Latest

ಕಲಬುರಗಿಯಲ್ಲಿ ಅಚ್ಚರಿ ಹುಟ್ಟಿಸಿದ ಎಡವಟ್ಟು: ಹಿಂದು ವ್ಯಕ್ತಿಗೆ ‘ಮುಸ್ಲಿಂ’ ಜಾತಿ ಪ್ರಮಾಣಪತ್ರ!

ಕಲಬುರಗಿ, ಜುಲೈ 27: ಸಾಮಾನ್ಯವಾಗಿ ಸರ್ಕಾರ ನೀಡುವ ಪ್ರಮಾಣಪತ್ರಗಳಲ್ಲಿ ಹೆಸರು, ವಿಳಾಸ ಅಥವಾ ಫೋಟೋ ತಪ್ಪಾಗಿ ಆಗುವುದು ಕೆಲವೊಮ್ಮೆ ಕಂಡುಬರುತ್ತದೆ. ಆದರೆ ಕಲಬುರಗಿಯಲ್ಲಿ ನಡೆದಿದೆ ಎಡವಟ್ಟು ಮಾತ್ರ ಅತಿಶಯ ಅಚ್ಚರಿಯ ಸಂಗತಿ. ಇಲ್ಲಿನ ತಹಶೀಲ್ದಾರ್ ಕಚೇರಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಒಬ್ಬ ಹಿಂದು ವ್ಯಕ್ತಿಗೆ ಮುಸ್ಲಿಂ ಜಾತಿ ಎಂದು ಉಲ್ಲೇಖಗೊಂಡ ಪ್ರಮಾಣಪತ್ರ ನೀಡಲಾಗಿದೆ.

ರಾಮತೀರ್ಥನಗರದ ನಿವಾಸಿ ಮಹಾಂತಪ್ಪ ಕೊತ್ಲೆ ಎಂಬವರು ವೀರಶೈವ ಲಿಂಗಾಯತ ಸಮುದಾಯದವರಾಗಿದ್ದು, ತಮ್ಮ ಪುತ್ರನ ಜಾತಿ ಹಾಗೂ ಆದಾಯ ಪ್ರಮಾಣಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯಲ್ಲಿ ಸ್ಪಷ್ಟವಾಗಿ ತಮ್ಮ ಧರ್ಮ ಹಾಗೂ ಜಾತಿಯನ್ನು ಉಲ್ಲೇಖಿಸಿದ್ದರೂ, ಅಧಿಕಾರಿಗಳು ನೀಡಿದ ಪ್ರಮಾಣಪತ್ರದಲ್ಲಿ ‘ಮುಸ್ಲಿಂ’ ಎಂಬ ಜಾತಿ ಬರೆದು ನೀಡಿದ್ದಾರೆ.

ಇದರಿಂದಾಗಿ ಪ್ರಾಮಾಣಿಕವಾಗಿ ಶಿಕ್ಷಣ ಸಹಾಯಧನ ಮತ್ತು ಸೌಲಭ್ಯಗಳನ್ನು ಪಡೆಯಲು ಯತ್ನಿಸುತ್ತಿದ್ದ ಮಹಾಂತಪ್ಪ ಪುತ್ರನ ಭವಿಷ್ಯ ದಿಕ್ಕು ತಪ್ಪುವ ಸ್ಥಿತಿ ಉಂಟಾಗಿದೆ. ಈ ಭೂಲನ್ನು ತಕ್ಷಣ ಸರಿಪಡಿಸಲು ಅವರು ಸಂಬಂಧಿತ ಅಧಿಕಾರಿಗಳ ಗಮನ ಸೆಳೆದರೂ ಯಾವುದೇ ಸ್ಪಂದನೆ ದೊರೆತಿಲ್ಲ ಎಂಬುದು ಕುಟುಂಬದ ಆಕ್ಷೇಪ.

ಮಹಾಂತಪ್ಪ ಕೊತ್ಲೆ ಅವರು ಈ ಸಂಬಂಧವಾಗಿ ಸ್ಪಷ್ಟನೆ ನೀಡಿ, “ನಾನು ಹಾಗೂ ನನ್ನ ಕುಟುಂಬವು ಪೂರ್ತಿಯಾಗಿ ಹಿಂದು ಧರ್ಮದವರಿಗೆ ಸೇರಿದವರಾಗಿದ್ದರೂ, ನಮ್ಮ ಮಗನಿಗೆ ಮುಸ್ಲಿಂ ಎಂದು ಪ್ರಮಾಣಪತ್ರ ನೀಡಿರುವುದು ಭಾರೀ ಆತಂಕದ ವಿಷಯವಾಗಿದೆ. ಈ ಪ್ರಮಾಣಪತ್ರದಿಂದ ಉಂಟಾಗುವ ಶೈಕ್ಷಣಿಕ ಸಮಸ್ಯೆಗಳಿಗೆ ಯಾರು ಹೊಣೆ?” ಎಂದು ಪ್ರಶ್ನಿಸಿದ್ದಾರೆ.

ಈ ಘಟನೆ ಸರಕಾರದ ಡಿಜಿಟಲ್ ವ್ಯವಸ್ಥೆಗಳಲ್ಲಿನ ದೋಷಗಳನ್ನೂ ತೋರಿಸುತ್ತದೆ. ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಮಾಹಿತಿ ಪರಿಶೀಲನೆಗೆ ತ್ಯಜಿಸಿದ್ದ ಜವಾಬ್ದಾರಿ ಈ ರೀತಿಯ ಗಂಭೀರ ತಪ್ಪುಗಳಿಗೆ ಕಾರಣವಾಗುತ್ತಿದೆ.

ಸ್ಥಳೀಯರು ಈ ಘಟನೆಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ್ದು, ಸಂಬಂಧಿತ ಅಧಿಕಾರಿಗಳ ವಿರುದ್ಧ ಕ್ರಮ ಜರಗಿಸುವಂತೆ ಹಾಗೂ ತಪ್ಪು ಪ್ರಮಾಣಪತ್ರವನ್ನು ತಕ್ಷಣ ಸರಿಪಡಿಸುವಂತೆ ಒತ್ತಾಯಿಸುತ್ತಿದ್ದಾರೆ.

nazeer ahamad

Recent Posts

ಕುಡಿತದ ದುರಂತ ಅಂತ್ಯ: ಆಸ್ತಿ ಹಣದ ಜಗಳಕ್ಕೆ ತಾಯಿಯನ್ನೇ ಕೊಂದ ಮಗಳು-ಮೊಮ್ಮಗ!

ಬೆಂಗಳೂರು ನಗರದ ಕೆಂಗೇರಿ ಠಾಣಾ ವ್ಯಾಪ್ತಿಯ ಸುಭಾಷ್ ನಗರದಲ್ಲಿ ನಡೆದ ಭೀಕರ ಘಟನೆ ಒಂದು ಕುಟುಂಬದ ದುಸ್ಥಿತಿಯನ್ನು ಬಯಲಿಗೆಳೆದಿದೆ. ಮದ್ಯಪಾನದ…

2 hours ago

ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ: ಪ್ರೌಢಶಾಲಾ ಶಿಕ್ಷಕಿ ಬಂಧನ

ಅಮೆರಿಕದ ಜಾರ್ಜಿಯಾ ರಾಜ್ಯದಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ಪ್ರೌಢಶಾಲಾ ಶಿಕ್ಷಕಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ…

2 hours ago

ಬಿಡದಿ ಟೌನ್‌ಶಿಪ್‌ ವಿರೋಧ ನಾಟಕ: ಅಲ್ಲಿ ಅನಿತಾ ಕುಮಾರಸ್ವಾಮಿ 100 ಎಕರೆ ಜಮೀನಿದೆ, ಕುಮಾರಸ್ವಾಮಿ ವಿರುದ್ಧ ಎಂ.ಬಿ. ಪಾಟೀಲ್ ವಾಗ್ದಾಳಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

5 hours ago

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಆರ್‌ಡಿಪಿಆರ್ ಎಇಇ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಇಲಾಖೆಯ ಸಹಾಯಕ…

5 hours ago

ಸಚಿವ ಸತೀಶ್ ಜಾರಕಿಹೊಳಿ ಅಳಿಯ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಮನೆ ಸೇರಿ 6 ಕಡೆ ಇಡಿ ದಾಳಿ

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…

5 hours ago

ಮದುವೆಗೆ ಕೆಲವೇ ದಿನ ಬಾಕಿ… ಭಾವಿ ಪತ್ನಿಯಿಂದಲೇ 400 ಅಡಿ ಕಣಿವೆಗೆ ತಳ್ಳಿ ಹತ್ಯೆ!

ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…

5 hours ago