Categories: CrimeLatest

ಸುಜಾತಾಳಿಗೆ ಅಕ್ರಮ ಸಂಬಂಧವೇ ಮುಳ್ಳಾಯಿತು: ಆಸ್ತಿಗಾಗಿ ಕೊಂದೆ ಬಿಟ್ಟ ಕ್ರೂರಿ..!

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ವಿಚ್ಛೇದಿತ ಮಹಿಳೆಯೊಬ್ಬಳನ್ನು ಆಸ್ತಿ ಲಪಟಾಯಿಸುವ ಉದ್ದೇಶದಿಂದ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣವನ್ನು ಬೆನ್ನತ್ತಿದ ಪೊಲೀಸರು ಆರೋಪಿಯನ್ನು ಬಂಧಿಸಿ, ಘಟನೆಯ ಹಿನ್ನಲೆಯನ್ನು ಬಯಲಿಗೆಳೆದಿದ್ದಾರೆ.

ಕಳೆದ ಮಾರ್ಚ್ 12ರಂದು ಅಥಣಿ ಪಟ್ಟಣದ ಹೊರವಲಯದ ಕಬ್ಬಿನ ಗದ್ದೆಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿತ್ತು. ತನಿಖೆ ನಡೆಸಿದ ಪೊಲೀಸರು ಮೃತಳನ್ನು ಸುಜಾತಾ ಪವಾರ್ (35) ಎಂದು ಗುರುತಿಸಿದ್ದು, ಆಕೆಯೊಂದಿಗೆ ಸಂಬಂಧ ಹೊಂದಿದ್ದ ಕುಮಾರ್ ಹವಾಲ್ದಾರ್ ಎಂಬಾತನನ್ನು ಬಂಧಿಸಿದ್ದಾರೆ.

ನಂಬಿಕೆ ಪಡೆದು ದ್ರೋಹ

ಸುಜಾತಾ ಪವಾರ್ 16 ವರ್ಷಗಳ ಹಿಂದೆ ಹಾರೂಗೇರಿ ಮೂಲದ ಯುವಕನೊಂದಿಗೆ ವಿವಾಹವಾಗಿದ್ದು, ದಂಪತಿಗೆ ಮಗನಿದ್ದಾನೆ. ಆದರೆ ಪತಿಯ ಕಿರುಕುಳದಿಂದ ಬೇಸತ್ತು, 13 ವರ್ಷಗಳ ನಂತರ ವಿಚ್ಛೇದನ ಪಡೆದು ತವರು ಮನೆ ಸೇರಿದ್ದಳು. ಬಳಿಕ ಪತಿಯರಿಂದ ದೊರೆತ ಮನೆ ಮಾರಾಟ ಮಾಡಿ, ಆ ಹಣದಿಂದ ಅಥಣಿ ಹೊರವಲಯದಲ್ಲಿ ಜಾಗ ಖರೀದಿಸಿ, ಹೊಸ ಮನೆ ನಿರ್ಮಾಣ ಮಾಡಲು ಮುಂದಾಗಿದ್ದಳು.

ಈ ಸಂದರ್ಭದಲ್ಲಿ ಗುತ್ತಿಗೆದಾರನಾಗಿ ಕೆಲಸ ಮಾಡುತ್ತಿದ್ದ ಕುಮಾರ್ ಹವಾಲ್ದಾರ್ ಪರಿಚಯವಾಗಿದ್ದನು. ಮನೆ ಕಟ್ಟಿಕೊಡುವ ನೆಪದಲ್ಲಿ ಸುಜಾತಾಳ ವಿಶ್ವಾಸ ಗಳಿಸಿದ ಆತ, ಮದುವೆಯ ಮಾತು ನೀಡಿ ಆಕೆಯೊಂದಿಗೆ ದೈಹಿಕ ಸಂಬಂಧ ಬೆಳೆಸಿಕೊಂಡಿದ್ದನು. ಆದರೆ ಕಳೆದ ಎರಡು ವರ್ಷಗಳಿಂದ ಇವರ ಸಂಬಂಧದಲ್ಲಿ ಬಿರುಕು ಉಂಟಾಗಿತ್ತು ಎಂದು ತಿಳಿದುಬಂದಿದೆ.

ಆಸ್ತಿ ಮೇಲೆ ಕಣ್ಣು

ಮದುವೆಯಾಗಲು ಮನೆ ತನ್ನ ಹೆಸರಿಗೆ ಮಾಡಿಕೊಡಬೇಕು ಎಂದು ಕುಮಾರ್ ಸುಜಾತಾಳ ಮೇಲೆ ಒತ್ತಡ ಹಾಕಲು ಪ್ರಾರಂಭಿಸಿದ್ದನು. ಆದರೆ ತನ್ನ ಮಗನ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಸುಜಾತಾ ಇದಕ್ಕೆ ನಿರಾಕರಿಸಿದ್ದಳು. ಇದರಿಂದ ಕೋಪಗೊಂಡ ಆರೋಪಿ ಕೊಲೆ ಮಾಡಲು ಸಂಚು ರೂಪಿಸಿದ್ದಾನೆ.

ಮಾರ್ಚ್ 5ರಂದು ಮಧ್ಯಾಹ್ನ ಮದ್ಯಪಾನ ಮಾಡಿ ಬಂದ ಕುಮಾರ್, ಸುಜಾತಾಳೊಂದಿಗೆ ಜಗಳವಾಡಿ, “ಮಾತನಾಡಬೇಕು” ಎಂದು ಹೇಳಿ ಬೈಕ್‌ನಲ್ಲಿ ಕರೆದುಕೊಂಡು ಹೋಗಿದ್ದಾನೆ. ಬಳಿಕ ನಿರ್ಜನ ಪ್ರದೇಶದಲ್ಲಿ ಆಕೆಯನ್ನು ಹತ್ಯೆ ಮಾಡಿ, ಮನೆಗೆ ವಾಪಸ್ಸು ಬಂದು ಆಕೆಯ ವಸ್ತುಗಳನ್ನು ತೆಗೆದುಕೊಂಡು ಪರಾರಿಯಾಗಿದ್ದಾನೆ.

ಸುಳ್ಳಿನಿಂದ ತಪ್ಪಿಸಿಕೊಳ್ಳಲು ಯತ್ನ

ಘಟನೆಯ ಬಳಿಕ ಸುಜಾತಾಳ 15 ವರ್ಷದ ಮಗ ಪ್ರಶ್ನಿಸಿದಾಗ, “ಅಮ್ಮ ಜಗಳ ಮಾಡಿಕೊಂಡು ಗೆಳತಿಯ ಮನೆಗೆ ಹೋಗಿದ್ದಾಳೆ” ಎಂದು ಸುಳ್ಳು ಹೇಳಿದ್ದಾನೆ. ಅಲ್ಲದೇ ತನ್ನನ್ನು ಬೈಯುತ್ತಾಳೆ ಎಂದು ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದಾಳೆ ಎಂದು ಹೇಳಿ, ತಾನೂ ಜಾತ್ರೆಗೆ ಹೋಗುತ್ತಿದ್ದೇನೆಂದು ನಾಟಕವಾಡಿ ಅಲ್ಲಿಂದ ತೆರಳಿದ್ದಾನೆ.

ಇನ್ನೊಂದೆಡೆ, ಸುಜಾತಾಳ ತಾಯಿ ಮಗಳು ಸ್ನೇಹಿತರೊಂದಿಗೆ ಹೊರಗಡೆ ಹೋಗಿದ್ದಾಳೆ ಎಂದು ಭಾವಿಸಿ ಶಂಕೆಪಡಲಿಲ್ಲ. ಆದರೆ ಪೊಲೀಸರು ಮನೆಗೆ ಬಂದು ಸುಜಾತಾಳ ಸಾವಿನ ಸುದ್ದಿ ನೀಡಿದ ಬಳಿಕ, ಪ್ರಕರಣದ ನಿಜ ಸ್ವರೂಪ ಬಹಿರಂಗವಾಯಿತು.

ಈ ಘಟನೆ ನಂಬಿಕೆಯನ್ನು ದುರುಪಯೋಗಪಡಿಸಿಕೊಂಡು ಆಸ್ತಿ ಮೇಲೆ ಕಣ್ಣಿಟ್ಟ ವ್ಯಕ್ತಿಯ ಕ್ರೂರ ಮನಸ್ಥಿತಿಯನ್ನು ಬಿಚ್ಚಿಡುವುದರೊಂದಿಗೆ, ಮಹಿಳೆಯರ ಸುರಕ್ಷತೆ ಕುರಿತು ಮತ್ತೊಮ್ಮೆ ಚಿಂತನೆಗೆ ಕಾರಣವಾಗಿದೆ.

ಭ್ರಷ್ಟರ ಬೇಟೆ

Recent Posts

ಭಾರಿ ಮಳೆಗೆ ರಸ್ತೆ ಕೊಚ್ಚಿ ಹೋಯ್ತು; ಕಳಪೆ ಕಾಮಗಾರಿಗೆ ಸಾರ್ವಜನಿಕರ ಆಕ್ರೋಶ

ಶಿರಸಿ: ಮೇ 24ರ ನಸುಕಿನ ಜಾವ ಸುರಿದ ಭಾರೀ ಮಳೆಯಿಂದ ನಗರದ ಗಣೇಶನಗರ ಎರಡನೇ ವಾರ್ಡ್‌ನಲ್ಲಿ ರಸ್ತೆ ಸಂಪೂರ್ಣ ಕುಸಿದು…

2 hours ago

ಅಳ್ವೇಕೋಡಿ ಕಡಲ ತೀರದಲ್ಲಿ ದಾರುಣ ದುರಂತ: ಒಂದೇ ಕುಟುಂಬದ 8 ಮಂದಿ ಬಲಿ, ಮೂವರು ನಾಪತ್ತೆ

ಉತ್ತರ ಕನ್ನಡ : ಜಿಲ್ಲೆಯ ಭಟ್ಕಳ ತಾಲೂಕಿನ ಅಳ್ವೇಕೋಡಿ ಸಮುದ್ರ ತೀರದಲ್ಲಿ ಭಾನುವಾರ ಭೀಕರ ದುರಂತ ಸಂಭವಿಸಿದ್ದು, ಒಂದೇ ಕುಟುಂಬದ…

2 hours ago

ಕ್ರಿಕೆಟ್‌ನ ಕರಾಳ ಮುಖ ಬಯಲು? ಆಯ್ಕೆಗೆ ಲೈಂಗಿಕ ಆಮಿಷ, ದುಬಾರಿ ಗಿಫ್ಟ್ ಆರೋಪ!

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಒಂದು ಪಾಡ್‌ಕಾಸ್ಟ್ ವಿಡಿಯೋ ಇದೀಗ ಭಾರತೀಯ ಕ್ರಿಕೆಟ್ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮಾಜಿ…

10 hours ago

ಸುಜಾತ ಭೂಮಿ ವಿವಾದಕ್ಕೆ ಹೊಸ ತಿರುವು: ರೈತರ ಪರ ನಿಂತ ಹರತಾಳು ಹಾಲಪ್ಪ, ಡಿಎಫ್‌ಒಗೆ ಮನವಿ

ಸಾಗರ ತಾಲೂಕಿನ ಅಡ್ಡೇರಿ ಗ್ರಾಮದ ರೈತ ಮಹಿಳೆ ಸುಜಾತ ಅವರ ಭೂಮಿ ವಿವಾದ ಇದೀಗ ಹೊಸ ಹಂತ ತಲುಪಿದ್ದು, ಮಾಜಿ…

1 day ago

ಕಚೇರಿಯನ್ನೇ ಮದ್ಯಪಾನದ ಅಡ್ಡೆಯನ್ನಾಗಿಸಿದ ಅಧಿಕಾರಿಗಳು; ಎಇಇ ಸೇರಿ ಮೂವರು ಸಸ್ಪೆಂಡ್

ರಾಯಚೂರಿನಲ್ಲಿ ಸರ್ಕಾರಿ ಕಚೇರಿಯಲ್ಲೇ ಗುಂಡು-ತುಂಡಿನ ಪಾರ್ಟಿ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗದ ಮೂವರು ಸಿಬ್ಬಂದಿಯನ್ನು…

1 day ago

ಕಳ್ಳತನ ನಡೆದ 8 ಗಂಟೆಯೊಳಗೆ ಇಬ್ಬರು ಆರೋಪಿಗಳ ಬಂಧನ, ಲಕ್ಷಾಂತರ ಮೌಲ್ಯದ ಚಿನ್ನ-ನಗದು ವಶ

ಭಟ್ಕಳ: ಮನೆ ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಬಂಗಾರ ಹಾಗೂ ನಗದು ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಕೇವಲ…

2 days ago