ಧಾರವಾಡ: ಆನ್‌ಲೈನ್ ಗೇಮ್‌ ಚಟದಿಂದ ಹಣ ಕಳೆದುಕೊಂಡ ನೋವಿನಿಂದ ಐಐಟಿ ಧಾರವಾಡದ ಸ್ಟಾಫ್ ನರ್ಸ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಗರಗ ಗ್ರಾಮದ ನಿವಾಸಿ ನಾಗರಾಜ್ ಶಿವಪ್ಪ ಉಳವಣ್ಣವರ (30) ತಮ್ಮ ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಅವರು ಆನ್‌ಲೈನ್ ಗೇಮಿಂಗ್‌ಗೆ ಆಕರ್ಷಿತರಾಗಿ ಸುಮಾರು ₹20 ಲಕ್ಷಕ್ಕೂ ಹೆಚ್ಚು ಹಣ ನಷ್ಟಕ್ಕೆ ಒಳಗಾಗಿದ್ದರು ಎಂದು ತಿಳಿದುಬಂದಿದೆ. ಈ ಆರ್ಥಿಕ ಸಂಕಟಕ್ಕೆ ಮನನೊಂದು ಅವರು ಕಠೋರ ನಿರ್ಧಾರಕ್ಕೆ ಮೊರೆಹೋದ ಸಾಧ್ಯತೆ ವ್ಯಕ್ತವಾಗಿದೆ.

ಘಟನೆ ಸಂಬಂಧ ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಈ ಘಟನೆ ಆನ್‌ಲೈನ್ ಗೇಮಿಂಗ್‌ಗೆ ಸಂಬಂಧಿಸಿದ ಆತಂಕವನ್ನು ಮತ್ತೊಮ್ಮೆ ಎತ್ತಿ ತೋರಿಸಿದ್ದು, ಹಣ ಕಳೆದುಕೊಳ್ಳುವ ಭಯದಿಂದ ಇಂತಹ ದುರ್ಘಟನೆಗಳು ನಡೆಯುತ್ತಿರುವುದು ಕಳವಳಕಾರಿ ಬೆಳವಣಿಗೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಕುರಿತು ಹೆಚ್ಚಿನ ಮಾಹಿತಿ ತಿಳಿಯಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

error: Content is protected !!