್ತದೆ…

23 hours ago

ಮಂಡ್ಯದಲ್ಲಿ ಯುವತಿಯ ಅನುಮಾನಾಸ್ಪದ ಸಾವು: ರಸ್ತೆ ಅಪಘಾತ ಪ್ರಕರಣಕ್ಕೆ ಹೊಸ ತಿರುವು, ಅತ್ಯಾಚಾರ ಯತ್ನದ ಬಳಿಕ ಕೊಲೆ ಆರೋಪ!

ಮಂಡ್ಯದಲ್ಲಿ ರಸ್ತೆ ಅಪಘಾತವೆಂದು ಆರಂಭದಲ್ಲಿ ದಾಖಲಾಗಿದ್ದ ಯುವತಿಯ ಸಾವಿನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಸಾಮಾನ್ಯ ಅಪಘಾತ…

23 hours ago

ಶಾಲೆಯ ಕ್ಲಾಸ್‌ರೂಮ್‌ನಲ್ಲಿ ಶಿಕ್ಷಕ-ಶಿಕ್ಷಕಿಯ ರೋಮ್ಯಾನ್ಸ್: ಹಿಡನ್ ಕ್ಯಾಮೆರಾ ವಿಡಿಯೊ ವೈರಲ್..!

ಕನ್ನೌಜ್ (ಉತ್ತರ ಪ್ರದೇಶ): ಶಿಕ್ಷಣ ಕ್ಷೇತ್ರದ ಗೌರವಕ್ಕೆ ಧಕ್ಕೆ ತರುವಂತಹ ಘಟನೆಯೊಂದು ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.…

23 hours ago

ಒಂಟಿ ಯುವತಿಯ ಮನೆಗೆ ನುಗ್ಗಲು ಯತ್ನಿಸಿದ ಡೆಲಿವರಿ ಬಾಯ್? ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ಘಟನೆ!

ಬೆಂಗಳೂರು: ನಗರದ ಅಪಾರ್ಟ್‌ಮೆಂಟ್‌ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…

2 days ago

ಪ್ಯಾಕಿಂಗ್ ಕೆಲಸದ ಆಮಿಷಕ್ಕೆ ಕೋಟಿ ಕೋಟಿ ವಂಚನೆ: ದಂಪತಿ ಬಂಧನ, ಹಲವು ಜಿಲ್ಲೆಗಳಲ್ಲಿ ಪ್ರಕರಣ ದಾಖಲು!

ಬೆಂಗಳೂರು: ಮನೆದಲ್ಲೇ ಕುಳಿತು ಬೂದುಬತ್ತಿ, ಮೆಣದಬತ್ತಿ ಹಾಗೂ ಪೇಪರ್ ಪ್ಲೇಟ್ ಪ್ಯಾಕಿಂಗ್ ಕೆಲಸ ನೀಡಿ ಹೆಚ್ಚಿನ ಆದಾಯ ಗಳಿಸಬಹುದು ಎಂದು…

2 days ago