ಹರಿಹರ: ರೈತ ಮಹಿಳೆಯ ಜಮೀನಿನ ಸರ್ವೇ ಸ್ಕೆಚ್ ತಯಾರಿಸಿ ನೀಡಲು ಲಂಚಕ್ಕೆ ಬೇಡಿಕೆ ಇಟ್ಟ ಆರೋಪದಡಿ ಹರಿಹರ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯ ಸರ್ವೇ ಸೂಪರ್ವೈಸರ್ ರಾಮಪ್ಪ ಅಡಿವೆಪ್ಪ ದಾಸರ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಲೆಗೆ ಬೀಳಿಸಿದ್ದಾರೆ. ಇದೇ ಪ್ರಕರಣದಲ್ಲಿ ಸರ್ಕಾರದ ಪರವಾನಗಿ ಪಡೆದ ಸರ್ವೆಯರ್ ಆನಂದಪ್ಪ ಅವರನ್ನೂ ಬಂಧಿಸಲಾಗಿದೆ.
ಹರಿಹರ ತಾಲ್ಲೂಕಿನ ಜಿಗಳಿ ಗ್ರಾಮದ ರೈತ ಮಹಿಳೆ ಶೋಭಾ ಅವರು, ಸರ್ವೇ ನಂ. 68/3ರಲ್ಲಿ ಇರುವ ಜಮೀನಿನ 11ಇ ಸರ್ವೇ ಸ್ಕೆಚ್ ಸಿದ್ಧಪಡಿಸಿ ನೀಡುವಂತೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿದ್ದರು. ಈ ಕೆಲಸಕ್ಕಾಗಿ ಸರ್ವೇ ಸೂಪರ್ವೈಸರ್ ರಾಮಪ್ಪ ದಾಸರ್ ₹6 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.
ಲಂಚ ನೀಡಲು ನಿರಾಕರಿಸಿದ ಶೋಭಾ ಅವರು ತಮ್ಮ ಸಂಬಂಧಿ ಕೆ.ಪಿ. ರುದ್ರೇಶ್ ಅವರಿಗೆ ವಿಷಯ ತಿಳಿಸಿದ್ದು, ಅವರು ಲೋಕಾಯುಕ್ತ ಕಚೇರಿಗೆ ದೂರು ಸಲ್ಲಿಸಿದ್ದರು. ದೂರಿನ ಮೇರೆಗೆ ಲೋಕಾಯುಕ್ತ ಎಸ್ಪಿ ಕೌಲಪುರೆ ನೇತೃತ್ವದ ತಂಡ ಬಲೆ ಬೀಸಿ, ಶನಿವಾರ ಬೆಳಿಗ್ಗೆ ತಹಸೀಲ್ದಾರ್ ಕಚೇರಿ ಆವರಣದಲ್ಲಿ ರಾಮಪ್ಪ ದಾಸರ್ ₹5 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಬಂಧಿಸಿದೆ.
ತನಿಖೆ ವೇಳೆ ಸರ್ಕಾರದ ಪರವಾನಗಿ ಪಡೆದ ಸರ್ವೆಯರ್ ಆನಂದಪ್ಪ ಅವರು ತಮ್ಮ ಪತ್ನಿ ಸುನಿತಾ ಅವರ ಫೋನ್ಪೇ ಖಾತೆಗೆ ₹7 ಸಾವಿರ ವರ್ಗಾಯಿಸಿಕೊಳ್ಳುವ ಮೂಲಕ ಲಂಚ ಸ್ವೀಕರಿಸಿರುವುದು ಬೆಳಕಿಗೆ ಬಂದಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.
ಲಂಚ ಸ್ವೀಕರಿಸಿದ ಆರೋಪದಡಿ ರಾಮಪ್ಪ ದಾಸರ್ ಹಾಗೂ ಆನಂದಪ್ಪ ಇಬ್ಬರನ್ನೂ ಬಂಧಿಸಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ. ದಾಳಿಯಲ್ಲಿ ಡಿವೈಎಸ್ಪಿ ಮೃತ್ಯುಂಜಯ, ಸಿಪಿಐ ಗುರುಬಸವರಾಜ ಹಾಗೂ ಪಿಎಸ್ಐ ಸರಳಾ ಸೇರಿದಂತೆ ಲೋಕಾಯುಕ್ತ ಅಧಿಕಾರಿಗಳು ಭಾಗವಹಿಸಿದ್ದರು.
ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…
ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…
ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…
ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…
ತಮಿಳುನಾಡಿನ ಚೆನ್ನೈನಲ್ಲಿ ಮಹಿಳೆಯೊಬ್ಬರನ್ನು ಭೀಕರವಾಗಿ ಹತ್ಯೆಗೈದು, ಆಕೆಯ ದೇಹದ ಭಾಗಗಳನ್ನು ಬಳಸಿ ಬಿರಿಯಾನಿ ತಯಾರಿಸಿರುವ ಆರೋಪ ಕೇಳಿಬಂದಿದ್ದು, ಇಡೀ ಪ್ರಕರಣವೇ…
ಚನ್ನರಾಯಪಟ್ಟಣ: ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಅಂಬಿಕ ನಗರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಕುಟುಂಬಸ್ಥರು…