ಹಾಸನ: ಹಾಸನ ಕ್ಷೇತ್ರದ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರು ಹೆಣ್ಣುಮಕ್ಕಳ ಬಗ್ಗೆ ಅವಾಚ್ಯ ಶಬ್ದಗಳನ್ನು ಬಳಸಿದ ಹಿನ್ನೆಲೆಯಲ್ಲಿ ವಿವಾದಕ್ಕೀಡಾಗಿದ್ದಾರೆ.
ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಅಗ್ರಹಾರ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೂರಜ್ ರೇವಣ್ಣ ಮಾತನಾಡುವ ವೇಳೆ, “ಇಲ್ಲಿ ಎರಡು ಪಕ್ಷಗಳಿವೆ, ಒಂದೇ ದೇವೇಗೌಡರ ಪರ ಮತ್ತು ಮತ್ತೊಂದೇ ಅವರ ವಿರುದ್ಧ. ನಾನು ಇಲ್ಲಿಗೆ ಬಂದಾಗ ‘ನಾಯಿಕಣ್ಣು, ನರಿ ಕಣ್ಣು, ಕೆಟ್ಟ ಮು… ಕಣ್ಣು’ ಅಂತಾ ಅಂತಾ ದೃಷ್ಟಿ ತೆಗೆದರು. ನಾನು ಅಷ್ಟೇ ಹಿಂಜರಿದು, ‘ಕೆಟ್ಟ ಸೂ… ಕಣ್ಣು’ ಎಂದೂ ಹೇಳಿದಿರಬಹುದೆಂದು ಯೋಚಿಸಿದ್ದೇನೆ” ಎಂದು ವಿವಾದಾತ್ಮಕ ಹೇಳಿಕೆ ನೀಡಿದರು.
“ನಾನು ಯಾವ ಹೆಣ್ಣುಮಕ್ಕಳನ್ನು ಅವಮಾನಿಸಿಲ್ಲ. ನಾನು ಪಕ್ಷದೊಳಗಿನ ಮೋಸ ಮಾಡಿದವರ ವಿರುದ್ಧ ಈ ಶಬ್ದಗಳನ್ನು ಬಳಸುತ್ತಿದ್ದೇನೆ. ತಪ್ಪಾಗಿ ಅರ್ಥಮಾಡಿಕೊಳ್ಳಬೇಡಿ” ಎಂದು ಅವರು ಹೇಳಿದ್ದಾರೆ.
ಪೆನ್ ಡ್ರೈವ್ ಹಂಚಿ ನಾನು ಎಂಎಲ್ ಸಿ ಆಗಿಲ್ಲ. ಪಕ್ಷದ ಕಾರ್ಯಕರ್ತರಿಗೆ ಯಾವುದೇ ಇಲಾಖೆಯಲ್ಲಿ ತೊಂದರೆಯಾದರೆ ನನ್ನ ಗಮನಕ್ಕೆ ತನ್ನಿ, ಯಾರು ಬರುತ್ತಾರೋ, ಬಿಡ್ತಾರೋ ಆದರೆ ನಾನು ಮಾತ್ರ ಬರುತ್ತೇನೆ.”ನಾನು ಯಾವ ಜಾತಿ, ಧರ್ಮವನ್ನು ನೋಡದೆ, ಎಲ್ಲರಿಗಾಗಿ ಕೆಲಸ ಮಾಡುತ್ತೇನೆ. ನಮ್ಮ ತಾತ ದೇವೇಗೌಡರು ಸದಾ ಜಾತಿ ಅಥವಾ ಧರ್ಮ ನೋಡದೆ ಸೇವೆ ಮಾಡಲು ಹೇಳಿದ್ದರು” ಎಂದು ಅವರು ತಮ್ಮ ಹೇಳಿಕೆಯನ್ನು ತಿಳಿಸಿದರು.
ರಾಯಚೂರು: ಖಾಸಗಿ ಶಾಲೆಯ ಮಾನ್ಯತೆ ನವೀಕರಣ ಮಾಡಿಕೊಡುವುದಕ್ಕಾಗಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ (ಡಿಡಿಪಿಐ) ಕಚೇರಿಯ…
ಮದುವೆಯಾಗಿ ಕೇವಲ 48 ದಿನಗಳಲ್ಲೇ 26 ವರ್ಷದ ನವವಧು ವಿಶಾಖಾ ತಿಲ್ಕರ್ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮುಂಬೈ ಸಮೀಪದ…
ನವದೆಹಲಿ: ಇತ್ತೀಚೆಗಷ್ಟೇ ವಿವಾಹವಾಗಿ ಹನಿಮೂನ್ಗಾಗಿ ಉತ್ತರಾಖಂಡಕ್ಕೆ ತೆರಳಿದ್ದ ದೆಹಲಿ ಮೂಲದ ಯುವ ಮಹಿಳಾ ಟೆಕ್ಕಿಯೊಬ್ಬರು ಮಸೂರಿಯ ಹೋಂಸ್ಟೇ ಕೊಠಡಿಯಲ್ಲಿ ಅನುಮಾನಾಸ್ಪದವಾಗಿ…
ಕಾರವಾರ: ಹಳಿಯಾಳದಲ್ಲಿ ಮಾಜಿ ರೌಡಿ ಶೀಟರ್ನಿಂದ ಪೊಲೀಸರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ…
ಬೆಂಗಳೂರು: ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾಗಿ ಪ್ರೀತಿಗೆ ತಿರುಗಿದ್ದ ಸಂಬಂಧವು ಕೊನೆಗೆ ಭೀಕರ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಬೆಂಗಳೂರಿನ ಮಲ್ಲೇಶ್ವರಂ ಪ್ರದೇಶದಲ್ಲಿ…
ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್ಸಿ/ಎಸ್ಟಿ ದೌರ್ಜನ್ಯ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ ಸರ್ಕಾರಿ ಅಭಿಯೋಜಕರಿಗೆ ಲಂಚ ನೀಡಲು ಯತ್ನಿಸಿದ…