Latest

“ಸುಧಾಮೂರ್ತಿ ಅವರ ಆಸ್ತಿ ಜಗದಗಲ, ತಿಳುವಳಿಕೆ ಚಮಚದಗಲ” -ನಟ ಚೇತನ್‌ ಟೀಕೆ

ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರು ಇತ್ತೀಚೆಗೆ ‘ಖಾನೆ ಮೇ ಕ್ಯಾ ಹೈ’ ಯೂಟ್ಯೂಬ್ ಚಾನೆಲ್‌ನ ‘ಖಾನೆ ಮೇ ಕೌನ್ ಹೇ’ ಎಂಬ ಸಂಚಿಕೆಯಲ್ಲಿ ಕಾಣಿಸಿಕೊಂಡಿದ್ದರು. ಆ ವೇಳೆ ತಮ್ಮ ಆಹಾರ ಕ್ರಮದ ರೀತಿ, ನೀತಿಗಳ ಬಗ್ಗೆ ಮಾತನಾಡಿದ್ದರು. ಇನ್ನು ಅದೇ ವೇಳೆ ಸುಧಾ ಮೂರ್ತಿ ಅವರು ನೀಡಿದ ಹೇಳಿಕೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ಈ ವಿಚಾರವಾಗಿ ನಟ ಚೇತನ್‌ ಅಹಿಂಸಾ ಅವರು ನೇರವಾಗಿ ಸುಧಾಮೂರ್ತಿ ಅವರನ್ನು ಟ್ವೀಟ್‌ ಮೂಲಕ ಟೀಕಿಸಿದ್ದಾರೆ.
“ನಾನು ಶುದ್ಧ ಸಸ್ಯಾಹಾರಿ, ಮೊಟ್ಟೆ, ಈರುಳ್ಳಿ, ಬೆಳ್ಳುಳ್ಳಿ ಕೂಡ ಸೇವಿಸುವುದಿಲ್ಲ. ವಿದೇಶಕ್ಕೆ ಹೋಗುವಾಗ ತಮಗೆ ಬೇಕಾದ ಊಟ ತಿಂಡಿಯನ್ನು ರೆಡಿ ಮಾಡಿಕೊಂಡು ಬ್ಯಾಗ್ ನಲ್ಲಿ ಹಾಕಿಕೊಂಡು ಹೋಗುತ್ತೇನೆ. ಈ ಹೋಟೆಲ್‌ಗಳಲ್ಲಿ ಸಸ್ಯಾಹಾರ-ಮಾಂಸಾಹಾರ ಭಕ್ಷ್ಯಗಳಿಗೆ ಒಂದೇ ಚಮಚ ಬಳಸುವ ಬಗ್ಗೆ ನನ್ನ ಮನಸ್ಸಿಗೆ ತುಂಬಾ ಆತಂಕವಾಗುತ್ತದೆ. ಹೀಗಾಗಿ ವಿದೇಶಕ್ಕೆ ಹೋಗುವಾಗ ಸ್ಪೂನ್ ಕೂಡ ಜೊತೆಗೆ ತೆಗೆದುಕೊಂಡು ಹೋಗುತ್ತೇನೆ” ಎಂದು ಸುಧಾ ಮೂರ್ತಿ ಅವರು ಹೇಳಿರುವ ಮಾತು ಟ್ರೋಲ್ ಆಗುತ್ತಿದೆ.
ಇನ್ನು ಈ ಕುರಿತು ಟ್ವೀಟ್‌ ಮಾಡಿರುವ ನಟ ಚೇತನ್‌ “ಸುಧಾಮೂರ್ತಿಯವರು ನಮ್ಮ ಬ್ರಾಹ್ಮಣ್ಯ-ಬಂಡವಾಳಶಾಹಿ ಸಮಾಜದಿಂದ ಅತಿಯಾದ ಬಿಲ್ಡಪ್‌ನಿಂದ ಗುರುತಿಸಲ್ಪಟ್ಟ ಮತ್ತು ಅನರ್ಹವಾಗಿ ಗೌರವಿಸಲ್ಪಟ್ಟ ಸಾರ್ವಜನಿಕ ವ್ಯಕ್ತಿ” ಮುಂದುವರಿದು, “ಅವರು ತನ್ನ ಸೀಮಿತ, ಮಡಿವಂತಿಕೆಯ ಚಿಂತನೆಯನ್ನು ಬಹಿರಂಗಪಡಿಸುವ ಹೇಳಿಕೆಗಳನ್ನು ನಿರಂತರವಾಗಿ ಮಾಡುತ್ತಾರೆ. ಸುಧಾಮೂರ್ತಿಯವರು ಹೆಚ್ಚು ಮಾತನಾಡಬೇಕು; ಅವರ ಆಸ್ತಿ ಜಗದಗಲ -ತಿಳಿವಳಿಕೆ ಚಮಚದಗಲ!” ಎಂದು ಟೀಕಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಚಲಿಸುವ ರೈಲು ಕೆಳಗೆ ಸಿಲುಕಿದ ತಂದೆ-ಮಗು: ಅದಮ್ಯ ಧೈರ್ಯದಿಂದ ಪಾರಾದ ಜೀವಗಳು!

ಬಾಂಗ್ಲಾದೇಶದ ಕಿಶೋರ್‌ಗಂಜ್ ಜಿಲ್ಲೆಯ ಭೈರಬ್ ರೈಲು ನಿಲ್ದಾಣದಲ್ಲಿ ನಡೆದ ಹೃದಯ ಕಲುಕುವ ಘಟನೆ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ…

31 minutes ago

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ: ಅಥಣಿಯಲ್ಲಿ ಹೃದಯವಿದ್ರಾವಕ ಘಟನೆ

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿ 15 ವರ್ಷಗಳ ದಾಂಪತ್ಯ ಜೀವನ ನಡೆಸಿದ್ದ ಮಹಿಳೆಯೊಬ್ಬಳು ಗಂಡನ ವರದಕ್ಷಿಣೆ ಕಿರುಕುಳಕ್ಕೆ…

35 minutes ago

ಬಿಜೆಪಿ ಯುವ ಮೋರ್ಚಾ ನಾಯಕ ವೆಂಕಟೇಶ್ ಕೊಲೆ ಪ್ರಕರಣ: ಆರು ಅಪರಾಧಿಗಳಿಗೆ ಗಲ್ಲು ಶಿಕ್ಷೆ

ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್‌ಎನ್ ವೆಂಕಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು…

38 minutes ago

66ರ ವೃದ್ಧನಿಗೆ 35ರ ಯುವತಿಯೊಂದಿಗೆ ಮದುವೆ! ವಯಸ್ಸು ಕೇವಲ ಸಂಖ್ಯೆ ಮಾತ್ರವೇ?

66 ವರ್ಷದ ಸೋಮ್ ದೇವ್ ಮತ್ತು 35 ವರ್ಷದ ಯುವತಿಯ ವಿವಾಹ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.…

53 minutes ago

ವಿಮೆ-ಆಸ್ತಿ ಲಾಭಕ್ಕಾಗಿ ಗಂಡನ ಕೊಲೆ: ಹರಿಯಾಣದಲ್ಲಿ ಪ್ರಿಯಕರ ನೊಂದಿಗೆ ಪತ್ನಿ ರಚಿಸಿದ್ದ ಸಂಚು ಬಯಲು.!

ಹರಿಯಾಣದ ಚರ್ಕಿ ದಾದ್ರಿ ಜಿಲ್ಲೆಯಲ್ಲಿ ನಡೆದ ಭೀಕರ ಘಟನೆಯೊಂದು ಮಾನವ ಸಂಬಂಧಗಳನ್ನೇ ಪ್ರಶ್ನಿಸುವಂತೆ ಮಾಡಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ,…

55 minutes ago

ಬೆಂಗಳೂರು ಡ್ರಗ್ಸ್ ಜಾಲದ ಮೇಲೆ ಭಾರೀ ದಾಳಿ: ₹36 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ, 16 ಮಂದಿ ಬಂಧನ

ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ಮುಂದುವರೆಸಿದ್ದು, ನಾಲ್ವರು ವಿದೇಶಿಯರು ಸೇರಿದಂತೆ ಒಟ್ಟು 16 ಮಂದಿಯನ್ನು…

6 hours ago