Categories: CrimeLatest

ಸುಜಾತಾಳಿಗೆ ಅಕ್ರಮ ಸಂಬಂಧವೇ ಮುಳ್ಳಾಯಿತು: ಆಸ್ತಿಗಾಗಿ ಕೊಂದೆ ಬಿಟ್ಟ ಕ್ರೂರಿ..!

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ವಿಚ್ಛೇದಿತ ಮಹಿಳೆಯೊಬ್ಬಳನ್ನು ಆಸ್ತಿ ಲಪಟಾಯಿಸುವ ಉದ್ದೇಶದಿಂದ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣವನ್ನು ಬೆನ್ನತ್ತಿದ ಪೊಲೀಸರು ಆರೋಪಿಯನ್ನು ಬಂಧಿಸಿ, ಘಟನೆಯ ಹಿನ್ನಲೆಯನ್ನು ಬಯಲಿಗೆಳೆದಿದ್ದಾರೆ.

ಕಳೆದ ಮಾರ್ಚ್ 12ರಂದು ಅಥಣಿ ಪಟ್ಟಣದ ಹೊರವಲಯದ ಕಬ್ಬಿನ ಗದ್ದೆಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿತ್ತು. ತನಿಖೆ ನಡೆಸಿದ ಪೊಲೀಸರು ಮೃತಳನ್ನು ಸುಜಾತಾ ಪವಾರ್ (35) ಎಂದು ಗುರುತಿಸಿದ್ದು, ಆಕೆಯೊಂದಿಗೆ ಸಂಬಂಧ ಹೊಂದಿದ್ದ ಕುಮಾರ್ ಹವಾಲ್ದಾರ್ ಎಂಬಾತನನ್ನು ಬಂಧಿಸಿದ್ದಾರೆ.

ನಂಬಿಕೆ ಪಡೆದು ದ್ರೋಹ

ಸುಜಾತಾ ಪವಾರ್ 16 ವರ್ಷಗಳ ಹಿಂದೆ ಹಾರೂಗೇರಿ ಮೂಲದ ಯುವಕನೊಂದಿಗೆ ವಿವಾಹವಾಗಿದ್ದು, ದಂಪತಿಗೆ ಮಗನಿದ್ದಾನೆ. ಆದರೆ ಪತಿಯ ಕಿರುಕುಳದಿಂದ ಬೇಸತ್ತು, 13 ವರ್ಷಗಳ ನಂತರ ವಿಚ್ಛೇದನ ಪಡೆದು ತವರು ಮನೆ ಸೇರಿದ್ದಳು. ಬಳಿಕ ಪತಿಯರಿಂದ ದೊರೆತ ಮನೆ ಮಾರಾಟ ಮಾಡಿ, ಆ ಹಣದಿಂದ ಅಥಣಿ ಹೊರವಲಯದಲ್ಲಿ ಜಾಗ ಖರೀದಿಸಿ, ಹೊಸ ಮನೆ ನಿರ್ಮಾಣ ಮಾಡಲು ಮುಂದಾಗಿದ್ದಳು.

ಈ ಸಂದರ್ಭದಲ್ಲಿ ಗುತ್ತಿಗೆದಾರನಾಗಿ ಕೆಲಸ ಮಾಡುತ್ತಿದ್ದ ಕುಮಾರ್ ಹವಾಲ್ದಾರ್ ಪರಿಚಯವಾಗಿದ್ದನು. ಮನೆ ಕಟ್ಟಿಕೊಡುವ ನೆಪದಲ್ಲಿ ಸುಜಾತಾಳ ವಿಶ್ವಾಸ ಗಳಿಸಿದ ಆತ, ಮದುವೆಯ ಮಾತು ನೀಡಿ ಆಕೆಯೊಂದಿಗೆ ದೈಹಿಕ ಸಂಬಂಧ ಬೆಳೆಸಿಕೊಂಡಿದ್ದನು. ಆದರೆ ಕಳೆದ ಎರಡು ವರ್ಷಗಳಿಂದ ಇವರ ಸಂಬಂಧದಲ್ಲಿ ಬಿರುಕು ಉಂಟಾಗಿತ್ತು ಎಂದು ತಿಳಿದುಬಂದಿದೆ.

ಆಸ್ತಿ ಮೇಲೆ ಕಣ್ಣು

ಮದುವೆಯಾಗಲು ಮನೆ ತನ್ನ ಹೆಸರಿಗೆ ಮಾಡಿಕೊಡಬೇಕು ಎಂದು ಕುಮಾರ್ ಸುಜಾತಾಳ ಮೇಲೆ ಒತ್ತಡ ಹಾಕಲು ಪ್ರಾರಂಭಿಸಿದ್ದನು. ಆದರೆ ತನ್ನ ಮಗನ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಸುಜಾತಾ ಇದಕ್ಕೆ ನಿರಾಕರಿಸಿದ್ದಳು. ಇದರಿಂದ ಕೋಪಗೊಂಡ ಆರೋಪಿ ಕೊಲೆ ಮಾಡಲು ಸಂಚು ರೂಪಿಸಿದ್ದಾನೆ.

ಮಾರ್ಚ್ 5ರಂದು ಮಧ್ಯಾಹ್ನ ಮದ್ಯಪಾನ ಮಾಡಿ ಬಂದ ಕುಮಾರ್, ಸುಜಾತಾಳೊಂದಿಗೆ ಜಗಳವಾಡಿ, “ಮಾತನಾಡಬೇಕು” ಎಂದು ಹೇಳಿ ಬೈಕ್‌ನಲ್ಲಿ ಕರೆದುಕೊಂಡು ಹೋಗಿದ್ದಾನೆ. ಬಳಿಕ ನಿರ್ಜನ ಪ್ರದೇಶದಲ್ಲಿ ಆಕೆಯನ್ನು ಹತ್ಯೆ ಮಾಡಿ, ಮನೆಗೆ ವಾಪಸ್ಸು ಬಂದು ಆಕೆಯ ವಸ್ತುಗಳನ್ನು ತೆಗೆದುಕೊಂಡು ಪರಾರಿಯಾಗಿದ್ದಾನೆ.

ಸುಳ್ಳಿನಿಂದ ತಪ್ಪಿಸಿಕೊಳ್ಳಲು ಯತ್ನ

ಘಟನೆಯ ಬಳಿಕ ಸುಜಾತಾಳ 15 ವರ್ಷದ ಮಗ ಪ್ರಶ್ನಿಸಿದಾಗ, “ಅಮ್ಮ ಜಗಳ ಮಾಡಿಕೊಂಡು ಗೆಳತಿಯ ಮನೆಗೆ ಹೋಗಿದ್ದಾಳೆ” ಎಂದು ಸುಳ್ಳು ಹೇಳಿದ್ದಾನೆ. ಅಲ್ಲದೇ ತನ್ನನ್ನು ಬೈಯುತ್ತಾಳೆ ಎಂದು ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದಾಳೆ ಎಂದು ಹೇಳಿ, ತಾನೂ ಜಾತ್ರೆಗೆ ಹೋಗುತ್ತಿದ್ದೇನೆಂದು ನಾಟಕವಾಡಿ ಅಲ್ಲಿಂದ ತೆರಳಿದ್ದಾನೆ.

ಇನ್ನೊಂದೆಡೆ, ಸುಜಾತಾಳ ತಾಯಿ ಮಗಳು ಸ್ನೇಹಿತರೊಂದಿಗೆ ಹೊರಗಡೆ ಹೋಗಿದ್ದಾಳೆ ಎಂದು ಭಾವಿಸಿ ಶಂಕೆಪಡಲಿಲ್ಲ. ಆದರೆ ಪೊಲೀಸರು ಮನೆಗೆ ಬಂದು ಸುಜಾತಾಳ ಸಾವಿನ ಸುದ್ದಿ ನೀಡಿದ ಬಳಿಕ, ಪ್ರಕರಣದ ನಿಜ ಸ್ವರೂಪ ಬಹಿರಂಗವಾಯಿತು.

ಈ ಘಟನೆ ನಂಬಿಕೆಯನ್ನು ದುರುಪಯೋಗಪಡಿಸಿಕೊಂಡು ಆಸ್ತಿ ಮೇಲೆ ಕಣ್ಣಿಟ್ಟ ವ್ಯಕ್ತಿಯ ಕ್ರೂರ ಮನಸ್ಥಿತಿಯನ್ನು ಬಿಚ್ಚಿಡುವುದರೊಂದಿಗೆ, ಮಹಿಳೆಯರ ಸುರಕ್ಷತೆ ಕುರಿತು ಮತ್ತೊಮ್ಮೆ ಚಿಂತನೆಗೆ ಕಾರಣವಾಗಿದೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

19 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

19 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

19 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

19 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

19 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

19 hours ago