Latest

ಆನ್‌ಲೈನ್ ಗೇಮಿಂಗ್ ನಷ್ಟದಿಂದ ಆತ್ಮಹತ್ಯೆ: ಐಐಟಿ ಧಾರವಾಡ ನರ್ಸ್ ದುಃಖದ ಅಂತ್ಯ

ಧಾರವಾಡ: ಆನ್‌ಲೈನ್ ಗೇಮ್‌ ಚಟದಿಂದ ಹಣ ಕಳೆದುಕೊಂಡ ನೋವಿನಿಂದ ಐಐಟಿ ಧಾರವಾಡದ ಸ್ಟಾಫ್ ನರ್ಸ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಗರಗ ಗ್ರಾಮದ ನಿವಾಸಿ ನಾಗರಾಜ್ ಶಿವಪ್ಪ ಉಳವಣ್ಣವರ (30) ತಮ್ಮ ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಅವರು ಆನ್‌ಲೈನ್ ಗೇಮಿಂಗ್‌ಗೆ ಆಕರ್ಷಿತರಾಗಿ ಸುಮಾರು ₹20 ಲಕ್ಷಕ್ಕೂ ಹೆಚ್ಚು ಹಣ ನಷ್ಟಕ್ಕೆ ಒಳಗಾಗಿದ್ದರು ಎಂದು ತಿಳಿದುಬಂದಿದೆ. ಈ ಆರ್ಥಿಕ ಸಂಕಟಕ್ಕೆ ಮನನೊಂದು ಅವರು ಕಠೋರ ನಿರ್ಧಾರಕ್ಕೆ ಮೊರೆಹೋದ ಸಾಧ್ಯತೆ ವ್ಯಕ್ತವಾಗಿದೆ.

ಘಟನೆ ಸಂಬಂಧ ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಈ ಘಟನೆ ಆನ್‌ಲೈನ್ ಗೇಮಿಂಗ್‌ಗೆ ಸಂಬಂಧಿಸಿದ ಆತಂಕವನ್ನು ಮತ್ತೊಮ್ಮೆ ಎತ್ತಿ ತೋರಿಸಿದ್ದು, ಹಣ ಕಳೆದುಕೊಳ್ಳುವ ಭಯದಿಂದ ಇಂತಹ ದುರ್ಘಟನೆಗಳು ನಡೆಯುತ್ತಿರುವುದು ಕಳವಳಕಾರಿ ಬೆಳವಣಿಗೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಕುರಿತು ಹೆಚ್ಚಿನ ಮಾಹಿತಿ ತಿಳಿಯಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

nazeer ahamad

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

27 minutes ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

5 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

5 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

5 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

5 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

10 hours ago