Categories: CrimeLatest

ವಿಡಿಯೋ ಕಾಲ್ ಮಧ್ಯೆ ಆತ್ಮಹತ್ಯೆ: ಪ್ರೇಮ ವೈಫಲ್ಯದಿಂದ ಯಲಹಂಕದಲ್ಲಿ ಯುವಕನ ದುರ್ಮರಣ

ಪ್ರೀತಿ ಹೆಸರಿನಲ್ಲಿ ವಂಚನೆ ಆರೋಪದ ಹಿನ್ನೆಲೆ ಮನನೊಂದು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಯಲಹಂಕ ನ್ಯೂ ಟೌನ್ ಅಟ್ಟೂರು ಪ್ರದೇಶದಲ್ಲಿ ನಡೆದಿದೆ. ಮೃತ ಯುವಕನನ್ನು ಅಭಿಷೇಕ್ (23) ಎಂದು ಗುರುತಿಸಲಾಗಿದೆ.

ಲವರ್ ಫೇಲ್ಯೂರ್‌ನಿಂದ ಮನಸ್ಸಿಗೆ ತೀವ್ರ ಆಘಾತಗೊಂಡಿದ್ದ ಅಭಿಷೇಕ್, ಆತ್ಮಹತ್ಯೆಗೆ ಮುನ್ನ ತನ್ನ ಪ್ರೇಯಸಿಗೆ ವಿಡಿಯೋ ಕಾಲ್ ಮಾಡಿದ್ದಾನೆ. ಈ ವೇಳೆ ಕಣ್ಣೀರು ಹಾಕುತ್ತಾ “ನನ್ನನ್ನು ಯಾಕೆ ಮೋಸ ಮಾಡಿದೆ?” ಎಂದು ಪ್ರಶ್ನಿಸಿದ ಬಳಿಕ, ಆಕೆಯ ಮುಂದೆನೇ ನೇಣಿಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ.

ಘಟನೆಯ ನಂತರ ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಇದೇ ತಿಂಗಳ 9ರಂದು ಈ ದುರ್ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆತ್ಮಹತ್ಯೆಗೆ ಮುನ್ನ ಅಭಿಷೇಕ್ ಮಾಡಿದ ವಿಡಿಯೋ ಕಾಲ್ ಹಾಗೂ ಮೆಸೇಜ್‌ಗಳ ಸ್ಕ್ರೀನ್‌ಶಾಟ್‌ಗಳು ಕೂಡ ಪತ್ತೆಯಾಗಿದ್ದು, ಅವು ಪ್ರಕರಣದ ಪ್ರಮುಖ ಸಾಕ್ಷಿಗಳಾಗಿವೆ.

ಅಭಿಷೇಕ್ ತನ್ನ ರೂಮಿನ ಕಿಟಕಿಗೆ ಕಬ್ಬಿಣದ ವೇಲು ಕಟ್ಟಿ ನೇಣು ಬಿಗಿದುಕೊಂಡು ಜೀವ ತೆತ್ತಿದ್ದಾನೆ. ಈ ಕುರಿತು ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಯುವತಿಯನ್ನು ಕರೆಸಿ ವಿಚಾರಣೆ ನಡೆಸುತ್ತಿದ್ದಾರೆ.

ವಿಡಿಯೋದಲ್ಲಿ ಅಭಿಷೇಕ್, “ಇಷ್ಟು ದಿನ ಪ್ರೀತಿ ಮಾಡಿದ್ದು ಯಾಕೆ? ಈಗ ಯಾಕೆ ದೂರವಾಗಿದ್ದೀಯ?” ಎಂದು ಬೇಸರ ವ್ಯಕ್ತಪಡಿಸಿರುವುದು ಕಂಡುಬಂದಿದೆ. ಇದೇ ವೇಳೆ, ಮೃತನ ಕುಟುಂಬಸ್ಥರು ಯುವತಿ ಮತ್ತು ಆಕೆಯ ಪೋಷಕರ ವಿರುದ್ಧ ಕಿರುಕುಳ ಆರೋಪ ಮಾಡಿದ್ದಾರೆ.

ಇನ್ನೊಂದೆಡೆ, ಈ ಹಿಂದೆ ಯುವತಿ ಹಾಗೂ ಆಕೆಯ ಪೋಷಕರು ಅಭಿಷೇಕ್ ವಿರುದ್ಧ ದೂರು ನೀಡಿದ್ದರೆಂಬ ಮಾಹಿತಿಯೂ ಹೊರಬಂದಿದೆ. “ನನ್ನ ಮಗಳ ಹಿಂದೆ ಬಿದ್ದಿದ್ದಾನೆ” ಎಂದು ಯುವತಿಯ ತಂದೆ ಪೊಲೀಸ್ ಠಾಣೆಗೆ ದೂರು ನೀಡಿದ್ದರಂತೆ. ಬಳಿಕ ಠಾಣೆಯಲ್ಲಿ ಇಬ್ಬರ ನಡುವೆ ರಾಜಿ ಸಂಧಾನವೂ ನಡೆದಿತ್ತು ಎಂದು ತಿಳಿದು ಬಂದಿದೆ.

ಪ್ರಸ್ತುತ ಪ್ರಕರಣದ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಭ್ರಷ್ಟರ ಬೇಟೆ

Recent Posts

ಭೀಕರ ರಸ್ತೆ ಅಪಘಾತ: BMW ಕಾರಿನ ಮೇಲೆ ಲಾರಿ ಪಲ್ಟಿ, ಹೈಕೋರ್ಟ್ ವಕೀಲರ ದುರ್ಮರಣ

ಆಂಧ್ರಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಹಿರಿಯ ಹೈಕೋರ್ಟ್ ವಕೀಲರು ದಾರುಣವಾಗಿ ಮೃತಪಟ್ಟಿದ್ದಾರೆ. ಸಿಮೆಂಟ್ ತುಂಬಿದ ಟ್ಯಾಂಕರ್…

1 hour ago

ಕೆಲವೇ ದಿನಗಳಲ್ಲಿ ಸಾಯುತ್ತಿದ್ದೇನೆ, ನಿನ್ನ ಬೆತ್ತಲೆ ನೋಡಬೇಕು ಎಂದು ನಂಬಿಸಿ ವಿಡಿಯೋ ಪಡೆದು ಶಿಕ್ಷಕಿಗೆ ಟಾರ್ಚರ್..!

ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿಯಲ್ಲಿ ಶಿಕ್ಷಕಿಯೊಬ್ಬರನ್ನು ಸಾಮಾಜಿಕ ಜಾಲತಾಣದ ಮೂಲಕ ಮೋಸಗೊಳಿಸಿ ಬ್ಲ್ಯಾಕ್‌ಮೇಲ್ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಆರೋಪಿಯೊಬ್ಬನು ಇನ್‌ಸ್ಟಾಗ್ರಾಂ…

1 hour ago

2 ಲಕ್ಷ ಲಂಚ ಬೇಡಿಕೆ: ಸಿರವಾರ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ

ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸುರೇಶ್ ಶೆಟ್ಟಿ, ಖಾತಾ ಮ್ಯೂಟೇಶನ್‌ಗೆ ಲಂಚ ಬೇಡಿಕೆ ಇಟ್ಟ ಆರೋಪದಡಿ ಲೋಕಾಯುಕ್ತರ…

2 hours ago

15 ನಿಮಿಷದಲ್ಲಿ ಕಾಣೆಯಾದವಳು,1500 ಅಡಿ ಆಳದಲ್ಲಿ ಪತ್ತೆ: ಶ್ರೀನಂದಾ ಸಾವು ಹೇಗಾಯ್ತು?

ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸಕ್ಕೆ ಬಂದಿದ್ದ ಕೇರಳ ಮೂಲದ 15 ವರ್ಷದ ಬಾಲಕಿ ಶ್ರೀನಂದಾ ನಿಗೂಢವಾಗಿ ನಾಪತ್ತೆಯಾಗಿದ್ದ ಘಟನೆ…

4 hours ago

ತಡರಾತ್ರಿ ಭೀಕರ ಅಪಘಾತ: ಸಹ ಕಲಾವಿದ ಹರೀಶ್ ಸ್ಥಳದಲ್ಲೇ ಸಾವು

ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಆನೆಕಾಡು ಅರಣ್ಯ ಪ್ರದೇಶದ ಬಳಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ…

5 hours ago

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 15.45 ಕೋಟಿ ದೋಚಿದ ವಂಚಕರು: ಉದ್ಯಮಿಗೆ ಸಿಬಿಐ ಹೆಸರಿನಲ್ಲಿ ಬಲೆ

ರಾಜ್ಯದಲ್ಲಿ ದಿನೇ ದಿನೇ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಇದೀಗ ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಉದ್ಯಮಿಯೊಬ್ಬರನ್ನು ಭಯಭೀತಿಗೊಳಿಸಿ 15 ಕೋಟಿ…

5 hours ago